ಆ್ಯಪ್ನಗರ

ವಿವಿಧ ಅಂಗಡಿ ಮೇಲೆ ದಾಳಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ರಾಣೇಬೆನ್ನೂರು ನಗರದ ಆಯ್ದ 18 ಅಂಗಡಿಗಳ ಮೇಲೆ ದಾಳಿ ನಡೆಸಿ 2250 ರೂ. ದಂಡ ವಸೂಲಿ ಮಾಡಿದ್ದಾರೆ.

Vijaya Karnataka 9 Jan 2020, 5:00 am
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ರಾಣೇಬೆನ್ನೂರು ನಗರದ ಆಯ್ದ 18 ಅಂಗಡಿಗಳ ಮೇಲೆ ದಾಳಿ ನಡೆಸಿ 2250 ರೂ. ದಂಡ ವಸೂಲಿ ಮಾಡಿದ್ದಾರೆ.
Vijaya Karnataka Web attack on various shop
ವಿವಿಧ ಅಂಗಡಿ ಮೇಲೆ ದಾಳಿ


ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿಕಲಂ-4ರಡಿಯಲ್ಲಿ14 ಪ್ರಕರಣಗಳಲ್ಲಿ1850 ರೂ. ಹಾಗೂ ಕಲಂ 6ಬಿ ಅಡಿಯಲ್ಲಿ 4 ಪ್ರಕರಣಳಲ್ಲಿ400 ರೂ. ಸೇರಿ 2250 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿಜಿಲ್ಲಾತಂಬಾಕು ನಿಯಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮೂರ, ನಾಗರಜ ಕುಡುಪಲಿ, ತಾಲೂಕಾ ಆರೋಗ್ಯ ಕಚೇರಿ ಸಿಬ್ಬಂದಿ ಹಾಗೂ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿ ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ