ಆ್ಯಪ್ನಗರ

ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಕ್ರಮ : ತಹಸೀಲ್ದಾರ್ ಶ್ರೀನಿವಾಸಯ್ಯ

ತಾಲೂಕಿನಾದ್ಯಂತ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಇಲ್ಲ ಹಾಗೂ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುತ್ತಿಲ್ಲ. ಪರ್ಯಾಯವಾಗಿ ಬೋರ್‌ವೆಲ್‌ಗಳನ್ನು ನಿರ್ಮಿಸಲಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸಯ್ಯ ತಿಳಿಸಿದರು.

Vijaya Karnataka 10 May 2019, 8:41 pm
ಹಾಸನ: ತಾಲೂಕಿನಾದ್ಯಂತ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಇಲ್ಲ ಹಾಗೂ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುತ್ತಿಲ್ಲ. ಪರ್ಯಾಯವಾಗಿ ಬೋರ್‌ವೆಲ್‌ಗಳನ್ನು ನಿರ್ಮಿಸಲಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸಯ್ಯ ತಿಳಿಸಿದರು.
Vijaya Karnataka Web HSN-HSN10N1


ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಎಲ್ಲಾ ಜನ - ಜಾನುವಾರುಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು. ನೀರಿನ ಬವಣೆ ಇಲ್ಲ ಎಂದು ತಿಳಿಸಿದ ಅವರು, ಹಾಸನ ತಾಲೂಕಿನಾದ್ಯಂತ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ, ಜಾನುವಾರುಗಳ ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ನಿಗಾವಹಿಸಿ ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.

ಮುಂಬರುವ ಮುಂಗಾರಿನಲ್ಲಿ ತಾಲೂಕಿನಾದ್ಯಂತ ಯಾವುದೇ ರೀತಿಯ ಅನಾಹುತಗಳು ನಡೆಯದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೈಸರ್ಗಿಕ ವಿಕೋಪಗಳಾದಲ್ಲಿ ಕಂಟ್ರೋಲ್ ರೂಂ(ದೂ.260393)ಸ್ಥಾಪಿಸಲಾಗಿದ್ದು, 24*7 ಕಾರ್ಯ ಪ್ರವೃತ್ತಿಯಲ್ಲಿರುತ್ತದೆ. ಅಲ್ಲದೇ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳಿಂದ ಒಂದು ವಾಟ್ಸಾಪ್ ಗ್ರೂಪ್ ರಚಿಸಿ ತಾಲೂಕಿನ ಸಮಗ್ರ ಮಾಹಿತಿ ತಿಳಿಸಬೇಕು ಜೊತೆಗೆ ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿಸಬಹುದಾಗಿದೆ ಎಂದರು.

ಒಣಗಿದ ಮರ ಅಥವಾ ಬೀಳುವಂತಹ ಮರಗಳನ್ನು ಗುರುತಿಸಿ ಕಡಿಯಲು ತೀರ್ಮಾನಿಸಲಾಗಿದೆ. ಮಳೆಯ ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾದಲ್ಲಿ 24 ಗಂಟೆಯೊಳಗೆ ವಿದ್ಯುತ್ ಮಾರ್ಗಗಳನ್ನು ಸರಿಪಡಿಸುವಂತೆ ತಿಳಿಸಿದರು.

ಮಲೇರಿಯಾ, ಡೆಂಗ್ಯೂಗಳಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾವಹಿಸಬೇಕು. ಇವುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ನಡೆಯಬೇಕು ಎಂದರಲ್ಲದೆ, ತಾಲೂಕು ಮಟ್ಟದಲ್ಲಿ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಹೋಬಳಿ ಮಟ್ಟದಲ್ಲಿ ಸಭೆಗಳು ನಡೆಯಬೇಕು ಎಂದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ