ಆ್ಯಪ್ನಗರ

ಪಟ್ಟಣ ಸ್ವಚ್ಛತೆಗೆ ಸಹಕಾರ ಅವಶ್ಯ

ವಿಶ್ವ ಭೂಪಟದಲ್ಲಿ ರಾರಾಜಿಸುತ್ತಿರುವ ಬೇಲೂರು ಪಟ್ಟಣವು ಪೂರ್ಣ ಪ್ರಮಾಣದಲ್ಲಿ ಸ್ವಚ್ಛತೆಯಿಂದ ಕೂಡಿರಬೇಕು. ಪ್ರತಿಯೊಬ್ಬರೂ ಇದಕ್ಕೆ ಪೂರಕವಾದ ವಾತಾವರಣ ಸಷ್ಟಿ ಮಾಡುವ ಅಗತ್ಯವಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಶಶಿಧರ್ ಎಂ.ಗೌಡ ಹೇಳಿದರು.

Vijaya Karnataka 5 Oct 2019, 9:45 pm
ಬೇಲೂರು: ವಿಶ್ವ ಭೂಪಟದಲ್ಲಿ ರಾರಾಜಿಸುತ್ತಿರುವ ಬೇಲೂರು ಪಟ್ಟಣವು ಪೂರ್ಣ ಪ್ರಮಾಣದಲ್ಲಿ ಸ್ವಚ್ಛತೆಯಿಂದ ಕೂಡಿರಬೇಕು. ಪ್ರತಿಯೊಬ್ಬರೂ ಇದಕ್ಕೆ ಪೂರಕವಾದ ವಾತಾವರಣ ಸಷ್ಟಿ ಮಾಡುವ ಅಗತ್ಯವಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಶಶಿಧರ್ ಎಂ.ಗೌಡ ಹೇಳಿದರು.
Vijaya Karnataka Web HSN 5BLRP-2_16


ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ನಿವತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ, ಕಾನೂನು ಅರಿವು ನೆರವು ಕಾರ‌್ಯಕ್ರಮ, ಮಹಾತ್ಮಗಾಂಧಿ, ಲಾಲ್ ಬಹುದ್ದೂರ್ ಶಾಸಿ ಜಯಂತಿ, 66ನೇ ತಿಂಗಳ ಮನೆ ಮನೆ ಸಾಹಿತ್ಯಗೋಷ್ಠಿ ಹಾಗೂ ಸನ್ಮಾನ ಕಾರ‌್ಯಕ್ರಮದಲ್ಲಿ ಮಾತನಾಡಿದರು.

‘‘ಉತ್ತಮ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಎಚ್ಚರವಹಿಸಬೇಕಿದೆ. ವತ್ತಿಯಿಂದ ನಿವತ್ತರಾದ ಹಿರಿಯರು, ಮಕ್ಕಳ ಮೇಲಿನ ಮಮತೆಯಿಂದ ತಮ್ಮೆಲ್ಲಾ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆದು ನಂತರ ಪಶ್ಚಾತಾಪ ಪಡುವುದನ್ನು ನೋಡಿದ್ದೇವೆ. ಇಂತಹ ಸ್ಥಿತಿ ಬಾರದಂತೆ ಎಚ್ಚರ ವಹಿಸಬೇಕು, ಎಂದರು.
‘‘ಹಿರಿಯ ನಾಗರಿಕರು ಕೌಟುಂಬಿಕವಾಗಿ ಕೆಲವೊಂದು ಸಮಸ್ಯೆಯನ್ನು ಎದುರಿಸುವ ಸ್ಥಿತಿ ನಿರ್ಮಾಣವಾಗುತ್ತಿದ್ದು, ಸಿವಿಲ್ ಹಾಗೂ ಕ್ರಿಮಿನಲ್ ಮೊಕದ್ದಮೆಗಳು ಇದ್ದಲ್ಲಿ ನಿಯಮದ ಪ್ರಕಾರ ಅಂತಹ ಪ್ರಕರಣಗಳನ್ನು ಶೀಘ್ರ ಬಗೆಹರಿಸಿಕೊಳ್ಳಲು ಮುಂದಾಗಬೇಕು,’’ ಎಂದು ತಿಳಿಸಿದರು.

ಸರಕಾರಿ ಅಭಿಯೋಜಕ ಮೋತಿಲಾಲ್ ಚೌದರಿ ಮಾತನಾಡಿ, ‘‘ ಹಿರಿಯರ ಬಗ್ಗೆ ಪ್ರೀತಿ, ಗೌರವ ಕಡಿಮೆಯಾಗುತ್ತಿವೆ. ಆರ್ಥಿಕ ಸ್ವಾವಲಂಬನೆ ಇಲ್ಲದ ಹಿರಿಯರ ಸ್ಥಿತಿ ಇನ್ನಷ್ಟು ಕಠಿಣವಾಗಿರುತ್ತದೆ. ಇಂತಹವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕಿದೆ,’’ ಎಂದು ಅಭಿಪ್ರಾಯಪಟ್ಟರು.

ವೇಲಾಪುರಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್.ಎಂ.ದಯಾನಂದ್, ನಿವತ್ತ ನೌಕರರ ಸಂಘದ ಅಧ್ಯಕ್ಷ ವೈ.ಎಸ್.ಸಿದ್ದೇಗೌಡ ಮಾತನಾಡಿದರು.
ನಿವತ್ತ ಶಿಕ್ಷಕರೂ ಹಾಗೂ ಹಿರಿಯ ನಾಗರಿಕರಾದ ಸಾ.ರಂ.ಈರೇಗೌಡ, ಚನ್ನೇಗೌಡರು, ಮೊಗಣ್ಣಗೌಡರು, ದ್ಯಾವೇಗೌಡರು, ಆರ್.ಬಿ.ರಾಮೇಗೌಡರು ಇವರನ್ನು ಸನ್ಮಾನಿಸಲಾಯಿತು. ಕಾರ‌್ಯಕ್ರಮದ ಉದ್ಘಾಟನೆಯನ್ನು ಪ್ರಾಯೋಜಕ ಬಿ.ಸಿ.ಆನಂದ್ ನೆರವೇರಿಸಿದರು.

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬೇಲೂರು ಕಷ್ಣಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಜಿ.ಎಂ.ಸಿದ್ದೇಗೌಡ, ಬಿಜಿಎಸ್ ಕಾಲೇಜು ಉಪನ್ಯಾಸಕ ಚಂದ್ರಶೇಖರ್, ಕಸಾಪ ಕಾರ್ಯದರ್ಶಿ ಬೊಮ್ಮಡಿಹಳ್ಳಿ ಕುಮಾರಸ್ವಾಮಿ, ಮ.ಶಿವಮೂರ್ತಿ, ರಾಜೇಗೌಡರು, ಸೌಭಾಗ್ಯ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ