ಆ್ಯಪ್ನಗರ

ಬಜೆಟ್‌: ಮಹಿಳಾ ಸಬಲೀಕರಣಕ್ಕೆ ಆದ್ಯತೆ ಇಲ್ಲ

ಕೇಂದ್ರ ಸರಕಾರ ಆರು ಸಾವಿರ ಹಣ ನೀಡಿ ಮೂಗಿಗೆ ತುಪ್ಪ ಸವರುವ ಮುಖಾಂತರ ಚುನಾವಣೆ ಹೊಸ್ತಿಲಲ್ಲಿ ಬಿಟ್ಟಿ ಪ್ರಚಾರ ತೆಗೆದುಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಟೀಕಿಸಿದರು.

Vijaya Karnataka 2 Feb 2019, 5:00 am
ಹಾಸನ: ಕೇಂದ್ರ ಸರಕಾರ ಆರು ಸಾವಿರ ಹಣ ನೀಡಿ ಮೂಗಿಗೆ ತುಪ್ಪ ಸವರುವ ಮುಖಾಂತರ ಚುನಾವಣೆ ಹೊಸ್ತಿಲಲ್ಲಿ ಬಿಟ್ಟಿ ಪ್ರಚಾರ ತೆಗೆದುಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಟೀಕಿಸಿದರು.
Vijaya Karnataka Web no priority to women empowerment
ಬಜೆಟ್‌: ಮಹಿಳಾ ಸಬಲೀಕರಣಕ್ಕೆ ಆದ್ಯತೆ ಇಲ್ಲ


ಹಾಸನ ಜಿಲ್ಲೆಯ ಬೇಲೂರು ಮತ್ತು ಅರಸೀಕೆರೆ ತಾಲೂಕುಗಳಲ್ಲಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಅರಸೀಕೆರೆ ತಾಲೂಕಿನ ಮೊಸಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ದೇಶದಲ್ಲಿ ಹೆಣ್ಣು ಮಕ್ಕಳಿದ್ದಾರೆ ಎಂದು ಕೇಂದ್ರ ಸರಕಾರಕ್ಕೆ ಅರಿವೇ ಇಲ್ಲ. ಹೆಣ್ಣುಮಕ್ಕಳ ಸಬಲೀಕರಣಕ್ಕೆ ಯಾವುದೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿಲ್ಲ ಎಂದರು.

ಕೇಂದ್ರ ಸರಕಾರ ಎಲ್ಲ ಯೋಜನೆಗಳನ್ನು ಜಾರಿ ಮಾಡಿ ಕೊನೆಗೆ ರಾಜ್ಯದ ಹೆಗಲಿಗೆ ಹಾಕಿ ಓಡಿ ಹೋಗುತ್ತಾರೆ. ಕೇಂದ್ರ ಬಜೆಟ್‌ ಜನಪರವಾಗಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೂ ಈ ಬಜೆಟ್‌ನಲ್ಲಿ ಏನೂ ಕೊಡುಗೆ ಕೊಟ್ಟಿಲ್ಲ. ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಿದೆ. ಬರ ಹಿನ್ನೆಲೆಯಲ್ಲಿ ಕುಡಿಯುವ ನೀರು ಉದ್ಯೋಗ ಖಾತ್ರಿ ವೇತನ ಹೆಚ್ಚಳಕ್ಕೆ ಜನರು ಒತ್ತಾಯಿಸುತ್ತಿದ್ದಾರೆ. ಆದರೆ, ಕೇಂದ್ರ ಬಜೆಟ್‌ನಲ್ಲಿ ಇದ್ಯಾವುದಕ್ಕೂ ಒತ್ತು ನೀಡಿಲ್ಲ. ಹಾಸನ ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ತಾಲೂಕಿನಲ್ಲಿ ನುಸಿ ರೋಗಕ್ಕೆ ತುತ್ತಾಗಿರುವ ತೆಂಗು ಬೆಳೆಗೆ ಯಾವುದೇ ಪರಿಹಾರ ಘೋಷಣೆ ಮಾಡಿರುವುದು ರೈತರಿಗೆ ಅನ್ಯಾಯ ಮಾಡಿದಂತಾಗಿದೆ.

ನಮ್ಮ ಸರಕಾರ ಈಗಾಗಲೇ ನಲವತ್ತು ಲಕ್ಷ ರೈತರ ಎರಡು ಲಕ್ಷ ರೂವರೆಗಿನ ಸಾಲ ಮನ್ನಾ ಮಾಡಿದೆ. ಕೇಂದ್ರ ಸರಕಾರವು 20 ಲಕ್ಷ ಸಾಲಮನ್ನಾ ಮಾಡಲು ಆಗುವುದಿಲ್ಲವೇ ಎಂದು ಆರೋಪಿಸಿದರು. ಕೇಂದ್ರ ಸರಕಾರ ಮಾತ್ರ 2 ಹೆಕ್ಟೇರ್‌ ಗಿಂತ ಕಡಿಮೆ ಇರುವವರಿಗೆ ಆರು ಸಾವಿರ ಹಣ ನೀಡುತ್ತೇವೆ ಎಂದು ಮೂಗಿಗೆ ತುಪ್ಪ ಸವರಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ