ಆ್ಯಪ್ನಗರ

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತೀಯ ಅಲ್ಪಸಂಖ್ಯಾತರಾದ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್‌ರು ಹಾಗೂ ಪಾರ್ಸಿ ಜನಾಂಗದವರ ಸಾಮಾಜಿಕ, ಶೈಕ್ಷ ಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 3 Jul 2019, 5:00 am
ಹಾವೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತೀಯ ಅಲ್ಪಸಂಖ್ಯಾತರಾದ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್‌ರು ಹಾಗೂ ಪಾರ್ಸಿ ಜನಾಂಗದವರ ಸಾಮಾಜಿಕ, ಶೈಕ್ಷ ಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web application for loan facility
ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ಶ್ರಮಶಕ್ತಿ ಯೋಜನೆ, ಕಿರು(ಮೈಕ್ರೋ)ಸಾಲ ಮತ್ತು ಧನಸಹಾಯ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಕೃಷಿ ಭೂಮಿ ಖರೀದಿ ಯೋಜನೆ, ಗೃಹ ನಿರ್ಮಾಣ ಮಾರ್ಜಿನ್‌ ಹಣ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹಧನ ಯೋಜನೆ, ಪಶು ಸಂಗೋಪನೆ ಯೋಜನೆ, ಟ್ಯಾಕ್ಸಿ, ಸರಕು ಸಾಗಣೆ ವಾಹನ ಖರೀದಿ ಯೋಜನೆ, ಪ್ರವಾಸಿ ಸಾಲ ಯೋಜನೆ, ಅಲ್ಪಸಂಖ್ಯಾತರ ರೈತರ ಕಲ್ಯಾಣ ಯೋಜನೆ, ಮನೆ ಮಳಿಗೆ ಯೋಜನೆ, ಆಟೊ ಸರ್ವಿಸ್‌ ಆಟೋಮೊಬೈಲ್‌ ತರಬೇತಿ ಯೋಜನೆಯಡಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಆನ್‌ಲೈನ್‌ ಅರ್ಜಿಯ ಹಾರ್ಡ್‌ ಕಾಪಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜುಲೈ 31ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಶಿವಾಜಿನಗರ, ಹಾವೇರಿ ಅವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08375-234114ನ್ನು ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ