ಆ್ಯಪ್ನಗರ

67 ಕೆಜಿ ಶ್ರೀಗಂಧ ವಶ: ಒಬ್ಬನ ಬಂಧನ

ಪಟ್ಟಣದ ಹೊರವಲಯದಲ್ಲಿರುವ ಬೆಲಸಿಂದ ಅರಣ್ಯಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ.

Vijaya Karnataka 12 Sep 2019, 5:00 am
ಚನ್ನರಾಯಪಟ್ಟಣ: ಪಟ್ಟಣದ ಹೊರವಲಯದಲ್ಲಿರುವ ಬೆಲಸಿಂದ ಅರಣ್ಯಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ.
Vijaya Karnataka Web sandalwood theft one arrested
67 ಕೆಜಿ ಶ್ರೀಗಂಧ ವಶ: ಒಬ್ಬನ ಬಂಧನ


ಒಂದು ಲಕ್ಷ ರೂ. ಬೆಲೆಬಾಳುವ ಸುಮಾರು 67 ಕೆಜಿ ತೂಕದ ಶ್ರೀಗಂಧವನ್ನು ಮರಗಳ್ಳರಿಂದ ವಶಪಡಿಸಿಕೊಂಡಿದ್ದು, ತುರುವೇಕೆರೆ ತಾಲೂಕು ಜಕ್ಕೇನಹಳ್ಳಿಯ ರಂಗಸ್ವಾಮಿ ಎಂಬುವನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಕುಂಕುಮದ ಹೊಸೂರಿನ ರಂಗಯ್ಯ ಮತ್ತು ಕೆಂಪಯ್ಯ ತಪ್ಪಿಸಿಕೊಂಡಿದ್ದು, ಮೂವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್‌ಕುಮಾರ್‌ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಬೆಳಗಿನ ವೇಳೆ ಗಸ್ತಿನಲ್ಲಿದ್ದಾಗ ಮರ ಕಡಿಯುವುದು ಗೊತ್ತಾಗಿದ್ದು, ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ