ಆ್ಯಪ್ನಗರ

ತಾಪಂ ಎದುರು ರೈತರ ಪ್ರತಿಭಟನೆ

ತಾಲೂಕು ಪಂಚಾಯಿತಿ ಕಚೇರಿ ಸೇರಿ ದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ರೈತ ವಿರೋಧಿ ಕಾರ‌್ಯನಿರ್ವಹಿಸು ತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘಟನೆ ಕಾರ‌್ಯಕರ್ತರು ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

Vijaya Karnataka 15 Jul 2019, 8:57 pm
ಬೇಲೂರು: ತಾಲೂಕು ಪಂಚಾಯಿತಿ ಕಚೇರಿ ಸೇರಿ ದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ರೈತ ವಿರೋಧಿ ಕಾರ‌್ಯನಿರ್ವಹಿಸು ತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘಟನೆ ಕಾರ‌್ಯಕರ್ತರು ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web HSN-HSN 15BLRP-1


ತಾಲೂಕು ಪಂಚಾಯಿತಿ ಆಡಳಿತ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ, ‘‘ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಎಲ್ಲಾ ಕೆಲಸಕಾರ್ಯಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಗ್ರಾಪಂ ಇಂದ ಮನೆ, ನಿವೇಶನ ರಹಿತ ಲಾನುಭವಿಗಳ ಆಯ್ಕೆ ಮಾಡುವಲ್ಲಿ ಅಕ್ರಮ ಎಸಗಲಾಗಿದೆ. ನೈಜ ಲಾನುಭವಿಗಳನ್ನು ಕೈಬಿಟ್ಟು ಉಳ್ಳವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಮನೆ ಇಲ್ಲದವರು ಇದೀಗ ಸಂಕಷ್ಟದಲ್ಲಿದ್ದಾರೆ. ಆಯ್ಕೆ ಮಾಡಿರುವ ಪಟ್ಟಿಯಂತೆ ಅನುದಾನ ಬಂದಿದ್ದು, ಮನೆ ಇಲ್ಲದವರು ಕಂಗಾಲಾಗಿದ್ದಾರೆ,’’ಎಂದು ಆರೋಪಿಸಿದರು.

‘‘ಯೋಜನೆ ಪ್ರಕಾರ ಕೆರೆಯ ಕಾಮಗಾರಿ ಮಾಡದೆ ಇರುವುದನ್ನು ಪ್ರಶ್ನಿಸಿದ ರೈತನ ಮೇಲೆ ಎಂಜಿನಿಯರ್ ಒಬ್ಬರು ಹಲ್ಲೆ ನಡೆಸಿದ್ದಾರೆ. ಇಂತಹ ಸ್ಥಿತಿ ನಿರ್ಮಾಣವಾಗಿದ್ದರೂ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದೊಂದು ರೈತ ವಿರೋಧಿ ನೌಕರಶಾಹಿ ಆಡಳಿತ ಆಗಿದೆ. ಅಕ್ರಮದಲ್ಲಿ ಗ್ರಾ.ಪಂ.ಅಧಿಕಾರಿಗಳು ಪಾಲುದಾರರಾಗಿದ್ದಾರೆ ಎಂದು ಆರೋಪಿಸಿದರಲ್ಲದೇ, ಇವರ ಮೇಲೆ ಕ್ರಮ ಕೈಗೊಳ್ಳಬೇಕು,’’ ಎಂದು ಒತ್ತಾಯಿಸಿದರು.

ತಾಲೂಕು ರೈತ ಸಂಘದ ಅಧ್ಯಕ್ಷ ಬೋಗಮಲ್ಲೇಶ್ ಮಾತನಾಡಿ, ‘‘ರೈತರೆಂದರೆ ನೌಕರರು ಹಾಗೂ ಅಧಿಕಾರಿಗಳಿಗೆ ಲೆಕ್ಕಕ್ಕೆ ಇಲ್ಲದಂತಾಗಿದೆ. ಗ್ರಾಮೀಣ ಪ್ರದೇಶದ ಬಡಜನರು ಧ್ವನಿ ಎತ್ತದ ಸ್ಥಿತಿಯಲ್ಲಿ ಅಲ್ಲಿನ ನೌಕರಶಾಹಿ ವರ್ತನೆಯಿದೆ. ಗ್ರಾ.ಪಂ. ಕಾರ್ಯದರ್ಶಿ ಹಾಗೂ ಪಿಡಿಒ ದಂಧೆಯಲ್ಲಿ ತೊಡಗಿದ್ದಾರೆ. ಪ್ರಶ್ನೆ ಮಾಡುವವರ ಬಾಯಿ ಮುಚ್ಚಿಸುವ ಯತ್ನ ನಡೆಯುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಆಗಿರುವ ಅವ್ಯವಹಾರ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕಿದೆ ಎಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಕಚೇರಿಗೆ ಆಗಮಿಸಿದ ತಾ.ಪಂ.ಇಒ ರವಿಕುಮಾರ್ ಅವರನ್ನು ಕಚೇರಿ ಒಳಕ್ಕೆ ಹೋಗಲು ಅವಕಾಶ ನೀಡದೆ ತಡೆದರು. ಸಂದರ್ಭ ಮಾತನಾಡಿದ ಇಒ ರವಿಕುಮಾರ್,‘‘ಗ್ರಾ.ಪಂ.ವ್ಯಾಪ್ತಿಯಲ್ಲಿ ಆಗಿರುವ ನ್ಯೂನ್ಯತೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಉದ್ಯೋಗಖಾತ್ರಿ ಯೋಜನೆಯಲ್ಲಿನ ಅವ್ಯವಹಾರದ ಪರಿಶೀಲನೆ ನೆಡಸಲಾಗುವುದು,’’ ಎಂದು ಭರವಸೆ ನೀಡಿದರು. ಪ್ರಮುಖರಾದ ಕೆ.ಪಿ.ಕುಮಾರ್, ಪುಪ್ಪೇಗೌಡ, ಮಲ್ಲಿಕಾರ್ಜುನ್, ಚಂದ್ರಶೇಖರ್, ಶಿವಪ್ಪ, ಸಚಿನ್ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ