ಕುಡಿವ ನೀರಿನ ಬವಣೆ: ಜಿಪಂ ಅಧ್ಯಕ್ಷರಿಗೆ ತರಾಟೆ
ಮುಂಗಾರು ಮಳೆ ಕೈಕೊಟ್ಟು ಎಲ್ಲೆಡೆ ನೀರಿನ ಸಮಸ್ಯೆ ಎದುರಾಗಿದೆ. ಇಷ್ಟಾದರೂ ಪ್ರತಿ ಮೂರು ತಿಂಗಳಿಗೆ ಒಮ್ಮೆ ಸಭೆ ಕರೆಯುವುದನ್ನು ಬಿಟ್ಟು ಐದು, ಆರು ತಿಂಗಳಿಗೆ ಸಭೆ ಕರೆದರೆ ಹೇಗೆ ಜನ ಸುಮ್ಮನಿರುತ್ತಾರೆ ಎಂದು ಜಿಪಂ ಅಧ್ಯಕ್ಷರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು.
Vijaya Karnataka 29 Jun 2019, 5:00 am
ಹಾಸನ: ಮುಂಗಾರು ಮಳೆ ಕೈಕೊಟ್ಟು ಎಲ್ಲೆಡೆ ನೀರಿನ ಸಮಸ್ಯೆ ಎದುರಾಗಿದೆ. ಇಷ್ಟಾದರೂ ಪ್ರತಿ ಮೂರು ತಿಂಗಳಿಗೆ ಒಮ್ಮೆ ಸಭೆ ಕರೆಯುವುದನ್ನು ಬಿಟ್ಟು ಐದು, ಆರು ತಿಂಗಳಿಗೆ ಸಭೆ ಕರೆದರೆ ಹೇಗೆ ಜನ ಸುಮ್ಮನಿರುತ್ತಾರೆ ಎಂದು ಜಿಪಂ ಅಧ್ಯಕ್ಷರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು.
ಜಿಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಶ್ವೇತಾ ದೇವರಾಜ್ ಅವರು ಕುಡಿಯುವ ನೀರಿನ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಪಕ್ಷಾತೀತವಾಗಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇಷ್ಟರಲ್ಲೇ ಕ್ರಮ ಕೈಗೊಳ್ಳಬೇಕಿತ್ತು. ಯಾವಾಗಲೋ ಸಭೆ ಕರೆದರೆ ಸಮಸ್ಯೆ ಬಗೆಹರಿಯುತ್ತದೆಯೇ? ಟ್ಯಾಂಕರ್ನಲ್ಲಿ ನೀರು ಪೂರೈಸುವ ಸ್ಥಿತಿ ಗ್ರಾಮೀಣ ಪ್ರದೇಶದಲ್ಲಿದೆ. ಅಧಿಕಾರಿಗಳು ಕೇಳಿಸಿಕೊಳ್ತಾರೆ ಹೊರತು ಮಂಜೂರಾತಿ ಆಗ್ಬೇಕು. ಅದೂ, ಇದೂ ಸಬೂಬು ಹೇಳ್ತಾರೆ ಎಂದು ದೂರಿದರು.
ಸದಸ್ಯರ ಆರೋಪಕ್ಕೆ ಉತ್ತರಿಸಿದ ಅಧ್ಯಕ್ಷೆ ಶ್ವೇತಾ ದೇವರಾಜ್ ಲೋಕಸಭೆ ಚುನಾವಣೆ, ಸ್ಥಳೀಯ ಸಂಸ್ಥಗಳ ಚುನಾವಣೆ ನೀತಿ ಸಂಹಿತೆ ಈ ಎಲ್ಲ ಕಾರಣದಿಂದ ಸಭೆ ಕರೆದಿರಲಿಲ್ಲ. ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಾನು ಖುದ್ದಾಗಿ ಸಮಸ್ಯೆ ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಭಿವೃದ್ಧ್ದಿ ಕಾರ್ಯಗಳನ್ನು ಶೀಘ್ರವಾಗಿ ಮಾಡಬೇಕು. ಆಯಾ ಕ್ಷೇತ್ರದ ಜಿಪಂ ಸದಸ್ಯರ ಸಲಹೆ ಪಡೆದು ನಿರ್ವಹಿಸುವುದರಿಂದ ಸಮಸ್ಯೆಗಳನ್ನು ಸರಳವಾಗಿ ಬಗೆಹರಿಸಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯಾವ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರಬಾರದು. ಅದಕ್ಕಾಗಿ ಅನುದಾನದ ಕೊರತೆ ಇಲ್ಲ. ಸದಸ್ಯರು ಎಲ್ಲ್ಲಿ ಸಮಸ್ಯೆ ಇದ್ದರೂ ಕೂಡಲೇ ತನ್ನ ಗಮನಕ್ಕೆ ತರಬಹುದು. ಕುಡಿಯುವ ನೀರಿಗೆ ಮೀಸಲಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಶಾಲಾ ಕಟ್ಟಡಗಳ ದುರಸ್ತಿಗೆ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ಪಡೆಯುವುದರ ಬಗ್ಗೆ ನಿಗಾ ವಹಿಸಿ ಎಂದು ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದರು.
ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸಿಗುವಂತಹ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪುವಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದು.
ಜಿಪಂ ಸಿಇಒ ಪುಟ್ಟಸ್ವಾಮಿ ಮಾತನಾಡಿ, ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಸಮಸ್ಯೆಯಿದೆ. ಅದರಲ್ಲಿಯೂ ಕೆಲ ಹಳ್ಳಿಗಳಲ್ಲಿ ಇದು ಪ್ರಮುಖವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನಹರಿಸಬೇಕೆಂದು ತಿಳಿಸಿದರು.
ಜಿಲ್ಲೆಯು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದು, ಹೀಗೆ ಮುಂದುವರೆಯಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಉತ್ತಮ ಫಲಿತಾಂಶ ತರುವಂತೆ ನೋಡಿಕೊಳ್ಳಿ ಎಂದರು.
ಜಿಪಂ ಉಪಾಧ್ಯಕ್ಷ ರಾದ ಸ್ವರೂಪ್ ಎಚ್.ಪಿ. ಮಾತನಾಡಿ, ಪ್ರತಿ ವಿದ್ಯಾರ್ಥಿ ನಿಲಯಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸಬೇಕು. ವಸತಿ ನಿಲಯಗಳಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗಬಾರದು ಎಂದು ತಿಳಿಸಿದರಲ್ಲದೆ, ಉತ್ತಮ ಗುಣಮಟ್ಟದ ಆಹಾರ ಹಾಗೂ ಸೂಕ್ತ ಭದ್ರತೆಯನ್ನು ಒದಗಿಸುವಲ್ಲಿ ಸಮಾಜ ಕಲ್ಯಾಣಾಧಿಕಾರಿಗಳು ಗಮನಹರಿಸಬೇಕು ಎಂದರು.
ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಯೋಜನಾ ನಿರ್ದೇಶಕ ಟಿ.ವಿ ಅರುಣ್ ಕುಮಾರ್, ಮುಖ್ಯ ಲೆಕ್ಕಾಧಿಕಾರಿ, ಶ್ರೀನಿವಾಸಗೌಡ ಸೇರಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ತಾ.ಪಂ. ಅಧ್ಯಕ್ಷ ರು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.
ಜಿಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಶ್ವೇತಾ ದೇವರಾಜ್ ಅವರು ಕುಡಿಯುವ ನೀರಿನ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಪಕ್ಷಾತೀತವಾಗಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇಷ್ಟರಲ್ಲೇ ಕ್ರಮ ಕೈಗೊಳ್ಳಬೇಕಿತ್ತು. ಯಾವಾಗಲೋ ಸಭೆ ಕರೆದರೆ ಸಮಸ್ಯೆ ಬಗೆಹರಿಯುತ್ತದೆಯೇ? ಟ್ಯಾಂಕರ್ನಲ್ಲಿ ನೀರು ಪೂರೈಸುವ ಸ್ಥಿತಿ ಗ್ರಾಮೀಣ ಪ್ರದೇಶದಲ್ಲಿದೆ. ಅಧಿಕಾರಿಗಳು ಕೇಳಿಸಿಕೊಳ್ತಾರೆ ಹೊರತು ಮಂಜೂರಾತಿ ಆಗ್ಬೇಕು. ಅದೂ, ಇದೂ ಸಬೂಬು ಹೇಳ್ತಾರೆ ಎಂದು ದೂರಿದರು.
ಸದಸ್ಯರ ಆರೋಪಕ್ಕೆ ಉತ್ತರಿಸಿದ ಅಧ್ಯಕ್ಷೆ ಶ್ವೇತಾ ದೇವರಾಜ್ ಲೋಕಸಭೆ ಚುನಾವಣೆ, ಸ್ಥಳೀಯ ಸಂಸ್ಥಗಳ ಚುನಾವಣೆ ನೀತಿ ಸಂಹಿತೆ ಈ ಎಲ್ಲ ಕಾರಣದಿಂದ ಸಭೆ ಕರೆದಿರಲಿಲ್ಲ. ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಾನು ಖುದ್ದಾಗಿ ಸಮಸ್ಯೆ ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಭಿವೃದ್ಧ್ದಿ ಕಾರ್ಯಗಳನ್ನು ಶೀಘ್ರವಾಗಿ ಮಾಡಬೇಕು. ಆಯಾ ಕ್ಷೇತ್ರದ ಜಿಪಂ ಸದಸ್ಯರ ಸಲಹೆ ಪಡೆದು ನಿರ್ವಹಿಸುವುದರಿಂದ ಸಮಸ್ಯೆಗಳನ್ನು ಸರಳವಾಗಿ ಬಗೆಹರಿಸಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯಾವ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರಬಾರದು. ಅದಕ್ಕಾಗಿ ಅನುದಾನದ ಕೊರತೆ ಇಲ್ಲ. ಸದಸ್ಯರು ಎಲ್ಲ್ಲಿ ಸಮಸ್ಯೆ ಇದ್ದರೂ ಕೂಡಲೇ ತನ್ನ ಗಮನಕ್ಕೆ ತರಬಹುದು. ಕುಡಿಯುವ ನೀರಿಗೆ ಮೀಸಲಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಶಾಲಾ ಕಟ್ಟಡಗಳ ದುರಸ್ತಿಗೆ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ಪಡೆಯುವುದರ ಬಗ್ಗೆ ನಿಗಾ ವಹಿಸಿ ಎಂದು ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದರು.
ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸಿಗುವಂತಹ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪುವಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದು.
ಜಿಪಂ ಸಿಇಒ ಪುಟ್ಟಸ್ವಾಮಿ ಮಾತನಾಡಿ, ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಸಮಸ್ಯೆಯಿದೆ. ಅದರಲ್ಲಿಯೂ ಕೆಲ ಹಳ್ಳಿಗಳಲ್ಲಿ ಇದು ಪ್ರಮುಖವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನಹರಿಸಬೇಕೆಂದು ತಿಳಿಸಿದರು.
ಜಿಲ್ಲೆಯು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದು, ಹೀಗೆ ಮುಂದುವರೆಯಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಉತ್ತಮ ಫಲಿತಾಂಶ ತರುವಂತೆ ನೋಡಿಕೊಳ್ಳಿ ಎಂದರು.
ಜಿಪಂ ಉಪಾಧ್ಯಕ್ಷ ರಾದ ಸ್ವರೂಪ್ ಎಚ್.ಪಿ. ಮಾತನಾಡಿ, ಪ್ರತಿ ವಿದ್ಯಾರ್ಥಿ ನಿಲಯಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸಬೇಕು. ವಸತಿ ನಿಲಯಗಳಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗಬಾರದು ಎಂದು ತಿಳಿಸಿದರಲ್ಲದೆ, ಉತ್ತಮ ಗುಣಮಟ್ಟದ ಆಹಾರ ಹಾಗೂ ಸೂಕ್ತ ಭದ್ರತೆಯನ್ನು ಒದಗಿಸುವಲ್ಲಿ ಸಮಾಜ ಕಲ್ಯಾಣಾಧಿಕಾರಿಗಳು ಗಮನಹರಿಸಬೇಕು ಎಂದರು.
ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಯೋಜನಾ ನಿರ್ದೇಶಕ ಟಿ.ವಿ ಅರುಣ್ ಕುಮಾರ್, ಮುಖ್ಯ ಲೆಕ್ಕಾಧಿಕಾರಿ, ಶ್ರೀನಿವಾಸಗೌಡ ಸೇರಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ತಾ.ಪಂ. ಅಧ್ಯಕ್ಷ ರು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.