ಆ್ಯಪ್ನಗರ

ರಂಜಾನ್‌ ಪ್ರಾರ್ಥನೆಯಲ್ಲಿ ಪ್ರಜ್ವಲ್‌ ಭಾಗಿ

ಜಿಲ್ಲೆ ಹಾಗೂ ದೇಶದ ಕಲ್ಯಾಣಕ್ಕಾಗಿ ಮುಸಲ್ಮಾನ ಜನಾಂಗದವರೊಂದಿಗೆ ರಂಜಾನ್‌ ಪ್ರಾರ್ಥನೆಯಲ್ಲಿ ಭಾಗಿಯಾದೆ ಎಂದು ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ತಿಳಿಸಿದ್ದಾರೆ.

Vijaya Karnataka 6 Jun 2019, 5:00 am
ಬೇಲೂರು: ಜಿಲ್ಲೆ ಹಾಗೂ ದೇಶದ ಕಲ್ಯಾಣಕ್ಕಾಗಿ ಮುಸಲ್ಮಾನ ಜನಾಂಗದವರೊಂದಿಗೆ ರಂಜಾನ್‌ ಪ್ರಾರ್ಥನೆಯಲ್ಲಿ ಭಾಗಿಯಾದೆ ಎಂದು ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ತಿಳಿಸಿದ್ದಾರೆ.
Vijaya Karnataka Web HSN-HSN5BLR2


ಬುಧವಾರ ಸಂಜೆ ಇಲ್ಲಿನ ಮುಸ್ಲಿಮರಿಗಾಗಿ ಆಯೋಜಿಸಿದ ರಂಜಾನ್‌ ಇಫ್ತಿಯಾರ್‌ ಕೂಟದಲ್ಲಿ ಭಾಗವಹಿಸಿ, ಶುಭ ಕೋರಿ ಮಾತನಾಡಿದರು.

ಸಮಾಜದ ಎಲ್ಲ ವರ್ಗದ ಜನರೂ ಒಟ್ಟಾಗಿ ಈ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ, ಪರಸ್ಪರ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂಬ ಆಶಯ ವ್ಯಕ್ತಪಡಿಸಿದರು. ಜಿಲ್ಲಯ ಅಭಿವೃದ್ಧಿಗೆ ಸೌಹಾರ್ದತೆಯ ವಾತಾವರಣ ಅಗತ್ಯವಾಗಿದೆ ಎಂದೂ ಹೇಳಿದರು.

ಜಿಪಂ ಸದಸ್ಯ ಸೈಯದ್‌ತೌಫೀಕ್‌, ಮುಖಂಡರುಗಳಾದ ಅಬ್ದುಲ್‌ ಸುಭಾನ್‌, ಫಾರೂಕ್‌ ಅಹಮದ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಬೇಲೂರು-ಹಳೇಬೀಡು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ಮಂಜುನಾಥ್‌, ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಮಾಲುದ್ದೀನ್‌, ಜಿಪಂ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಎಂ.ಕೆ.ನಾಗೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ