ಆ್ಯಪ್ನಗರ

ಪ್ರಜ್ವಲ್‌ ದಾಖಲೆ ನಿಗದಿತ ಸಮಯದಲ್ಲಿ ಸಲ್ಲಿಕೆ: ಡಿಸಿ

ಹಾಸನ ಲೋಕಸಭೆ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ಅವರ ನಾಮಪತ್ರ, ಚುನಾವಣಾ ವೆಚ್ಚ ದೃಢೀಕರಣ ಪತ್ರವನ್ನು ನ್ಯಾಯಾಲಯದ ಆದೇಶದ ಅನ್ವಯ ನಿಗದಿತ ಸಮಯದಲ್ಲಿ ಅರ್ಜಿದಾರರಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ತಿಳಿಸಿದರು.

Vijaya Karnataka 3 Jul 2019, 5:00 am
ಹಾಸನ: ಹಾಸನ ಲೋಕಸಭೆ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ಅವರ ನಾಮಪತ್ರ, ಚುನಾವಣಾ ವೆಚ್ಚ ದೃಢೀಕರಣ ಪತ್ರವನ್ನು ನ್ಯಾಯಾಲಯದ ಆದೇಶದ ಅನ್ವಯ ನಿಗದಿತ ಸಮಯದಲ್ಲಿ ಅರ್ಜಿದಾರರಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ತಿಳಿಸಿದರು.
Vijaya Karnataka Web prajwal submission in due course dc
ಪ್ರಜ್ವಲ್‌ ದಾಖಲೆ ನಿಗದಿತ ಸಮಯದಲ್ಲಿ ಸಲ್ಲಿಕೆ: ಡಿಸಿ


ನ್ಯಾಯಾಲಯ ಅರ್ಜಿದಾರ ದೇವರಾಜೇಗೌಡ ಎಂಬುವವರಿಗೆ ದೃಢೀಕರಣ ಪ್ರತಿ ನೀಡುವಂತೆ ಸೂಚಿಸಿದೆ. ಅದರಂತೆ ಜಿಲ್ಲಾ ಖಜಾನೆಯಲ್ಲಿ ಇರುವ ದಾಖಲೆಗಳ ಪ್ರತಿಯನ್ನು ನೀಡಲಾಗುವುದು ಎಂದು 'ವಿಜಯ ಕರ್ನಾಟಕ'ಕ್ಕೆ ತಿಳಿಸಿದರು.

ಅರ್ಜಿದಾರರು ಕೇಳಿರುವ ಮಾಹಿತಿಯನ್ನು ಜು.3ರ ಒಳಗೆ ನೀಡಬೇಕು ಎಂದು ಹೈಕೋರ್ಟ್‌ ಆದೇಶ ಮಾಡಿ ಮೂರು ದಿನದ ಗಡುವು ನೀಡಿತ್ತು.

ಸಂಸದ ಪ್ರಜ್ವಲ್‌ ರೇವಣ್ಣ ತಮ್ಮ ನಾಮಪತ್ರ ಸಲ್ಲಿಕೆ ವೇಳೆ ತಾವು ಖಾಸಗಿ ಕಂಪನಿಯಲ್ಲಿ ಹೊಂದಿರುವ ಶೇರು ವಿವರ ಮತ್ತಿತರ ಮಾಹಿತಿಯನ್ನು ಗೌಪ್ಯವಾಗಿರಿಸಿ ವಂಚಿಸಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಎ.ಮಂಜು ಹಾಗೂ ವಕೀಲ ದೇವರಾಜೇಗೌಡ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ