ಆ್ಯಪ್ನಗರ

ಮಹಿಳಾ ಸಾವು: ವೈದ್ಯರ ವಿರುದ್ಧ ಕುಟುಂಬವರ್ಗ ಆರೋಪ

ಕಾಲು ನೋವಿನ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದರು.

Vijaya Karnataka 23 May 2019, 5:00 am
ಹಾಸನ : ಕಾಲು ನೋವಿನ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದರು.
Vijaya Karnataka Web womens death family protest against doctors
ಮಹಿಳಾ ಸಾವು: ವೈದ್ಯರ ವಿರುದ್ಧ ಕುಟುಂಬವರ್ಗ ಆರೋಪ


ಚನ್ನರಾಯಪಟ್ಟಣ ತಾಲೂಕಿನ ಅಗಸರಹಳ್ಳಿಯ ರಾಧಾ ಮೃತರು. ಇವರು ಕಾಲು ನೋವು ಚಿಕಿತ್ಸೆಗಾಗಿ ನಗರದ ಖಾಸಗಿ ಕ್ಲಿನಿಕ್‌ಗೆ ಬಂದಿದ್ದರು. ನಂತರ ಅಲ್ಲಿನ ವೈದ್ಯರು ಖಾಸಗಿ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದ್ದರು. ಅದರಂತೆ ಆಸ್ಪತ್ರೆಗೆ ದಾಖಲಾದಾಗ ವೈದ್ಯರೊಬ್ಬರು ಹೆವಿ ಡೋಸ್‌ ಇಂಜೆಕ್ಷ ನ್‌ ನೀಡಿದ್ದಾರೆ. ಇದರಿಂದ ರಾಧಾ ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಕೇವಲ ಕಾಲು ನೋವಿನ ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆಗೆ ಹೆವಿ ಡೋಸ್‌ ಚುಚ್ಚುಮದ್ದು ನೀಡುವ ಅಗತ್ಯವೇನಿತ್ತು? ಅವರ ಸಾವಿಗೆ ವೈದ್ಯರೇ ಕಾರಣ ಎಂದು ಮೃತರ ಸಂಬಂಧಿಕರು ಆಸ್ಪತ್ರೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ವೈದ್ಯರ ನಿರ್ಲಕ್ಷ ್ಯದಿಂದಲೇ ಈ ಸಾವು ಸಂಭವಿಸಿದೆ. ಆದ್ದರಿಂದ ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ಈ ಕುರಿತು ಸಮರ್ಪಕ ತನಿಖೆಯಾಗಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಡಾವಣೆ ಠಾಣೆ ಪೊಲೀಸರು ಅಹಿತಕರ ಘಟನೆ ಸಂಭವಿಸಿದಂತೆ ಮುನ್ನೆಚ್ಚರಿಕೆ ವಹಿಸಿದ್ದರು. ಸಂಜೆವರಗೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ