ಆ್ಯಪ್ನಗರ

ಜಿಲ್ಲಾದ್ಯಂತ ಸಾಧಾರಣ ಮಳೆ

ಹಾವೇರಿ: ಜಿಲ್ಲಾದ್ಯಂತ ಭಾನುವಾರ ತುಂತುರು ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

Vijaya Karnataka 24 Jun 2019, 5:00 am
ಹಾವೇರಿ: ಜಿಲ್ಲಾದ್ಯಂತ ಭಾನುವಾರ ತುಂತುರು ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
Vijaya Karnataka Web HVR-23 HAVERI 11


ಕಳೆದ ಎರಡು ದಿನಗಳಿಂದ ಗಾಳಿ, ಗುಡುಗು, ಮಿಂಚು ಇಲ್ಲದೆ ಮೋಡ ಕವಿದ ವಾತಾವರಣವಿತ್ತು. ಭಾನುವಾರ ಬೆಳಗ್ಗೆಯಿಂದ ಮಂಜಿನಂತೆ ಆವರಿಸಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಿದೆ.

ಜಿಲ್ಲೆಯ ಹಿರೇಕೆರೂರು, ರಾಣೇಬೆನ್ನೂರ ರಟ್ಟಿಹಳ್ಳಿ ತಾಲೂಕಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆ ಸುರಿದಿದೆ. ಬ್ಯಾಡಗಿ ಹಾವೇರಿ ಸವಣೂರ ಶಿಗ್ಗಾವಿಯಲ್ಲಿ ಮಧ್ಯಾಹ್ನದ ಸಮಯದಲ್ಲಿ ತುಂತುರು ಮಳೆಯಾಗಿದ್ದು ಅಂಗಳಕ್ಕೆ ನೀರು ಹೊಡೆದಂತಾಗಿದೆ.

ಸಂಜೆಯವರೆಗೂ ಮೋಡಕವಿದ ವಾತಾವರಣವಿದ್ದು ಮಳೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಜಿಟಿ ಜಿಟಿ ಮಳೆಗೆಯಿಂದ ರೈತರ ಸ್ವಲ್ಪ ಚೈತನ್ಯ ಉಂಟಾಗಿದ್ದು, ಮಳೆಯ ನಿರೀಕ್ಷೆಯನ್ನು ಕಾಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ