ಆ್ಯಪ್ನಗರ

ಹೆತ್ತ ತಾಯಿಯ ಕೈ ತುಂಡರಿಸಿದ ಪುತ್ರ

ಕ್ಷುಲ್ಲಕ ಕಾರಣಕ್ಕೆ ಪುತ್ರನೇ ಹೆತ್ತ ತಾಯಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆಕೆಯ ಕೈಯನ್ನು ತುಂಡರಿಸಿರುವ ಘಟನೆ ತಾಲೂಕಿನ ಯಡವರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

Vijaya Karnataka 29 Dec 2018, 5:00 am
ಸಕಲೇಶಪುರ: ಕ್ಷುಲ್ಲಕ ಕಾರಣಕ್ಕೆ ಪುತ್ರನೇ ಹೆತ್ತ ತಾಯಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆಕೆಯ ಕೈಯನ್ನು ತುಂಡರಿಸಿರುವ ಘಟನೆ ತಾಲೂಕಿನ ಯಡವರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
Vijaya Karnataka Web the son who cut off his mothers hand
ಹೆತ್ತ ತಾಯಿಯ ಕೈ ತುಂಡರಿಸಿದ ಪುತ್ರ


ಲಲಿತಮ್ಮ(60) ಪುತ್ರನಿಂದ ಮಾರಣಾಂತಿಕ ಹಲ್ಲೆಗೆ ಒಳಗಾಗಿರುವ ಮಹಿಳೆ. ಈಕೆಯ ಮಗ ದಿಲೀಪ್‌ ಹೀನ ಕೃತ್ಯ ಎಸಗಿರುವ ಆರೋಪಿ. ಕುಡಿದ ಮತ್ತಿನಲ್ಲಿದ್ದ ಈತ ಸಂಜೆ ಸಮಾರು 7 ಗಂಟೆಯ ಸಮಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ತಾಯಿಯೊಂದಿಗೆ ಜಗಳವಾಡಿ, ಉದ್ರೇಕಗೊಂಡು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮಚ್ಚು ಬೀಸಿದ ರಭಸಕ್ಕೆ ಲಲಿತಮ್ಮ ಕೈ ತುಂಡಾಗಿದೆ.

ಗಾಯಾಳುವನ್ನು ಪಟ್ಟಣದ ಸರಕಾರಿ ಕ್ರಾಫರ್ಡ್‌ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಯಸಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ