ಆ್ಯಪ್ನಗರ

ಹಾಸನ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ನದಿ ನೀರಲ್ಲಿ ಈಜಾಡಲು ತೆರಳಿದ್ದ ಐವರು ಯುವಕರ ಪೈಕಿ ಮೂವರು ಕೊಚ್ಚಿ ಹೋದ ಘಟನೆ ಹಾಸನದಲ್ಲಿ ನಡೆದಿದೆ. ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಇಲಾಖೆ ಶೋಧಕಾರ್ಯ ನಡೆಸುತ್ತಿದೆ.

Vijaya Karnataka Web 8 Oct 2019, 7:19 pm
ಹಾಸನ: ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಯಗಚಿ ನದಿಯಲ್ಲಿ ಐವರು ಯುವಕರು ಈಜಲು ತೆರಳಿದ್ದರು. ಈಜಾಡುವ ವೇಳೆ ನದಿ ನೀರಲ್ಲಿ ಐವರು ಕೊಚ್ಚಿ ಹೋಗಿದ್ದು ಈ ಪೈಕಿ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
Vijaya Karnataka Web hasana


ರತನ್ (19), ಮನು (18) ಹಾಗೂ ಭೀಮರಾಜ್ (19) ಯುವಕರು ನೀರಲ್ಲಿ ಕೊಚ್ಚಿ ಹೋಗಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರಿಂದ ರಕ್ಷಿಸಲ್ಪಟ್ಟ ಪ್ರಜ್ವಲ್ ಹಾಗೂ ನುಷ್ ಎಂಬ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನದ ಆಲೂರು ಪಟ್ಟಣಕ್ಕೆ ಕುಡಿಯುವ ನೀರು ಶೇಖರಣೆ ಮಾಡಲು ಯಗಚಿ ನದಿಯಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಮಾಡಲಾಗಿದೆ. ಇಲ್ಲಿಗೆ ಈಜಾಡಲು ಸ್ನೇಹಿತರಾಗಿದ್ದ ಐವರು ಯುವಕರು ಬಂದಿದ್ದರು. ಡ್ಯಾಮ್ ಮೇಲೆ ಏರಿ ಮೇಲಿಂದ ಜಿಗಿದ ಐವರು ನೀರಿನಲ್ಲಿ ಈಜಲು ಪ್ರಯತ್ನಿಸುತ್ತಿದ್ದರು.

ಆದರೆ ನೀರಿನ ರಭಸಕ್ಕೆ ಐವರು ಯುವಕರು ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಇಬ್ಬರು ಯುವಕರು ಈಜು ತರಬೇತಿ ಹೊಂದಿದವರೆ ಆಗಿದ್ದಾರೆ. ಉಳಿದ ಇಬ್ಬರು ಯುವಕರು ನೀರಿನಲ್ಲಿದ್ದ ಗಿಡಗಳನ್ನು ಹಿಡಿದು ತೇಲಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.

ಘಟನೆಯ ಕುರಿತಾಗಿ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಸಂಜೆವರೆಗೂ ಮೃತ ದೇಹಗಳು ಪತ್ತೆಯಾಗಿರುವುದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ