ಆ್ಯಪ್ನಗರ

ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಪ್ರತಿಭಟನೆ

ಗ್ರಾಮದಲ್ಲಿ 6 ಕಡೆ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರ ಬಗ್ಗೆ ವರ್ಷಗಳಿಂದಲೂ ಅಬಕಾರಿ ಇಲಾಖೆಗೆ ದೂರು ನೀಡುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಗುರುವಾರ ಅಗ್ರಹಾರ ಬೀದಿಯಲ್ಲಿರುವ ಅಬಕಾರಿ ಕಚೇರಿ ಎದುರು ತಾಲೂಕಿನ ಗೋವಿನಕೆರೆ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದರು

Vijaya Karnataka 14 Jun 2019, 5:00 am
ಚನ್ನರಾಯಪಟ್ಟಣ : ಗ್ರಾಮದಲ್ಲಿ 6 ಕಡೆ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರ ಬಗ್ಗೆ ವರ್ಷಗಳಿಂದಲೂ ಅಬಕಾರಿ ಇಲಾಖೆಗೆ ದೂರು ನೀಡುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಗುರುವಾರ ಅಗ್ರಹಾರ ಬೀದಿಯಲ್ಲಿರುವ ಅಬಕಾರಿ ಕಚೇರಿ ಎದುರು ತಾಲೂಕಿನ ಗೋವಿನಕೆರೆ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದರು.
Vijaya Karnataka Web HSN-HSN13CRP5


ಗಂಡಂದಿರು ನಮಗೆ ನೀಡುತ್ತಿರುವ ಕಿರುಕುಳ ತಡೆಯಲಾಗುತ್ತಿಲ್ಲ. ಮನೆಯಲ್ಲಿರುವ ಪಾತ್ರೆಯಿಂದ ಮೊದಲುಗೊಂಡು ಕಟ್ಟಿದ ತಾಳಿಯನ್ನೂ ಕಿತ್ತುಕೊಂಡು ಹೋಗಿ ಕುಡಿಯುವ ತನಕ ತಮ್ಮ ಕುಡಿತದ ಚಟವನ್ನು ಹೆಚ್ಚಿಸಿಕೊಂಡಿದ್ದು, ಹೆಂಡತಿಯರ ಗೋಳು ಹೇಳತೀರದಾಗಿದೆ ಎಂದು ನೋವು ತೋಡಿಕೊಂಡರು.

ಈ ವೇಳೆ ಮಾತನಾಡಿದ ಗ್ರಾಮದ ರತ್ನಮ್ಮ, ಸರೋಜಮ್ಮ, ಶಾರದಮ್ಮ ಹಾಗೂ ವನಜಾಕ್ಷಿ ಇಂತಹ ವಿದ್ಯಮಾನಗಳು ಬಹುತೇಕ ಗ್ರಾಮಗಳಲ್ಲಿ ನಡೆಯುತ್ತಿದೆಯಾದರೂ ಅಬಕಾರಿ ಅಧಿಕಾರಿಗಳು ಮಾತ್ರ ಕಾನೂನು ನೆಪಗಳನ್ನು ಹೇಳಿಕೊಂಡು ಕಣ್ಮುಚ್ಚಿಕುಳಿತಿದ್ದಾರೆ. ಇನ್ನೆಷ್ಟು ದಿನ ನಾವು ಈ ನರಕಯಾತನೆ ಅನುಭವಿಸುವುದು ಎಂದು ಕಣ್ಣೀರಿಟ್ಟರು. ಅಕ್ರಮ ಮಾರಾಟದ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು. ರೈತ ಸಂಘದ ಮುಖಂಡ ಅರಳಾಪುರ ಮಂಜೇಗೌಡ, ರಾಜ್‌ಕುಮಾರ್‌ ಪ್ರತಿಭಟನೆಗೆ ಸಾಥ್‌ ನೀಡಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಅಬಕಾರಿ ಇನ್ಸ್‌ಪೆಕ್ಟರ್‌ ರಘು, ಸಬ್‌ ಇನ್ಸ್‌ಪೆಕ್ಟರ್‌ ದೇವರಾಜಪ್ಪ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಜಯಲಕ್ಷ್ಮಿ ಎಂಬುವರ ಮನೆಯಲ್ಲಿ ದೊರೆತ 8 ಬಾಟಲ್‌ ಮದ್ಯ ವಶಪಡಿಸಿಕೊಂಡು ಅವರ ಮೇಲೆ ಪ್ರಕರಣ ದಾಖಲಿಸಿದರು. ಎರಡು ದಿನದಲ್ಲಿ ಗ್ರಾಮದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಯಂತ್ರಣ ಮಾಡುವುದಾಗಿ ಭರವಸೆ ನೀಡಿದರು. ಆದರೆ, ಪ್ರತಿಭಟನಾನಿರತರು ಇನ್ನೂ 5ಕಡೆ ಮದ್ಯ ಮಾರುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆಗೆ ಮುಂದಾದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ