ಆ್ಯಪ್ನಗರ

ಟ್ರ್ಯಾಕ್ಟರ್‌-ಬೈಕ್‌ ಡಿಕ್ಕಿ: ಮೂವರು ಸಾವು

ಅರಕಲಗೂಡು ತಾಲೂಕಿನ ರಾಮನಾಥಪುರ ಸಮೀಪದ ಕಾಟ್ಯಾಳುಬಾರೆ ಬಳಿ ಬೈಕ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಡಿಕ್ಕಿ ಸಂಭವಿಸಿ ಮಹಿಳೆ, ಬಾಲಕ ಸೇರಿದಂತೆ ಮೂವರು ಮೃತಪಟ್ಟರು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಗ್ರಾಮದ ಅಭಿ, ಬೆಣಗಾಲು ಗ್ರಾಮದ ಮಂಜುಳಾ ಹಾಗೂ ಅವರ ಪುತ್ರ ಆಕಾಶ್‌(8) ಮೃತರು.

Vijaya Karnataka 23 Aug 2019, 5:00 am
ಕೊಣನೂರು (ಅರಕಲಗೂಡು) : ಅರಕಲಗೂಡು ತಾಲೂಕಿನ ರಾಮನಾಥಪುರ ಸಮೀಪದ ಕಾಟ್ಯಾಳುಬಾರೆ ಬಳಿ ಬೈಕ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಡಿಕ್ಕಿ ಸಂಭವಿಸಿ ಮಹಿಳೆ, ಬಾಲಕ ಸೇರಿದಂತೆ ಮೂವರು ಮೃತಪಟ್ಟರು.
Vijaya Karnataka Web tractor bike collision three death
ಟ್ರ್ಯಾಕ್ಟರ್‌-ಬೈಕ್‌ ಡಿಕ್ಕಿ: ಮೂವರು ಸಾವು


ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಗ್ರಾಮದ ಅಭಿ, ಬೆಣಗಾಲು ಗ್ರಾಮದ ಮಂಜುಳಾ ಹಾಗೂ ಅವರ ಪುತ್ರ ಆಕಾಶ್‌(8) ಮೃತರು.

ಅಭಿ ರಾಮನಾಥಪುರದಲ್ಲಿ ಕೆಲಸ ಮುಗಿಸಿಕೊಂಡು ಬೈಕಿನಲ್ಲಿ ಸ್ವಗ್ರಾಮ ಬೆಟ್ಟದಪುರಕ್ಕೆ ಹೋಗುವಾಗ ಮಾರ್ಗ ಮಧ್ಯೆ ಮಂಜುಳಾ ಅವರು ಪುತ್ರನೊಂದಿಗೆ ಬೈಕ್‌ ಬೈಕ್‌ ತಡೆದು, ಬೆಟ್ಟದಪುರಕ್ಕೆ ಹೋಗಲು ಯಾವುದೇ ವಾಹನ ಸಿಕ್ಕಿಲ್ಲ, ತಮ್ಮನ್ನು ಬೆಟ್ಟದಪುರಕ್ಕೆ ಬಿಡುವಂತೆ ಕೇಳಿಕೊಂಡಿದ್ದಾರೆ. ಆಗ ಅಭಿ ಅವರಿಬ್ಬರನ್ನೂ ಬೈಕಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಕಾಟ್ಯಾಳುಬಾರೆ ಸಮೀಪ ಅತಿವೇಗವಾಗಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಚಾಲಕ ಏಕಾಏಕಿ ಬ್ರೇಕ್‌ ಹಾಕಿದ್ದರಿಂದ ಹಿಂಬದಿಯಿಂದ ಟ್ರಾಕ್ಟರ್‌ಗೆ ಬೈಕ್‌ ಡಿಕ್ಕಿಯಾಗಿದೆ. ತೀವ್ರ ರಕ್ತಸ್ರಾವದಿಂದ ಅಭಿ ಮತ್ತು ಆಕಾಶ್‌ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ಆಂಬ್ಯುಲೆನ್ಸ್‌ ಮೂಲಕ ಕೊಣನೂರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕೊಣನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ