ಆ್ಯಪ್ನಗರ

ಸಂತ್ರಸ್ತರ ಹೆಸರಿನಲ್ಲಿಭೂ ಅಕ್ರಮ: ತನಿಖೆಗೆ ರೈತಸಂಘ ಆಗ್ರಹ

ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿಸಾವಿರಾರು ಎಕರೆ ಸರಕಾರಿ ಭೂಮಿ ಅಕ್ರಮ ಮಂಜೂರಾತಿ ಆಗಿದ್ದು, ಕೂಡಲೇ ತನಿಖೆ ನಡೆಸಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಒತ್ತಾಯಿಸಿದರು.

Vijaya Karnataka 24 Sep 2019, 5:00 am
ಹಾಸನ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿಸಾವಿರಾರು ಎಕರೆ ಸರಕಾರಿ ಭೂಮಿ ಅಕ್ರಮ ಮಂಜೂರಾತಿ ಆಗಿದ್ದು, ಕೂಡಲೇ ತನಿಖೆ ನಡೆಸಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಒತ್ತಾಯಿಸಿದರು.
Vijaya Karnataka Web violence in the name of victims farmers union request for investigation
ಸಂತ್ರಸ್ತರ ಹೆಸರಿನಲ್ಲಿಭೂ ಅಕ್ರಮ: ತನಿಖೆಗೆ ರೈತಸಂಘ ಆಗ್ರಹ


ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಕಲೇಶಪುರ ಪಟ್ಟಣದಲ್ಲಿರೈತರೊಂದಿಗೆ ತುರ್ತು ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಎಚ್‌ಆರ್‌ಪಿ ಸಂತ್ರಸ್ತರ ಹೆಸರಿನಲ್ಲಿಕೆಲವು ಅಧಿಕಾರಿಗಳು, ನೌಕರರು, ಮಧ್ಯವರ್ತಿಗಳು ಇನ್ನೂ ಅನೇಕರು ಒಂದು ಅಂದಾಜಿನ ಪ್ರಕಾರ 5 ಸಾವಿರ ಎಕರೆಗೂ ಹೆಚ್ಚು ಸರಕಾರಿ ಭೂಮಿ ಅಕ್ರಮ ಮಂಜೂರು ಆಗಿದೆ ಎಂಬ ಮಾಹಿತಿ ಇದೆ. ಈ ದಂಧೆಗೆ ಕಡಿವಾಣ ಹಾಕಲೇಬೇಕು. ಈಗಾಗಲೇ ಕಾನೂನು ಬಾಹಿರವಾಗಿ ಮಂಜೂರು ಆಗಿರುವ ಭೂಮಿಯನ್ನು ದಂಧೆಕೋರರಿಂದ ಸರಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಅಕ್ರಮ ದಂಧೆಯ ಹಿಂದೆ ಇರುವ ಎಲ್ಲರನ್ನೂ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತನಿಖೆ ಚುರುಕುಗೊಳಿಸಿವಂತೆ ಒತ್ತಾಯ ಮಾಡಲಾಗುವುದು ಎಂದರು.

ಕಂದಾಯ ಸಚಿವರು ಪ್ರಕರಣದ ಬಗ್ಗೆ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ತನಿಖೆಯನ್ನು ವಸ್ತುನಿಷ್ಠವಾಗಿ ಮಾಡಬೇಕು. ಪ್ರಕರಣದಲ್ಲಿಭಾಗಿಯಾಗಿರುವ ಕಂದಾಯ, ಸರ್ವೆ ಇಲಾಖೆ, ಎಚ್‌ಆರ್‌ಪಿ ಭೂ ಸ್ವಾಧೀನ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ರಕ್ಷಣೆ ಮಾಡದೆ ವಸ್ತುನಿಷ್ಠ ವರದಿಯನ್ನು ಸರ್ಕಾರಕ್ಕೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿಮನವಿ ಮಾಡಿದರು.

ಪ್ರಕರಣ ವಸ್ತುನಿಷ್ಠ ತನಿಖೆ ಆಗದಿದ್ದರೆ ರೈತ ಸಂಘ ಹಾಗೂ ಇತರ ಸಂಘಟನೆಗಳೊಂದಿಗೆ ಬೃಹತ್‌ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ