ಆ್ಯಪ್ನಗರ

18ರಂದು ತಾಲೂಕು ಸಾಹಿತ್ಯ ಸಮ್ಮೇಳನ

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ತಾಲೂಕು ಮಟ್ಟದ 8ನೇ ಸಾಹಿತ್ಯ ಸಮ್ಮೇಳನ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿಸೆ.18 ರಂದು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

Vijaya Karnataka 18 Sep 2019, 5:00 am
ಆಲೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ತಾಲೂಕು ಮಟ್ಟದ 8ನೇ ಸಾಹಿತ್ಯ ಸಮ್ಮೇಳನ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿಸೆ.18 ರಂದು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.
Vijaya Karnataka Web taluk literary conference on the 18th
18ರಂದು ತಾಲೂಕು ಸಾಹಿತ್ಯ ಸಮ್ಮೇಳನ


ತಹಸೀಲ್ದಾರ್‌ ಶೀರೀನ್‌ತಾಜ್‌ ರಾಷ್ಟ್ರಧ್ವಜ, ತಾಲೂಕು ಕಸಾಪ ಅಧ್ಯಕ್ಷ ಗಂಗರ ಜಿ.ಆರ್‌.ಶ್ರೀಕಾಂತ್‌ ನಾಡಧ್ವಜ ಮತ್ತು ಕಸಾಪ ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಪರಿಷತ್‌ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಾ.ಪಂ. ಸದಸ್ಯ ನಟರಾಜ್‌ ನಾಕಲಗೂಡು ಉಪಸ್ಥಿತರಿರುತ್ತಾರೆ.

10 ಗಂಟೆಗೆ ನಡೆಯುವ ಸಮ್ಮೇಳನಾಧ್ಯಕ್ಷ ಸಾಹಿತಿ ಕೆ.ಬಿ.ಗುರುಮೂರ್ತಿ ಅವರ ಮೆರವಣಿಗೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೊನ್ನೇಶಕುಮಾರ್‌ ಚಾಲನೆ ನೀಡಲಿದ್ದಾರೆ.

11 ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಸಾಪ ಜಿಲ್ಲಾಗೌರವಾಧ್ಯಕ್ಷ ರವಿ ನಾಕಲಗೂಡು, ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಸಾಹಿತಿ ಎಲ್‌.ಹನುಮಂತಯ್ಯ, ಸಂಸದ ಪ್ರಜ್ವಲ್‌ ರೇವಣ್ಣ ಭಾಗವಹಿಸಲಿದ್ದಾರೆ.

ಶಾಸಕ ಎಚ್‌. ಕೆ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ನಂದಿನಿ, ಉಪ ವಿಭಾಗಾಧಿಕಾರಿ ನಾಗರಾಜು, ನಿ.ಪೂ.ಸಮ್ಮೇಳನಾಧ್ಯಕ್ಷ ಕೊಟ್ರೇಶ್‌ ಎಸ್‌.ಉಪ್ಪಾರ್‌, ಗೌರವಾಧ್ಯಕ್ಷ ಕೆ. ಎಸ್‌. ಮಂಜೇಗೌಡ, ಪರಿಸರವಾದಿ ಎಚ್‌.ಪಿ.ಮೋಹನ್‌, ಜಿ.ಪಂ.ಸದಸ್ಯ ಲೋಕೇಶ್‌, ಎಚ್‌.ಎಸ್‌.ಸುಜಾತಗಣೇಶ್‌, ತಾ.ಪಂ.ಅಧ್ಯಕ್ಷೆ ಉಷಾ ಚಂದ್ರಶೆಟ್ಟಿ, ರಾಜ್ಯ ಸಣ್ಣ ಪತ್ರಿಕೆಗಳ ಒಕ್ಕೂಟದ ಅಧ್ಯಕ್ಷ ಜೆ.ಆರ್‌.ಕೆಂಚೇಗೌಡ, ತಾ. ಪಂ. ಇಒ ಸತೀಶ್‌, ಡಾ.ಯಶವಂತ್‌, ಮುಖ್ಯಾಧಿಕಾರಿ ಕೃಷ್ಣಮೂರ್ತಿ, ವೈದ್ಯಾಧಿಕಾರಿ ಡಾ.ಎಚ್‌.ಆರ್‌.ತಿಮ್ಮಯ್ಯ, ಟಿಎಪಿಸಿಎಂಎಸ್‌ ಅಧ್ಯಕ್ಷ ಕಬ್ಬಿನಹಳ್ಳಿ ಜಗದೀಶ್‌, ಮಾಜಿ ಅಧ್ಯಕ್ಷ ಎಚ್‌., ಸಿ. ನಂದೀಶ್‌, ಶಿವಮೂರ್ತಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ನಡೆಯುವ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಮಾಜಿ ಶಾಸಕ ಎಚ್‌.ಎಂ.ವಿಶ್ವನಾಥ್‌ ವಹಿಸಲಿದ್ದಾರೆ. 3.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ