ಪ್ರತಿ ತಾಲೂಕಿನಲ್ಲಿ ಜನಸಂಪರ್ಕ ಸಭೆ ನಡೆಸಿ ಕುಂದು ಕೊರತೆ ಅರ್ಜಿ ಸ್ವೀಕಾರ: ಡಿಸಿ
ಹಾಸನ: ಅರಸೀಕೆರೆ ತಾಲೂಕು ಜೆ.ಸಿ. ಪುರದಲ್ಲಿ ನಡೆದ ಜನಸಂಪರ್ಕ ಸಭೆ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ, ಕಿರಿಯ ಅಧಿಕಾರಿಗಳು, ಕ್ಷೇತ್ರದ ಶಾಸಕರೂ ಅಧಿಕಾರಿಗಳೊಂದಿಗೆ ವಾಸ್ತವ್ಯ ಮಾಡುವ ಮೂಲಕ ಆಡಳಿತ ಸುಧಾರಣೆಗೆ ಮುಂದಾದ ಪ್ರಯತ್ನಕ್ಕೆ ಜನಸ್ಪಂದನೆ ವ್ಯಕ್ತವಾಯಿತು.
ಜಿಲ್ಲಾಧಿಕಾರಿ ಅಕ್ರಂ ಪಾಷ ಅವರ ನೇತೃತ್ವದ ಅಧಿಕಾರಿಗಳ ತಂಡಕ್ಕೆ ತಡರಾತ್ರಿವರೆಗೂ ಸಾವಿರಾರು ಜನರು ತಮ್ಮ ಅಹವಾಲುಗಳನ್ನು ತೋಡಿಕೊಂಡರು. ಸಾಮಾಜಿಕ ಭದ್ರತಾ ಯೋಜನೆ, ಪಹಣಿ ಸಮಸ್ಯೆ ಇತ್ಯಾದಿಗಳನ್ನು ಪಡೆಯುವಿಕೆಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ಗ್ರಾಮಸ್ಥರು ತಂದರು.
ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಂ. ಶಿವಲಿಂಗೇಗೌಡ, ''ಅಧಿಕಾರಿಗಳ ಗ್ರಾಮವಾಸ್ತವ್ಯ ಕ್ಷೇತ್ರದ ಜನರ ಪಾಲಿಗೆ ವರವಾಗಿದೆ. ಇದರಿಂದ ಅನೇಕ ಸಮಸ್ಯೆಗಳು ಸ್ಥಳದಲ್ಲೇ ಬಗೆಹರಿಯಲಿದೆ. ಅಲ್ಲದೆ ಅಧಿಕಾರಿಗಳಿಗೆ ಸ್ಥಳೀಯ ಸಮಸ್ಯೆಗಳ ಅರಿವಾಗಲಿದೆ,'' ಎಂದು ಅಭಿಪ್ರಾಯಪಟ್ಟರು.
''ಅರಸೀಕೆರೆ ತಾಲೂಕಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದೆ. ಎತ್ತಿನ ಹೊಳೆ ಯೋಜನೆ ನೀರನ್ನೂ ಕ್ಷೇತ್ರಕ್ಕೆ ತರಲು ನಡೆಸಿದ ಪ್ರಯತ್ನವೂ ಫಲ ನೀಡುವ ಹಾದಿಯಲ್ಲಿದೆ. ಆದರೆ ಬೇಲೂರಿನಲ್ಲಿ ಭೂಸ್ವಾದೀನ ಪ್ರಕ್ರಿಯೆ ಚುರುಕಾಗಬೇಕು. ಇದರಿಂದ ಕ್ಷೇತ್ರದ ನೀರಿನ ಬವಣೆ ಸಂಪೂರ್ಣ ಕಡಿಮೆಯಾಗಲಿದೆ,''ಎಂದರು.
ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಮಾತನಾಡಿ, ''ಜಿಲ್ಲೆಯಲ್ಲಿ ಭೂಮಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚು ಹೆಚ್ಚು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಾಮಾನ್ಯರ ಸಂಕಷ್ಟಗಳನ್ನು ಪರಿಹರಿಸಬೇಕು,'' ಎಂದರು.
ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿ, ''ಜನರ ಬಳಿಗೆ ಹೋಗಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಬಗೆಹರಿಸುವುದು ಕಾರ್ಯಕ್ರಮದ ಆಶಯ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ನೆರವು, ಸಹಕಾರ ನೀಡಲಾಗುವುದು. ಕಂದಾಯ ಇಲಾಖೆಗೆ ಸಂಬಂಧಿಸಿದ ಭೂ ದಾಖಲೆಗಳು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸೂಚನೆ ನೀಡಲಾಗಿದೆ,''ಎಂದು ತಿಳಿಸಿದರು.
''ಪ್ರತಿ ತಾಲೂಕುಗಳಲ್ಲಿ ಜನ ಸಂಪರ್ಕ ಸಭೆ ನಡೆಸಿ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆದಷ್ಟು ಸ್ಥಳದಲ್ಲೇ ಸಮಸ್ಯೆ ಬಗೆಹರಿಸಲಾಗುವುದು, ಉಳಿದವುಗಳನ್ನು ಕಾಲಮಿತಿಯೊಳಗೆ ಬಗೆ ಹರಿಸಲಾಗುವುದು,''ಎಂದರು.
ಜಿಪಂ ಸಿಇಒ ಡಾ. ಕೆ.ಎನ್.ವಿಜಯಪ್ರಕಾಶ್ ಮಾತನಾಡಿ, ''ಜನರ ಬಳಿಗೆ ಬಂದು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ಇನ್ನು ಮುಂದೆ ಮೊದಲನೇ ಸೋಮವಾರ ಹಾಗೂ ಮೂರನೇ ಸೋಮವಾರ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ,''ಎಂದು ತಿಳಿಸಿದರು. ಉಪ ವಿಭಾಗಾಧಿಕಾರಿ ಡಾ. ಎಚ್.ಎಲ್. ನಾಗರಾಜ್, ಜಿಪಂ ಸದಸ್ಯ ಸ್ವಾಮಿ ಮಾತನಾಡಿದರು.
ಸವಲತ್ತುಗಳ ವಿತರಣೆ: ಕಾರ್ಯಕ್ರಮದಲ್ಲಿ ನಾನಾ ಇಲಾಖೆಗಳು ಹಲವು ಯೋಜನೆಗಳ ಫಲಾನುಭವಿಗಳಿಗೆ ಸೌಲತ್ತು ವಿತರಣೆ, ಸಾಲ ಮನ್ನಾ ಯೋಜನೆಯಡಿ ರೈತರಿಗೆ ಋುಣ ಮುಕ್ತ ಪತ್ರಗಳನ್ನು ನೀಡಲಾಯಿತು.
ಅನೇಕ ಮಂದಿ ಸಾಮಾಜಿಕ ಭದ್ರತಾ ಯೋಜನೆಗಳು, ಉದ್ಯೋಗವಕಾಶ, ಕೆ.ಪಿ.ಟಿ.ಸಿ.ಎಲ್, ಆರೋಗ್ಯ ಮತ್ತಿತರ ಇಲಾಖೆಗಳ ಜಮೀನು ದಾಖಲೆಗಳ ಬಗ್ಗೆ ಮನವಿ ಮಾಡಿದರು.
ನಂತರ ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳೀಯ ಹಾಸ್ಟೆಲ್ನಲ್ಲೇ ವಾಸ್ತವ್ಯ ಮಾಡಿದರು.
ಜಿಪಂ ಸದಸ್ಯರಾದ ಪಟೇಲ್ ಶಿವಪ್ಪ, ವತ್ಸಲಾ ಶೇಖರ್, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಜಿಪಂ ಉಪಕಾರ್ಯದರ್ಶಿ ಪುಟ್ಟಸ್ವಾಮಿ, ತಹಸೀಲ್ದಾರ್ ಫಾಲಾಕ್ಷ ಮತ್ತಿತರರು ಹಾಜರಿದ್ದರು.
ಹಾಸನ: ಅರಸೀಕೆರೆ ತಾಲೂಕು ಜೆ.ಸಿ. ಪುರದಲ್ಲಿ ನಡೆದ ಜನಸಂಪರ್ಕ ಸಭೆ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ, ಕಿರಿಯ ಅಧಿಕಾರಿಗಳು, ಕ್ಷೇತ್ರದ ಶಾಸಕರೂ ಅಧಿಕಾರಿಗಳೊಂದಿಗೆ ವಾಸ್ತವ್ಯ ಮಾಡುವ ಮೂಲಕ ಆಡಳಿತ ಸುಧಾರಣೆಗೆ ಮುಂದಾದ ಪ್ರಯತ್ನಕ್ಕೆ ಜನಸ್ಪಂದನೆ ವ್ಯಕ್ತವಾಯಿತು.
ಜಿಲ್ಲಾಧಿಕಾರಿ ಅಕ್ರಂ ಪಾಷ ಅವರ ನೇತೃತ್ವದ ಅಧಿಕಾರಿಗಳ ತಂಡಕ್ಕೆ ತಡರಾತ್ರಿವರೆಗೂ ಸಾವಿರಾರು ಜನರು ತಮ್ಮ ಅಹವಾಲುಗಳನ್ನು ತೋಡಿಕೊಂಡರು. ಸಾಮಾಜಿಕ ಭದ್ರತಾ ಯೋಜನೆ, ಪಹಣಿ ಸಮಸ್ಯೆ ಇತ್ಯಾದಿಗಳನ್ನು ಪಡೆಯುವಿಕೆಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ಗ್ರಾಮಸ್ಥರು ತಂದರು.
ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಂ. ಶಿವಲಿಂಗೇಗೌಡ, ''ಅಧಿಕಾರಿಗಳ ಗ್ರಾಮವಾಸ್ತವ್ಯ ಕ್ಷೇತ್ರದ ಜನರ ಪಾಲಿಗೆ ವರವಾಗಿದೆ. ಇದರಿಂದ ಅನೇಕ ಸಮಸ್ಯೆಗಳು ಸ್ಥಳದಲ್ಲೇ ಬಗೆಹರಿಯಲಿದೆ. ಅಲ್ಲದೆ ಅಧಿಕಾರಿಗಳಿಗೆ ಸ್ಥಳೀಯ ಸಮಸ್ಯೆಗಳ ಅರಿವಾಗಲಿದೆ,'' ಎಂದು ಅಭಿಪ್ರಾಯಪಟ್ಟರು.
''ಅರಸೀಕೆರೆ ತಾಲೂಕಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದೆ. ಎತ್ತಿನ ಹೊಳೆ ಯೋಜನೆ ನೀರನ್ನೂ ಕ್ಷೇತ್ರಕ್ಕೆ ತರಲು ನಡೆಸಿದ ಪ್ರಯತ್ನವೂ ಫಲ ನೀಡುವ ಹಾದಿಯಲ್ಲಿದೆ. ಆದರೆ ಬೇಲೂರಿನಲ್ಲಿ ಭೂಸ್ವಾದೀನ ಪ್ರಕ್ರಿಯೆ ಚುರುಕಾಗಬೇಕು. ಇದರಿಂದ ಕ್ಷೇತ್ರದ ನೀರಿನ ಬವಣೆ ಸಂಪೂರ್ಣ ಕಡಿಮೆಯಾಗಲಿದೆ,''ಎಂದರು.
ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಮಾತನಾಡಿ, ''ಜಿಲ್ಲೆಯಲ್ಲಿ ಭೂಮಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚು ಹೆಚ್ಚು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಾಮಾನ್ಯರ ಸಂಕಷ್ಟಗಳನ್ನು ಪರಿಹರಿಸಬೇಕು,'' ಎಂದರು.
ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿ, ''ಜನರ ಬಳಿಗೆ ಹೋಗಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಬಗೆಹರಿಸುವುದು ಕಾರ್ಯಕ್ರಮದ ಆಶಯ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ನೆರವು, ಸಹಕಾರ ನೀಡಲಾಗುವುದು. ಕಂದಾಯ ಇಲಾಖೆಗೆ ಸಂಬಂಧಿಸಿದ ಭೂ ದಾಖಲೆಗಳು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸೂಚನೆ ನೀಡಲಾಗಿದೆ,''ಎಂದು ತಿಳಿಸಿದರು.
''ಪ್ರತಿ ತಾಲೂಕುಗಳಲ್ಲಿ ಜನ ಸಂಪರ್ಕ ಸಭೆ ನಡೆಸಿ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆದಷ್ಟು ಸ್ಥಳದಲ್ಲೇ ಸಮಸ್ಯೆ ಬಗೆಹರಿಸಲಾಗುವುದು, ಉಳಿದವುಗಳನ್ನು ಕಾಲಮಿತಿಯೊಳಗೆ ಬಗೆ ಹರಿಸಲಾಗುವುದು,''ಎಂದರು.
ಜಿಪಂ ಸಿಇಒ ಡಾ. ಕೆ.ಎನ್.ವಿಜಯಪ್ರಕಾಶ್ ಮಾತನಾಡಿ, ''ಜನರ ಬಳಿಗೆ ಬಂದು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ಇನ್ನು ಮುಂದೆ ಮೊದಲನೇ ಸೋಮವಾರ ಹಾಗೂ ಮೂರನೇ ಸೋಮವಾರ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ,''ಎಂದು ತಿಳಿಸಿದರು. ಉಪ ವಿಭಾಗಾಧಿಕಾರಿ ಡಾ. ಎಚ್.ಎಲ್. ನಾಗರಾಜ್, ಜಿಪಂ ಸದಸ್ಯ ಸ್ವಾಮಿ ಮಾತನಾಡಿದರು.
ಸವಲತ್ತುಗಳ ವಿತರಣೆ: ಕಾರ್ಯಕ್ರಮದಲ್ಲಿ ನಾನಾ ಇಲಾಖೆಗಳು ಹಲವು ಯೋಜನೆಗಳ ಫಲಾನುಭವಿಗಳಿಗೆ ಸೌಲತ್ತು ವಿತರಣೆ, ಸಾಲ ಮನ್ನಾ ಯೋಜನೆಯಡಿ ರೈತರಿಗೆ ಋುಣ ಮುಕ್ತ ಪತ್ರಗಳನ್ನು ನೀಡಲಾಯಿತು.
ಅನೇಕ ಮಂದಿ ಸಾಮಾಜಿಕ ಭದ್ರತಾ ಯೋಜನೆಗಳು, ಉದ್ಯೋಗವಕಾಶ, ಕೆ.ಪಿ.ಟಿ.ಸಿ.ಎಲ್, ಆರೋಗ್ಯ ಮತ್ತಿತರ ಇಲಾಖೆಗಳ ಜಮೀನು ದಾಖಲೆಗಳ ಬಗ್ಗೆ ಮನವಿ ಮಾಡಿದರು.
ನಂತರ ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳೀಯ ಹಾಸ್ಟೆಲ್ನಲ್ಲೇ ವಾಸ್ತವ್ಯ ಮಾಡಿದರು.
ಜಿಪಂ ಸದಸ್ಯರಾದ ಪಟೇಲ್ ಶಿವಪ್ಪ, ವತ್ಸಲಾ ಶೇಖರ್, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಜಿಪಂ ಉಪಕಾರ್ಯದರ್ಶಿ ಪುಟ್ಟಸ್ವಾಮಿ, ತಹಸೀಲ್ದಾರ್ ಫಾಲಾಕ್ಷ ಮತ್ತಿತರರು ಹಾಜರಿದ್ದರು.