ಆ್ಯಪ್ನಗರ

ಸಾಲಭಾದೆ ರೈತ ಆತ್ಮ ಹತ್ಯೆ

ಕಾಕೋಳ: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.

Vijaya Karnataka 17 Feb 2019, 5:00 am
ಕಾಕೋಳ: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
Vijaya Karnataka Web a farmer farmer committed suicide
ಸಾಲಭಾದೆ ರೈತ ಆತ್ಮ ಹತ್ಯೆ


ರಾಣೇಬೆನ್ನೂರ ತಾಲೂಕಿನ ವೆಂಕಟಾಪುರ ಗ್ರಾಮದ ನಿವಾಸಿ ಕುಬೇರ ಖಂಡೇಪ್ಪ ಕಬ್ಬೂರ(36) ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರೈತನಿಗೆ ಪತ್ನಿ ಹಾಗೂ ಮೂವರ ಮಕ್ಕಳು ಇದ್ದಾರೆ. ಪಿತ್ರಾರ್ಜೀತ ಆಸ್ತಿಯನ್ನು ಮಾಡಿಕೊಂಡು ಬರುತ್ತಿದ್ದ ಕುಬೇರ ಅವರ ತಂದೆಗೆ ಬಂದ 3ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಮತ್ತು ಹತ್ತಿ ಹಾಕುತ್ತಿದ್ದು, ಸತತ ಮೂರ್ನಾಕು ವರ್ಷಗಳಿಂದ ಸಕಾಲಕ್ಕೆ ಮಳೆಬಾರದೆ ಕೃಷಿ ಬಿತ್ತನೆ ಬೀಜಕ್ಕಾಗಿ ಮಾಡಿದ ಸಾಲ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಭೇಟಿ: ಸ್ಥಳಕ್ಕೆ ಗ್ರಾಮೀಣ ಪೊಲೀಸ್‌ ಠಾಣೆ ಪಿಎಸ್‌ಐ ಸುನಿಲಕುಮಾರ ಮತ್ತು ತಹಸೀಲ್ದಾರ ಸಿ.ಎಚ್‌.ಕುಲಕರ್ಣಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರದಲ್ಲಿಯೇ ಅವರ ಕುಟುಂಬಕ್ಕೆ ನೀಡುವ ಭರವಸೆ ನೀಡಿದ್ದಾರೆ. ಶಾಸಕ ವಿರೂಪಾಕ್ಷ ಪ್ಪ ಬಳ್ಳಾರಿ ಮೃತ ರೈತ ಕುಟುಂಬಕ್ಕೆ ಪರಿಹಾರ ದೊರಕಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮೂಲಕ ತಿಳಿಸಿದ್ದಾರೆ. ಈ ಕುರಿತು ರಾಣೇಬೆನ್ನೂರ ಗ್ರಾಮೀಣ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ