ಆ್ಯಪ್ನಗರ

ಧನಸಹಾಯ ಪಡೆಯಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ

ಹಾವೇರಿ : ಆರ್ಥಿಕವಾಗಿ ಹಿಂದುಳಿದ, ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ ಮಹಿಳಾ ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ 'ಸಮೃದ್ಧಿ' ಯೋಜನೆಯಡಿ ಪ್ರೋತ್ಸಾಹಧನ ನೀಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 28 Jul 2019, 5:00 am
ಹಾವೇರಿ : ಆರ್ಥಿಕವಾಗಿ ಹಿಂದುಳಿದ, ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ ಮಹಿಳಾ ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ 'ಸಮೃದ್ಧಿ' ಯೋಜನೆಯಡಿ ಪ್ರೋತ್ಸಾಹಧನ ನೀಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web application from female candidates for grants
ಧನಸಹಾಯ ಪಡೆಯಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ


ನಗರ ಮತ್ತು ಗ್ರಾಮೀಣ ಪ್ರದೇಶದ ಬೀದಿಬದಿ ಮಹಿಳಾ ವ್ಯಾಪಾರಿಗಳು ಹೆಚ್ಚಿನ ಬಡ್ಡಿ ನೀಡಿ ಸಾಲ ಪಡೆಯುವುದನ್ನು ತಡೆಗಟ್ಟಲು ಶೋಷಣೆಯಿಂದ ಮುಕ್ತಗೊಳಿಸುವುದು, ಮಹಿಳೆಯರ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ಬೀದಿಬದಿ ಮಹಿಳಾ ವ್ಯಾಪಾರಿಗಳಿಗೆ ತಲಾ 10,000 ರೂ.ಗಳಂತೆ ಪ್ರೋತ್ಸಾಹಧನ ನೀಡಲಾಗುತ್ತದೆ.

ಅಭ್ಯರ್ಥಿಯು 18 ರಿಂದ 60 ವರ್ಷದೊಳಗಿರಬೇಕು. ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ, ಪೌರಾಡಳಿತ ಇಲಾಖೆಯಲ್ಲಿ ಮತ್ತು ಬೆಂಗಳೂರು ನಗರ ಪ್ರದೇಶಕ್ಕೆ ಸಂಬಂಧಿಸಿದಂತೆ ಬೃಹತ್‌ ಮಹಾನಗರ ಪಾಲಿಕೆಯಲ್ಲಿ ಬೀದಿಬದಿ ವ್ಯಾಪಾರಿ ಎಂದು ನೋಂದಣಿ ಮಾಡಿಸಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓಗಳಿಂದ ಬೀದಿಬದಿ ವ್ಯಾಪಾರಿ ಎಂದು ದೃಢೀಕರಿಸಿದ ದಾಖಲೆಯನ್ನು ಪಡೆದಿರಬೇಕು.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅಗಷ್ಟ 8 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಗಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ ಕಚೇರಿಯನ್ನು ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ