ಆ್ಯಪ್ನಗರ

ಹಾಸನ: ಫೋಟೋ ತೆಗೆಸಿಕೊಳ್ಳುವಾಗ ಜಲಪಾತದಿಂದ ಜಾರಿ ಬಿದ್ದು ಯುವಕ ಸಾವು

ಮಹಾಲಯ ಅಮಾವಸ್ಯೆ ಪ್ರಯುಕ್ತ ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ಜಲಪಾತಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಡಾಣಕೆರೆ ಸಮೀಪದ ಅಬ್ಬಿಗುಂಡಿ ಜಲಪಾತಕ್ಕೆ ಆಯತಪ್ಪಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.

Vijaya Karnataka Web 18 Sep 2020, 9:31 pm
ಹಾಸನ: ಯುವಕನೋರ್ವ ಜಲಪಾತಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಕಾಡುಮನೆ ಸಮೀಪ ಗುಡಾಣಕೆರೆ ಗ್ರಾಮದಲ್ಲಿ ನಡೆದಿದೆ.
Vijaya Karnataka Web youth die fall into waterfall while taking photo in sakleshpur
ಹಾಸನ: ಫೋಟೋ ತೆಗೆಸಿಕೊಳ್ಳುವಾಗ ಜಲಪಾತದಿಂದ ಜಾರಿ ಬಿದ್ದು ಯುವಕ ಸಾವು


ತಾಲೂಕಿನ ಮಾರನಹಳ್ಳಿ ಗ್ರಾಮದ ನಾಗೇಶ್ ಎಂಬುವರ ಪುತ್ರ ರತನ್ (26) ಮೃತಪಟ್ಟ ದುರ್ದೈವಿ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ರತನ್‌ ಕಳೆದ ರಾತ್ರಿಯಷ್ಟೇ ಬೆಂಗಳೂರಿನಿಂದ ಮಹಾಲಯ ಅಮಾವಸ್ಯೆ ಪ್ರಯುಕ್ತ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.

ಗುರುವಾರ ತನ್ನ ಕುಟುಂಬದ ಇತರ ನಾಲ್ಕು ಜನ ಸಂಬಂಧಿಗಳ ಜೊತೆ ಗುಡಾಣಕೆರೆ ಸಮೀಪವಿರುವ ಅಬ್ಬಿಗುಂಡಿ ಜಲಪಾತ ವೀಕ್ಷಿಸಲು ಮಧ್ಯಾಹ್ನ ಬಂದಿದ್ದಾನೆ. ಈ ವೇಳೆ ಜೊತೆಯಲ್ಲಿದ್ದ ಒಬ್ಬರಿಗೆ ಮೊಬೈಲ್ ಕೊಟ್ಟು ಪೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಮೇಲಿಂದ ಬಿದ್ದಿದ್ದಾನೆ.

ಹಾಸನ ಜಿಲ್ಲೆಯಲ್ಲಿ ಪ್ರತ್ಯೇಕ ಮೂರು ಅಪಘಾತ: ನಾಲ್ಕು ಜನರ ಸಾವು..!

ಮೇಲಿಂದ ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟು ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮುಳುಗುತಜ್ಞರ ಸಹಾಯದಿಂದ ಮೃತದೇಹವನ್ನು ಹೊರ ತೆಗೆಯಲಾಯಿತು. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಚಂದ್ರಶೇಖರ್ ಸೇರಿ ಇತರರು ಭೇಟಿ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ