ಆ್ಯಪ್ನಗರ

ಹಿರೀಸಾವೆ: ಕಾರಿನಲ್ಲಿ ಸುಟ್ಟು ಕರಕಲಾದ ಶವ ಪತ್ತೆ, ಕೊಲೆ ಶಂಕೆ

ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾಗಿರುವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು , ಯಾವುದೋ ದುರುದ್ದೇಶದಿಂದ ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಪೆಟ್ರೋಲ್ ಅಥವಾ ಸೀಮೆ ಎಣ್ಣೆ ಹಾಕಿ ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಸುಟ್ಟು ಹಾಕಿರುತ್ತಾರೆಂದು ರಮೇಶ್ ದೂರು ನೀಡಲಾಗಿದೆ.

Vijaya Karnataka Web 28 Oct 2020, 10:39 pm
ಹಿರೀಸಾವೆ: ಅಪರಿಚಿತ ಕಾರಿನಲ್ಲಿ ಅಪರಿಚಿತ ವ್ಯಕ್ತಿವೋರ್ವನ ಸುಟ್ಟು ಕರಕಲಾಗಿರುವ ಶವ ಪತ್ತೆಯಾಗಿದ್ದು, ಕೊಲೆಮಾಡಿ ಸುಟ್ಟು ಹಾಕಿರಬಹುದು ಎಂದು ಶಂಕಿಸಲಾಗಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆ ಗ್ರಾಮ ಎಸ್.ಬೆಳಗೊಳ ಹೋಬಳಿಯ ವಾಸಿ ರಮೇಶ್ ದಿನನಿತ್ಯದಂತೆ ಅ.28 ರಂದು ಬೆಳಗ್ಗೆ ಎದ್ದು ಜಮೀನಿನ ಹತ್ತಿರ ವ್ಯವಸಾಯಕ್ಕೆಂದು ತೆರಳುತ್ತಿದ್ದಾಗ ಜಮೀನಿಗೆ ಹೋಗುವ ಮಧ್ಯ ದಾರಿಯಲ್ಲಿ ಯಾವುದೋ ಅಪರಿಚಿತ ಕಾರು ಸಂಪೂರ್ಣ ಸುಟ್ಟು ಹೋಗಿರುವ ದೃಶ್ಯ ಕಂಡು ಬಂದ ಹಿನ್ನೆಲೆಯಲ್ಲಿ ಹತ್ತಿರ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾಗಿರುವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು , ಯಾವುದೋ ದುರುದ್ದೇಶದಿಂದ ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಪೆಟ್ರೋಲ್ ಅಥವಾ ಸೀಮೆಎಣ್ಣೆ ಹಾಕಿ ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಸುಟ್ಟು ಹಾಕಿರುತ್ತಾರೆಂದು ರಮೇಶ್ ದೂರು ನೀಡಲಾಗಿದೆ.

ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ