ಆ್ಯಪ್ನಗರ

ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ

ಕನ್ನಡ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿರುವ ನಗರದ ಕೆಐಎಡಿಬಿಯ ಕ್ಲೀನ್‌ಪ್ಯಾಕ್ಸ್‌ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕರವೇ(ಪ್ರವೀಣ್‌ ಕುಮಾರ್‌ಶೆಟ್ಟಿ) ಬಣದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿದರು.

Vijaya Karnataka 6 Nov 2019, 5:00 am
ಹಾಸನ: ಕನ್ನಡ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿರುವ ನಗರದ ಕೆಐಎಡಿಬಿಯ ಕ್ಲೀನ್‌ಪ್ಯಾಕ್ಸ್‌ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕರವೇ(ಪ್ರವೀಣ್‌ ಕುಮಾರ್‌ಶೆಟ್ಟಿ) ಬಣದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿದರು.
Vijaya Karnataka Web news/hasana/protest
ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ


ಕಾರ್ಖಾನೆಯಲ್ಲಿಕನ್ನಡಿಗರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳದೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಕೆಐಎಡಿಬಿ ವೃತ್ತದಿಂದ ನೂರಾರು ಹೋರಾಟಗಾರರು ಮೆರವಣಿಗೆ ನಡೆಸಿದರು.

''ಕಾರ್ಖಾನೆ ಬಳಿ ಧರಣಿ ಕುಳಿತು ಘೋಷಣೆ ಕೂಗಿದರು. ಉತ್ತರ ಭಾರತದ ಅಮಾಯಕ ಕೂಲಿ ಕಾರ್ಮಿಕರನ್ನು ನೇಮಿಸಿಕೊಂಡು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ. ನಿಯಮದ ಅನ್ವಯ ಪಿಎಫ್‌ ಕೂಡ ನೀಡದೆ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಈ ಕೂಡಲೇ ಕಾರ್ಮಿಕರ ಮೇಲಿನ ದೌರ್ಜನ್ಯ ನಿಲ್ಲಿಸಿ, ಸಂಘಟಿತ ವಲಯಕ್ಕೆ ತರಬೇಕು, ಸ್ಥಳೀಯರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಬೇಕು,'' ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕರವೇ ಅಧ್ಯಕ್ಷ ಸತೀಶ್‌ ಪಟೇಲ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ