ಆ್ಯಪ್ನಗರ

ಶಿಕ್ಷ ಕರ ಪ್ರತಿಭಟನೆ: ಪ್ರಾಥಮಿಕ ಶಾಲೆಗಳು ಬಂದ್‌

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷ ಕರು ಕೆಲಸದಿಂದ ದೂರ ಉಳಿದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಜಿಲ್ಲೆಯ ಪ್ರಾಥಮಿಕ ಸರಕಾರಿ ಶಾಲೆಗಳಿಗೆ ಅನಧಿಕೃತ ರಜೆ ನೀಡಿದಂತಾಗಿತ್ತು.

Vijaya Karnataka 10 Jul 2019, 5:00 am
ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷ ಕರು ಕೆಲಸದಿಂದ ದೂರ ಉಳಿದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಜಿಲ್ಲೆಯ ಪ್ರಾಥಮಿಕ ಸರಕಾರಿ ಶಾಲೆಗಳಿಗೆ ಅನಧಿಕೃತ ರಜೆ ನೀಡಿದಂತಾಗಿತ್ತು.
Vijaya Karnataka Web HSN-HSN9N5


ನಗರದ ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಎನ್‌.ಆರ್‌.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ, ಬೇಡಿಕೆಗಳನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಜೆ ಪಡೆದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೇವೆ. ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಈ ರೀತಿಯ ಹೋರಾಟ ಅನಿವಾರ್ಯ. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ಕರೆಯ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದೇವೆ. ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷ ಕರನ್ನು ಪದವೀಧರ ಶಿಕ್ಷ ಕರೆಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಕಳೆದ ಮೂರು ವರ್ಷಗಳಿಂದ ಶಿಕ್ಷ ಕರ ವರ್ಗಾವಣೆಯಾಗದೇ ಇರುವುದರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಈ ಪ್ರಕ್ರಿಯೆ ಮುಗಿದ ಬಳಿಕ ಅಕ್ಟೋಬರ್‌ ತಿಂಗಳಲ್ಲಿ ಮತ್ತೊಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು. ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್‌.ಕೆ.ಜಿ ಮತ್ತು ಯು.ಕೆ.ಜಿ. ಆರಂಭಿಸಬೇಕು. ಶಿಕ್ಷ ಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷ ಕರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.

6ನೇ ವೇತನ ಆಯೋಗದ ಅಂತಿಮ ವರದಿ ಶಿಪಾರಸ್ಸಿನ ಪ್ರಕಾರ 10, 15, 20, 25, 30 ವರ್ಷದ ಬಡ್ತಿ ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷ ಕರಿಗೆ ಉಪನಿರ್ದೆಶಕರ ಹುದ್ದೆಯವರೆಗೂ ಬಡ್ತಿ ನೀಡಬೇಕು. ಕೃಪಾಂಕ ಶಿಕ್ಷ ಕರ ಮತ್ತು ನೌಕರರ ಸಮಸ್ಯೆಗಳನ್ನು ನಿವಾರಿಸಬೇಕು ಎಂದರು.

ನಂತರದಲ್ಲಿ ಸೆ.5 ರಂದು ಶಿಕ್ಷ ಕರ ದಿನಾಚರಣೆಯನ್ನು ಬಹಿಷ್ಕರಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ಮಾಡುವ ನಿರ್ಧಾರ ಮಾಡಲಾಗಿದೆ. ನ್ಯಾಯಯುತ ನಮ್ಮ ಬೇಡಿಕೆ ಈಡೇರಿಸುವುದರ ಮೂಲಕ ಸರಕಾರ ನಮ್ಮ ಹೋರಾಟಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷ ಕ ಸಂಘದ ಖಜಾಂಚಿ ಎಂ.ಎಸ್‌. ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ಅಣ್ಣಪ್ಪ, ನಾಯಕರಹಳ್ಳಿ ಮಂಜೇಗೌಡ, ಚೈತ್ರ ಮಂಜೇಗೌಡ, ಕಲ್ಲಹಳ್ಳಿ ಹರೀಶ್‌, ಸರಕಾರಿ ನೌಕರರ ಸಂಘದ ನಿರ್ದೇಶಕರಾದ ರಮೇಶ್‌, ಸದಸ್ಯ ಲಕ್ಷ ್ಮಣ್‌ ಹಾಗೂ ಮತ್ತಿತರ ನೂರಾರು ಶಿಕ್ಷಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ