ಆ್ಯಪ್ನಗರ

ಇಬ್ಬರನ್ನು ಬಲಿ ಪಡೆದ ಪುಂಡಾನೆ ಬಂಧನ

ಕಳೆದ ಕೆಲ ದಿನಗಳಿಂದ ಈ ಆನೆ ನಗರ ವಾಸಿಗಳಿಗೂ ಆತಂಕ ತಂದಿಟ್ಟಿತ್ತು.

Vijaya Karnataka Web 28 Jul 2019, 2:53 pm
ಹಾಸನ: ತಾಲೂಕಿನ ಸಾಲಗಾಮೆ ಹೋಬಳಿ ಹಾಗೂ ನಗರದ ಜನರ ನಿದ್ದೆ ಕೆಡಿಸಿದ್ದ ಪುಂಡಾನೆಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
Vijaya Karnataka Web Ele


ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ಸೆರೆ ಹಿಡಿಯಲಾಗಿದ್ದು, ಪ್ರಜ್ಞೆ ಮರುಕಳಿಸುವಂತೆ ಮಾಡಿದ ಬಳಿಕ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಈ ಆನೆ ಇಬ್ಬರನ್ನು ಬಲಿ ಪಡೆದುಕೊಂಡಿತ್ತು. ಬೇಲೂರು ತಾಲೂಕು ಅಡಗೂರಿನ ಮಹಿಳೆ ಇದಕ್ಕೆ ಮೊದಲ ಬಲಿಯಾದರೆ,ಕಳೆದ ಒಂದು ವಾರದ ಹಿಂದೆ ಅರಣ್ಯ ಇಲಾಖೆ ಕಾವಲುಗಾರನನ್ನು ತುಳಿದು ಸಾಯಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ