ಆ್ಯಪ್ನಗರ

ಊರಿನಲ್ಲೇ ಸ್ವಂತ ಉದ್ಯೋಗ ಆರಂಭಿಸಿ

ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಪಟ್ಟಣ ಪ್ರದೇಶಗಳತ್ತ ಹೋಗುವುದನ್ನು ಬಿಟ್ಟು ತಮ್ಮ ಸ್ವಂತ ಸ್ಥಳದಲ್ಲೇ ಉದ್ಯೋಗ ಪ್ರಾರಂಭಿಸಿ ಆದಾಯವನ್ನು ಗಳಿಸಬಹುದಾಗಿದೆ ಎಂದು ಜಿಪಂ ಸಿಇಒ ಆರ್.ವೆಂಕಟೇಶ್ ಕುಮಾರ್ ತಿಳಿಸಿದರು.

Vijaya Karnataka Web 10 Mar 2016, 5:17 am
ಹಾಸನ: ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಪಟ್ಟಣ ಪ್ರದೇಶಗಳತ್ತ ಹೋಗುವುದನ್ನು ಬಿಟ್ಟು ತಮ್ಮ ಸ್ವಂತ ಸ್ಥಳದಲ್ಲೇ ಉದ್ಯೋಗ ಪ್ರಾರಂಭಿಸಿ ಆದಾಯವನ್ನು ಗಳಿಸಬಹುದಾಗಿದೆ ಎಂದು ಜಿಪಂ ಸಿಇಒ ಆರ್.ವೆಂಕಟೇಶ್ ಕುಮಾರ್ ತಿಳಿಸಿದರು.
Vijaya Karnataka Web start your own job urinalle
ಊರಿನಲ್ಲೇ ಸ್ವಂತ ಉದ್ಯೋಗ ಆರಂಭಿಸಿ


ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಸಾಲ ಮಂಜೂರಾಗಿ ಉದ್ಯಮಶೀಲತಾ ತರಬೇತಿ ಹೊಂದಿದ 365 ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ‌್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರು ಸ್ವಾವಲಂಭಿಗಳಾಗಿ ರಾಜೀವ್ ಗಾಂಧಿ ಚೈತನ್ಯ ಯೋಜನೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಹೈನುಗಾರಿಕೆ ಯೋಜನೆಯಡಿ ತೊಡಗಿರುವ ಫಲಾನುಭವಿಗಳಿಗೆ ಉದ್ಯೋಗ ಖಾತರಿ ಯೋಜನೆಯ ಒಗ್ಗೂಡುವಿಕೆ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಮಾಡಲು ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮಂಜುನಾಥ ಮಾತನಾಡಿ, ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದಲ್ಲಿ ಹೆಚ್ಚು ಸಾಲವನ್ನು ಪಡೆಯಲು ಅರ್ಹತೆ ಪಡೆಯಬಹುದು. ಇದರಿಂದ ಮುದ್ರಾ ಪ್ರಧಾನಮಂತ್ರಿಗಳ ಯೋಜನೆಯಡಿಯಲ್ಲಿ 10ಲಕ್ಷರೂ.ಗಳ ವರೆಗೆ ಸಾಲ ಪಡೆದು ಘಟಕವನ್ನು ಪ್ರಾರಂಭಿಸಬಹುದಾಗಿದೆ ಎಂದು ತಿಳಿಸಿದರು.

ಕೈಗಾರಿಕಾ ಜಂಟಿ ನಿರ್ದೇಶಕ ಬಿ.ಎಸ್.ಹೆಗ್ಡೆ ಮಾತನಾಡಿದರು.ಯೋಜನಾ ನಿರ್ದೇಶಕ ಸಿದ್ದರಾಜು, ಯೋಜನಾ ಬೆಂಬಲ ಸೇವಾ ಸಂಸ್ಥೆ ವೆಂಕಟರಮಣಪ್ಪ, ಸಿಡಾಕ್ ಸಂಸ್ಥೆ ಉಪನಿರ್ದೇಶಕ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುರುಷೊತ್ತಮ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ