ಆ್ಯಪ್ನಗರ

ಮನೆ ನಿರ್ಮಾಣಕ್ಕೆ 5 ಲಕ್ಷ, ರಿಪೇರಿಗೆ 3 ಲಕ್ಷ ರೂ. ಪರಿಹಾರ

ಹಾವೇರಿ: ನೆರೆ ಸಂತ್ರಸ್ತರ ಮನವಿಯಂತೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ 'ಬಿ' ವರ್ಗದ ಮನೆಗಳ ದುರಸ್ತಿಗೆ ಪರಿಹಾರ ನೀಡುವ ಮಾನದಂಡವನ್ನು ಪರಿಷ್ಕರಿಸಿ ಸರಕಾರ ಆದೇಶ ಹೊರಡಿಸಿದೆ. ಇದರನ್ವಯ 'ಎ' ಮತ್ತು 'ಬಿ' ವರ್ಗದ ಮನೆಗಳನ್ನು ಪೂರ್ಣ ಕೆಡವಿ ಪುನರ್‌ ನಿರ್ಮಾಣ ಮಾಡುವುದಾದರೆ 5 ಲಕ್ಷ ರೂ. ಪರಿಹಾರ ಹಾಗೂ 'ಬಿ' ವರ್ಗದ ಮನೆಗಳನ್ನು ಪೂರ್ಣವಾಗಿ ಕೆಡವದೆ ದುರಸ್ಥಿ ಮಾಡಿಕೊಳ್ಳುವುದಾದರೆ 3 ಲಕ್ಷ ರೂ. ಪರಿಹಾರ ಪಾವತಿಸಲು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

Vijaya Karnataka 23 Jan 2020, 5:00 am
ಹಾವೇರಿ: ನೆರೆ ಸಂತ್ರಸ್ತರ ಮನವಿಯಂತೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ 'ಬಿ' ವರ್ಗದ ಮನೆಗಳ ದುರಸ್ತಿಗೆ ಪರಿಹಾರ ನೀಡುವ ಮಾನದಂಡವನ್ನು ಪರಿಷ್ಕರಿಸಿ ಸರಕಾರ ಆದೇಶ ಹೊರಡಿಸಿದೆ. ಇದರನ್ವಯ 'ಎ' ಮತ್ತು 'ಬಿ' ವರ್ಗದ ಮನೆಗಳನ್ನು ಪೂರ್ಣ ಕೆಡವಿ ಪುನರ್‌ ನಿರ್ಮಾಣ ಮಾಡುವುದಾದರೆ 5 ಲಕ್ಷ ರೂ. ಪರಿಹಾರ ಹಾಗೂ 'ಬಿ' ವರ್ಗದ ಮನೆಗಳನ್ನು ಪೂರ್ಣವಾಗಿ ಕೆಡವದೆ ದುರಸ್ಥಿ ಮಾಡಿಕೊಳ್ಳುವುದಾದರೆ 3 ಲಕ್ಷ ರೂ. ಪರಿಹಾರ ಪಾವತಿಸಲು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.
Vijaya Karnataka Web 5 lakh for house construction and rs 3 lakh for repairs the solution
ಮನೆ ನಿರ್ಮಾಣಕ್ಕೆ 5 ಲಕ್ಷ, ರಿಪೇರಿಗೆ 3 ಲಕ್ಷ ರೂ. ಪರಿಹಾರ


ಕಳೆದ ಆಗಸ್ಟ್‌, ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ನಲ್ಲಿಅತಿವೃಷ್ಟಿ ಹಾಗೂ ಪ್ರವಾಹದ ಕಾರಣದಿಂದ ಹಾನಿಯಾದ ಮನೆಗಳ ಪುನರ್‌ ನಿರ್ಮಾಣ ಕಾರ್ಯಕ್ಕಾಗಿ ಸರಕಾರವು ಅಗತ್ಯ ಅನುದಾನ ಒದಗಿಸಲು ಎ, ಬಿ ಹಾಗೂ ಸಿ ಎಂದು ಮೂರು ವರ್ಗಗಳಾಗಿ ವಿಂಗಡಿಸಿದೆ.

ಈ ಪೈಕಿ 'ಸಿ' ವರ್ಗದ ಮನೆಗಳ ದುರಸ್ಥಿಗಾಗಿ ತಹಸೀಲ್ದಾರ್‌ ಹಂತದಲ್ಲಿಒಂದು ಬಾರಿಗೆ 50 ಸಾವಿರ ರೂ. ಪರಿಹಾರ ಬಿಡುಗಡೆ ಮಾಡಲಾಗಿತ್ತು. ಎ ಮತ್ತು ಬಿ ವರ್ಗದ ಮನೆಗಳಿಗೆ ತಲಾ ಐದು ಲಕ್ಷ ರೂ. ಅನುದಾನ ಒದಗಿಸುವುದಾಗಿ ಆದೇಶ ಮಾಡಿ ಮೊದಲ ಕಂತಿನ ಪರಿಹಾರವಾಗಿ ಒಂದು ಲಕ್ಷ ರೂ. ಅನುದಾನವನ್ನು ಈಗಾಗಲೇ ಸಂತ್ರಸ್ತರ ಖಾತೆಗೆ ಬಿಡುಗಡೆ ಮಾಡಿದೆ.

ಫೋಟೊ ಅಪ್‌ಲೋಡ್‌ ಷರತ್ತು:
ಆದರೆ ಎರಡನೇ ಕಂತಿನ ಅನುದಾನವನ್ನು ಬಿಡುಗಡೆ ಮಾಡುವ ಮೊದಲು ಸದರಿ ಎ ಮತ್ತು ಬಿ ವರ್ಗದ ಸಂತ್ರಸ್ತರು ಹಾನಿಗೊಳಗಾದ ಮನೆಗಳ ತಳಪಾಯ ಹಂತದಿಂದ ಪುನರ್‌ ನಿರ್ಮಾಣ ಆರಂಭಿಸಿ ಈ ಕುರಿತ ಭಾವಚಿತ್ರವನ್ನು ಅಪ್‌ಲೋಡ್‌ ಮಾಡಿದಲ್ಲಿಎರಡನೇ ಕಂತಿನ ಅನುದಾನ ಬಿಡುಗಡೆ ಮಾಡುವ ಷರತ್ತು ನಿಗದಿಪಡಿಸಲಾಗಿತ್ತು.

'ಸಿ' ವರ್ಗದ ಮನೆಗಳ ಪರಿಹಾರದ ಮೊತ್ತ 50 ಸಾವಿರ ರೂ.ಗಳಾಗಿದ್ದು, ಇದರಲ್ಲಿಯಾವುದೇ ಬದಲಾವಣೆಗಳು ಇರುವುದಿಲ್ಲಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮನೆ ಕಟ್ಟಲು 4 ಹಂತದಲ್ಲಿ ಅನುದಾನ: ಪರಿಷ್ಕೃತ ಆದೇಶದಂತೆ ಎ ಮತ್ತು ಬಿ ವರ್ಗದ ಮನೆಗಳನ್ನು ಪೂರ್ಣ ಕೆಡವಿ ಹಾಗೂ ಪುನರ್‌ ನಿರ್ಮಾಣ ಮಾಡುವಂತಹ ಮನೆಗಳಿಗೆ ನಾಲ್ಕು ಹಂತಗಳಲ್ಲಿಐದು ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಹೊಸ ಮಾರ್ಗಸೂಚಿಯಂತೆ ಎ ಮತ್ತು ಬಿ ವರ್ಗದ ಮನೆಗಳನ್ನು ಪೂರ್ಣ ಕೆಡವಿ, ಪುನರ್‌ ನಿರ್ಮಾಣ ಮಾಡಲು 5 ಲಕ್ಷ ರೂ.ಗಳ ಪರಿಹಾರವನ್ನು ನಾಲ್ಕು ಹಂತವಾರು (ತಳಪಾಯ, ಕಿಟಕಿ, ಛಾವಣಿ ಮತ್ತು ಪೂರ್ಣ) ಫೋಟೋಗಳನ್ನು ಕಡ್ಡಾಯವಾಗಿ ಜಿಪಿಎಸ್‌ ಮುಖಾಂತರ ಅಳವಡಿಸಿದ ನಂತರ ಪಾವತಿಸಲಾಗುವುದು.

ರಿಪೇರಿಗೆ 2 ಹಂತದ ಅನುದಾನ: ಭಾಗಶಃ ಹಾನಿಗೀಡಾದ ಮನೆಗಳ ದುರಸ್ಥಿ ಕೈಗೊಳ್ಳಲು ಫಲಾನುಭವಿಗಳಿಗೆ ಮೂರು ಲಕ್ಷ ರೂ.ಗಳನ್ನು ಎರಡು ಹಂತದಲ್ಲಿಪಾವತಿಸಲು ಆದೇಶಿಸಲಾಗಿದೆ. ಈ ಪರಿಹಾರದ ಹಣವನ್ನು ಎರಡು ಹಂತವಾರು ಫೋಟೋಗಳನ್ನು (ಮನೆ ಭಾಗಶಃ ಹಾನಿಗೊಳಗಾದ ಫೋಟೋ ಮತ್ತು ಮನೆ ದುರಸ್ಥಿ ಮಾಡಿಕೊಂಡು ನಂತರ ಫೋಟೋ) ಕಡ್ಡಾಯವಾಗಿ ಜಿಪಿಎಸ್‌ ಮುಖಾಂತರ ಅಳವಡಿಸಿದ ನಂತರ ಪಾವತಿಸಲಾಗುವುದು.

ಫಲಾನುಭವಿಗಳ ಮನವಿ ಏನಿತ್ತು?: ಸರಕಾರದ ಹಳೆಯ ಷರತ್ತಿನ ಪ್ರಕಾರ, ಭಾಗಶಃ ಹಾನಿಗೊಳಗಾದ ಮನೆಗಳನ್ನು ಪೂರ್ಣ ನೆಲಸಮ ಮಾಡಿ ತಳಪಾಯ ಹಂತದಿಂದಲೇ ನಿರ್ಮಿಸಬೇಕಾದಲ್ಲಿಐದು ಲಕ್ಷ ರೂ. ಅನುದಾನ ಸಾಕಾಗುವುದಿಲ್ಲ. ಇದಕ್ಕೆ 10 ರಿಂದ 20 ಲಕ್ಷ ರೂ. ಅನುದಾನ ಬೇಕಾಗುತ್ತದೆ. ಈ ಕಾರಣದಿಂದ ಹಾನಿಗೊಳಗಾದ ಭಾಗವನ್ನು ಮಾತ್ರ ಪುನರ್‌ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಕೆಲ ಫಲಾನುಭವಿಗಳು ಸರಕಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸರಕಾರ ಸ್ಪಂದಿಸಿ ಪರಿಷ್ಕೃತ ಆದೇಶ ಹೊರಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ