ಆ್ಯಪ್ನಗರ

ಅನುದಾನ ದುರ್ಬಳಕೆಯಾದರೆ ಅಮಾನತು

ಸರಕಾರದ ಅನುದಾನ ದುರ್ಬಳಕೆ ಕಂಡು ಬಂದರೆ ಅಂತಹ ಸಂಸ್ಥೆ ಹಾಗೂ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಅಮಾನತುಗೊಳಿಸುವುದಾಗಿ ಜಿಲ್ಲಾಧಿಕಾರಿ ಅಕ್ರಂಪಾಷ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Vijaya Karnataka 19 Jul 2019, 5:00 am
ಹಾಸನ: ಸರಕಾರದ ಅನುದಾನ ದುರ್ಬಳಕೆ ಕಂಡು ಬಂದರೆ ಅಂತಹ ಸಂಸ್ಥೆ ಹಾಗೂ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಅಮಾನತುಗೊಳಿಸುವುದಾಗಿ ಜಿಲ್ಲಾಧಿಕಾರಿ ಅಕ್ರಂಪಾಷ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
Vijaya Karnataka Web severe action against corruption
ಅನುದಾನ ದುರ್ಬಳಕೆಯಾದರೆ ಅಮಾನತು


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಮುದಾಯ ಭವನ, ಶಾದಿಮಹಲ್‌ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಹಲವು ವರ್ಷ ಕಳೆದರು ಪೂರ್ಣಗೊಂಡಿಲ್ಲದ ಸಮುದಾಯ ಭವನಗಳ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಜವಾಬ್ದಾರಿಯುತವಾಗಿ ಸಮುದಾಯ ಭವನವನ್ನು ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು. ಮುಖ್ಯವಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಜನಸಾಮಾನ್ಯರಿಗೆ ಕೈಗೆಡುಕುವ ರೀತಿಯಲ್ಲಿ ಬಾಡಿಗೆ ನಿಗದಿ ಮಾಡಬೇಕು ಎಂದರು.

ಶಾದಿ ಮಹಲ್‌ಗಳು ಯಾವುದೇ ಒಂದು ಸಮುದಾಯದ ಬಳಕೆಗೆ ಮಾತ್ರ ಮೀಸಲಿಡಬಾರದು, ಎಲ್ಲಾ ಬಡ ವರ್ಗದವರಿಗೆ ಅನುಕೂಲಕ್ಕಾಗಿ ಒದಗಿಸುವಂತಿರಬೇಕು. ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವುದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.

ಸಮುದಾಯ ಭವನದಿಂದ ಬರುವ ಆದಾಯವನ್ನು ಸಮಾಜ ಸೇವೆಗಾಗಿ, ಸರಕಾರಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕಾಗಿ ಅಥವಾ ಸ್ಮಾರ್ಟ್‌ಕ್ಲಾಸ್‌ಗಳನ್ನು ಒದಗಿಸಲು, ಆಸ್ಪತ್ರೆಗಳಿಗೆ ಸಹಾಯ ಮಾಡುವುದು ಹಾಗೂ ಸರಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 22 ಸಮುದಾಯ ಭವನಗಳಿಗೆ ಅನುಮೋದನೆ ನೀಡಿದ್ದು, ಅದರಲ್ಲಿ ಜೈನ್‌ 3, ಕ್ರಿಶ್ಚಿಯನ್‌ 2, ಮುಸ್ಲಿಂ 3 ಸೇರಿದಂತೆ ಒಟ್ಟು 8 ಭವನಗಳು ಸಂಪೂರ್ಣವಾಗಿ ಮುಗಿದಿದೆ. 6 ಭವನಗಳ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಉಳಿದಂತೆ 14 ಕಾಮಗಾರಿಗಳನ್ನು ಚುರುಕುಗೊಳಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ನಾನಾ ಸಮುದಾಯ ಭವನದ ಕಾರ್ಯದರ್ಶಿಗಳು, ಸದಸ್ಯರು, ವಿವಿಧ ಅಲ್ಪ ಸಂಖ್ಯಾತರ ಸಮುದಾಯಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ