ಆ್ಯಪ್ನಗರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಿ ನಾಗರಿಕ ಸೇವಾ ಕ್ಷೇತ್ರಕ್ಕೆ ಪ್ರವೇಶಿಸುವಂತೆ ರಾಜ್ಯ ನೇಕಾರ ಒಕ್ಕೂಟಗಳ ಸಂಘದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ್ ತಿಳಿಸಿದರು.

Vijaya Karnataka 24 Aug 2019, 9:35 pm
ಹಾಸನ : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಿ ನಾಗರಿಕ ಸೇವಾ ಕ್ಷೇತ್ರಕ್ಕೆ ಪ್ರವೇಶಿಸುವಂತೆ ರಾಜ್ಯ ನೇಕಾರ ಒಕ್ಕೂಟಗಳ ಸಂಘದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ್ ತಿಳಿಸಿದರು.
Vijaya Karnataka Web HSN-HSN24 M 1


ನಗರದ ಹಾಸನಾಂಬ ಕಲಾಭವನದಲ್ಲಿ ನಡೆದ ನೇಕಾರ ದೇವಾಂಗ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವತ್ತರಿಗೆ ಸನ್ಮಾನ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘‘40 ಲಕ್ಷಕ್ಕೂ ಹೆಚ್ಚು ಸಂಖ್ಯೆ ಇರುವ ದೇವಾಂಗ ಸಮಾಜದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಐಎಎಸ್, ಕೆಎಎಸ್ ಅಧಿಕಾರಿಗಳಿದ್ದು, ಇದು ದೇವಾಂಗ ಸಮಾಜದ ವಿದ್ಯಾರ್ಥಿಗಳು ವೈದ್ಯಕೀಯ ಎಂಜಿನಿಯರಿಂಗ್ ಕ್ಷೇತ್ರಗಳಿಗೆ ಆದ್ಯತೆ ನೀಡಿ ನಾಗರಿಕ ಸೇವಾ ಪರೀಕ್ಷೆಗಳನ್ನು ಕಡೆಗಣಿಸಿರು ವುದನ್ನು ಸೂಚಿಸುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿ ಗಳಿಗೆ ಉಚಿತ ಹಾಸ್ಟೆಲ್ ಸೌಲಭ್ಯ ಹಾಗೂ ಇನ್ನಿತರ ಸೌಲಭ್ಯ ಒದಗಿಸಲು ಪ್ರಯತ್ನಿಸಿದ್ದು, ಇದರ ಸದುಪಯೋಗ ಪಡೆಯಬೇಕು,’’ ಎಂದು ಹೇಳಿದರು.

ದೇವಾಂಗ ನೌಕರರ ಸಂಘದ ಕಾರ್ಯದರ್ಶಿ ಮಂಜೇಶ್ ಜಿ.ಆರ್. ಮಾತನಾಡಿ, ‘‘ರಾಜ್ಯಮಟ್ಟದಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಪುರ ಸ್ಕಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದು, ಇದು ಸಮಾಜದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆ ಯಿಲ್ಲ ಎಂಬು ದನ್ನು ಸೂಚಿಸುತ್ತದೆ. ಉತ್ತಮ ಮಾರ್ಗ ದರ್ಶನ ಹಾಗೂ ಬೆಂಬಲದಿಂದ ಮಕ್ಕಳು ಭವ್ಯ ಭವಿಷ್ಯ ಹೊಂದಲು ಸಾಧ್ಯವಿದೆ,’’ ಎಂದರು.

ಹಾಸನ ಜಿಲ್ಲಾ ದೇವಾಂಗ ನೌಕರರ ಸಂಘದ ಅಧ್ಯಕ್ಷ ಬಿ. ಸೋಮಶೇಖರ್ ಮಾತನಾಡಿ,‘‘ಕಳೆದ ಹದಿನೈದು ವರ್ಷ ಗಳಿಂದ ನಿರಂತರವಾಗಿ ಈ ಕಾರ‌್ಯಕ್ರಮ ವನ್ನು ನಡೆಸಿಕೊಂಡು ಬರುತ್ತಿದ್ದು, ಇದಕ್ಕೆ ಸಮಾಜದ ಹಿರಿಯರ ಪ್ರೋತ್ಸಾಹ ಕಾರಣವಾಗಿದೆ,’’ ಎಂದರು. ವೈದ್ಯಕೀಯ ಪ್ರವೇಶ ಪರೀಕ್ಷೆಯ ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಪಣೀಂದ್ರ ಹಾಗೂ ಇತರೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕಾರ‌್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ವಿ.ಎ.ನಂಜುಂಡ ಸ್ವಾಮಿ, ಸಮಾಜದ ಪ್ರಮುಖರಾದ ಪುರುಷೋತ್ತಮ್, ರಾಜಣ್ಣ, ಪ್ರತಿಭಾ ಪುರಸ್ಕಾರ ಸಮಿತಿಯ ಸಂಚಾಲಕ ಗೊರೂರು ಶಿವೇಶ್, ಸಂಘದ ಪದಾಧಿಕಾರಿ ರಾಮಶೆಟ್ಟಿ, ಧರ್ಮೇಶ್, ಕುಮಾರ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ