ಆ್ಯಪ್ನಗರ

ಮಲೇರಿಯಾ ವಿರೋಧಿ ಮಾಸಾಚರಣೆ

ತುಮ್ಮಿನಕಟ್ಟಿ: ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವುದೇ ಸಾಂಕ್ರಾಮಿಕ ರೋಗಗಳ ತಡೆಗೆ ಉತ್ತಮ ಪರಿಹಾರ ಎಂದು ವೈದ್ಯಾಧಿಕಾರಿ ಡಾ.ರಾಜೇಶ ಕುಮಾರ ಹೂಗಾರ ಹೇಳಿದರು.

Vijaya Karnataka 4 Jul 2019, 5:00 am
ತುಮ್ಮಿನಕಟ್ಟಿ: ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವುದೇ ಸಾಂಕ್ರಾಮಿಕ ರೋಗಗಳ ತಡೆಗೆ ಉತ್ತಮ ಪರಿಹಾರ ಎಂದು ವೈದ್ಯಾಧಿಕಾರಿ ಡಾ.ರಾಜೇಶ ಕುಮಾರ ಹೂಗಾರ ಹೇಳಿದರು.
Vijaya Karnataka Web HVR-03 TMK 01


ಅವರು ರಾಣೆಬೆನ್ನೂರು ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿ ಸರಕಾರಿ ಹಿರಿಯ ಮಾದರಿ ಕೇಂದ್ರ ಶಾಲೆಯಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹೋಬಳಿ ಮಟ್ಟದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಲೇರಿಯಾ ರೋಗವು ಪ್ಲಾಸ್ಮೋಡಿಯಾ ಎಂಬ ಪರೋಪ ಜೀವಿಯಿಂದ ಅನಾಫೆಲಿಸ್‌ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಇದರಲ್ಲಿ 3 ಹಂತದ ಲಕ್ಷ ಣಗಳಲ್ಲಿ ಪ್ರಮುಖವಾಗಿ ಚಳಿ ಜ್ವರ, ಬೆವರು ಈ ರೀತಿಯ ಲಕ್ಷ ಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷ ಣಗಳು ಇರುವವರು ಕ್ಷೇತ್ರ ಮಟ್ಟದ ಪ್ರಯೋಗಾಲಯದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಉಚಿತವಾಗಿ ಚಿಕಿತ್ಸೆ ಲಭ್ಯವಿದೆ ಎಂದರು.

ಗ್ರಾ.ಪಂ. ಅಧ್ಯಕ್ಷ ಸುರೇಶ ಬಾನುವಳ್ಳಿ, ಡಾ.ಅನಿಲ್‌ ಕುಮಾರ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಜಾನಕಿ ಕಮ್ಮಾರ, ಮೋಹನ್‌ ಸಂಕ್ಲಾಪುರ, ಆಶಾ ಕಾರ್ಯಕರ್ತೆಯರು ಹಾಗೂ ಶಾಲೆಯ ಮುಖ್ಯ ಶಿಕ್ಷ ಕ ಎಸ್‌.ಪಿ,ಗೌಡರ್‌, ಶಿಕ್ಷ ಕಿಯರು ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ