ಆ್ಯಪ್ನಗರ

ವಿದ್ಯಾರ್ಥಿನಿ ಸಾವಿನ ತನಿಖೆಗೆ ಎಬಿವಿಪಿ ಒತ್ತಾಯ

ರಾಣೇಬೆನ್ನೂರ: ನಗರದ ಹಾಸ್ಟೆಲ್‌ವೊಂದಲ್ಲಿಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿಶನಿವಾರ ನಗರದ ಬಸ್‌ನಿಲ್ದಾಣದ ಮುಂಭಾಗದಲ್ಲಿಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

Vijaya Karnataka 20 Oct 2019, 5:00 am
ರಾಣೇಬೆನ್ನೂರ: ನಗರದ ಹಾಸ್ಟೆಲ್‌ವೊಂದಲ್ಲಿಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿಶನಿವಾರ ನಗರದ ಬಸ್‌ನಿಲ್ದಾಣದ ಮುಂಭಾಗದಲ್ಲಿಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
Vijaya Karnataka Web abvp demands probe into students death
ವಿದ್ಯಾರ್ಥಿನಿ ಸಾವಿನ ತನಿಖೆಗೆ ಎಬಿವಿಪಿ ಒತ್ತಾಯ


ಈ ಸಮಯದಲ್ಲಿಮಾತನಾಡಿದ ಪ್ರತಿಭಟನಾಕಾರರು, ಸ್ಥಳ ಪರಿಶೀಲಿಸಿದಾಗ ವಿದ್ಯಾರ್ಥಿನಿ ಸಾವಿನ ಸುತ್ತ ಅನೇಕ ಸಂಶಯಗಳು ಉಂಟಾಗುತ್ತಿವೆ. ಮೃತಳು ನಿದ್ದೆ ಮಂಪರಿನಲ್ಲಿಕೆಳಕ್ಕೆ ಬಿದ್ದು ಸಾವನ್ನಪ್ಪಿರಬಹುದು ಎನ್ನುವುದು ಅಚ್ಚರಿಯ ಸಂಗತಿಯಾಗಿದೆ. ಕೆಲವು ಕಾಣದ ಕೈಗಳು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಬಹುದು. ಆದ್ದರಿಂದ ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿತನಿಖೆ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಮಾಡಬೇಕು ಹಾಗೂ ಮೃತಳ ಪೋಷಕರಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಮುಂದಿನ ದಿನಗಳಲ್ಲಿಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಂಜು ಕೊಳ್ಳೇರ, ರಾಘವೇಂದ್ರ ಪಿ. ಶಿವರಾಜ ಕರಿಗಾರ, ಸೂರಜ್‌ ಐರಣಿ, ಶಿವು ಪಾಟೀಲ, ಪಾಂಡು ಗಡ್ಡದ ತುಮ್ಮಿನಕಟ್ಟಿ, ನಯನಾ ಗಿರೆಡ್ಡಿ, ಮೇಘನಾ, ಗೋಪಿ, ವಿಜಯ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ