ಆ್ಯಪ್ನಗರ

ಹಾಸ್ಟೆಲ್‌ ಸೀಟು ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ?

17 ವರ್ಷದ ಯುವತಿ ನದಿಯಲ್ಲಿ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.

Vijaya Karnataka 3 Aug 2019, 9:59 am
ಹೊಳೆನರಸೀಪುರ/ಕಿಕ್ಕೇರಿ(ಕೆ.ಆರ್‌.ಪೇಟೆ ತಾ.)
Vijaya Karnataka Web Death


ಕೆ.ಆರ್‌.ಪೇಟೆ ತಾಲೂಕಿನ ಮಂದಗೆರೆ ಸಮೀಪ ಹೇಮಾವತಿ ನದಿಗೆ ಹಾರಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಹಾಸ್ಟೆಲ್‌ನಲ್ಲಿ ಸೀಟು ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪಾಲಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೆ.ಆರ್‌.ಪೇಟೆ ತಾಲೂಕಿನ ವಡ್ಡರಗುಡಿ ಗ್ರಾಮದ ನಾಗರಾಜು ಎಂಬುವರ ಪುತ್ರಿ ರಂಜಿತಾ (17)ಹೊಳೆನರಸೀಪುರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಗುರುವಾರ ಮನೆಯಿಂದ ಕಾಲೇಜಿಗೆ ಹಾಗೂ ಹಾಸ್ಟೆಲ್‌ನಲ್ಲಿ ಸೀಟು ಸಿಗುವುದೇ ಎಂದು ನೋಡಿಕೊಂಡು ಬರುವುದಾಗಿ ಹೇಳಿ ತೆರಳಿದವಳು ವಾಪಸ್‌ ಬಾರದ ಕಾರಣ ಪಾಲಕರು ಕಿಕ್ಕೇರಿ ಪೊಲೀಸ್‌ ಠಾಣೆಗೆ ನಾಪತ್ತೆ ದೂರು ನೀಡಿದ್ದರು.

ಶುಕ್ರವಾರ ಮಂದಗೆರೆ ಸಮೀಪ ಹೇಮಾವತಿ ನದಿಯಲ್ಲಿ ಯುವತಿ ದೇಹ ಪತ್ತೆಯಾಗಿದ್ದು, ಪೊಲೀಸರು ಮಹಜರು ನಡೆಸಿ ಪಾಲಕರಿಗೆ ಶವ ಹಸ್ತಾಂತರಿಸಿದರು.

ನಾಗರಾಜು ಕಡುಬಡವರಾಗಿದ್ದು, ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಮೊದಲ ಪುತ್ರಿ ಮಾನಸಿಕ ಅಸ್ವಸ್ಥೆಯಾಗಿದ್ದು, ಎರಡನೇ ಪುತ್ರಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಮೂರನೇ ಪುತ್ರಿ ರಂಜಿತಾ ಪ್ರಥಮ ಪಿಯುಸಿ ವ್ಯಾಸಂಗ ಮಾಡುವ ಜತೆಗೆ ಬಿಡುವಿನ ವೇಳೆಯಲ್ಲಿ ಅಕ್ಕಿಹೆಬ್ಬಾಳು ರೈಲ್ವೆ ನಿಲ್ದಾಣದಲ್ಲಿ ಹಣ್ಣು ಮಾರಾಟ ಮಾಡಿ ಕುಟುಂಬಕ್ಕೆ ಆರ್ಥಿಕ ಸಹಾಯಮಾಡುತ್ತಿದ್ದಳು. ಓದಿನಲ್ಲಿ ಆಸಕ್ತಿ ಹೊಂದಿದ್ದ ರಂಜಿತಾ ಹಾಸ್ಟೆಲ್‌ನಲ್ಲಿ ಉಚಿತ ಸೀಟು ಪಡೆದು ಪಾಲಕರಿಗೆ ಹೊರೆ ತಪ್ಪಿಸಬೇಕೆಂದು ಹಾಸ್ಟೆಲ್‌ ಪ್ರವೇಶಕ್ಕಾಗಿ ಕಾಯುತ್ತಿದ್ದಳು. ಹಾಸ್ಟೆಲ್‌ ಸೀಟು ಸಿಗುವುದೇ ಎಂದು ನೋಡಿಕೊಂಡು ಬರುವುದಾಗಿ ಹೋದವಳು ನದಿಗೆ ಬಿದ್ದು ಮೃತಪಟ್ಟಿದ್ದಾಳೆ. ಸೀಟು ಸಿಕ್ಕಿಲ್ಲವೆಂದು ಮೃತಪಟ್ಟಿರಬಹುದು ಎಂದು ಆಕೆಯ ಪಾಲಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ