ಆ್ಯಪ್ನಗರ

ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಚುನಾವಣೆಯಲ್ಲಿಯಾವುದೇ ಲೋಪಗಳಾಗದಂತೆ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸಿ , ಪಟ್ಟಿ ಪರಿಷ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.

Vijaya Karnataka 1 Sep 2019, 5:00 am
ಹಾಸನ: ಮುಂಬರುವ ಚುನಾವಣೆಯಲ್ಲಿಯಾವುದೇ ಲೋಪಗಳಾಗದಂತೆ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸಿ , ಪಟ್ಟಿ ಪರಿಷ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.
Vijaya Karnataka Web voter list dc instructs
ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲಾಧಿಕಾರಿ ಸೂಚನೆ


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಹೊಸ ಮತದಾರರನ್ನು ನೋಂದಾಯಿಸಿಕೊಳ್ಳುವುದು ಹಾಗೂ ಮರಣ ಹೊಂದಿದ ಮತದಾರರನ್ನು ಪಟ್ಟಿಯಿಂದ ತೆಗೆಯುವ ಕುರಿತು ಬೂತ್‌ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಬೇಕು ಎಂದರು.

ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳದ ಅರ್ಹ ಮತದಾರರನ್ನು ಹುಡುಕಿ ಮನೆ ಮನೆಗೆ ಭೇಟಿ ನೀಡಿ ಬಿ.ಎಲ್‌.ಓ ಆ್ಯಪ್‌ ಮೂಲಕ ನೋಂದಾಯಿಸಬೇಕು ಹಾಗೂ ಈ ತಂತ್ರಾಂಶ ಬಳಕೆಯ ಬಗ್ಗೆ ಅಧಿಕಾರಿಗಳಿಗೆ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಎಚ್‌.ಎಲ್‌ ನಾಗರಾಜ್‌, ಸಕಲೇಶಪುರ ಉಪ ವಿಭಾಗಾಧಿಕಾರಿ ಕವಿತಾ ರಾಜಾರಾಂ, ತಾಲೂಕು ತಹಸೀಲ್ದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ