ಆ್ಯಪ್ನಗರ

ಸೈರನ್ ಸದ್ದಿಗೆ ಪಲಾಯನಗೈದ ಕಳ್ಳರು

ಸಮೀಪದ ಕರೂರು ಗ್ರಾಮದಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿಗೆ ನುಗ್ಗಿದ ಕಳ್ಳರು ಹಣ ಕಳವು ಮಾಡಲು ಯತ್ನಿಸಿದ ಘಟನೆ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

Vijaya Karnataka 20 Aug 2018, 8:53 am
ಕುಮಾರಪಟ್ಟಣ (ಹಾವೇರಿ): ಸಮೀಪದ ಕರೂರು ಗ್ರಾಮದಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿಗೆ ನುಗ್ಗಿದ ಕಳ್ಳರು ಹಣ ಕಳವು ಮಾಡಲು ಯತ್ನಿಸಿದ ಘಟನೆ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
Vijaya Karnataka Web Police 1


ಕಳ್ಳರು ಮೊದಲು ಷಟರ್‌ ಮತ್ತು ಬಾಗಿಲಿಗೆ ಹಾಕಿದ್ದ ಎರಡೂ ಬೀಗಗಳನ್ನು ಒಡೆದು ಒಳಗೆ ಪ್ರವೇಶಿಸಿದ್ದಾರೆ. ನಂತರ ತಮ್ಮ ಗುರುತು ಮರೆಮಾಚಲು ಸಿಸಿ ಟಿವಿ ಕ್ಯಾಮೆರಾಗಳನ್ನು ಬೇರೆ ದಿಕ್ಕಿಗೆ ತಿರುಗಿಸಿ ಭದ್ರತಾ ಕೊಠಡಿಯ ಲಾಕರ್‌ನಲ್ಲಿದ್ದ ಹಣ ದೋಚಲು ಪ್ರಯತ್ನಿಸಿದ್ದಾರೆ.

ಈ ಸಂದರ್ಭ ಸೈರನ್‌ ಒಂದೇ ಸಮನೆ ಕೂಗಲು ಆರಂಭಿಸಿದಾಗ ಸಿಕ್ಕಿ ಬೀಳುವ ಭಯದಿಂದ ಕಳ್ಳರು ಪರಾರಿಯಾಗಿದ್ದಾರೆ. ಲಾಕರ್‌ನಲ್ಲಿದ್ದ ಹಣ ಸುರಕ್ಷಿತವಾಗಿದೆ ಎಂದು ಬ್ಯಾಂಕ್‌ ಮ್ಯಾನೇಜರ್‌ ಗಿರೀಶ್‌ ಹೊಸೂರು ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಹೆಚ್ಚುವರಿ ಎಸ್‌ಪಿ ಜಿ.ಎ.ಜಗದೀಶ್‌, ''ಶ್ವಾನದಳದ ಸಹಾಯದಿಂದ ಶೋಧ ಕಾರ್ಯ ನಡೆಸಲಾಗಿದೆ. ತನಿಖೆ ನಡೆಸಿ ಕಳ್ಳರನ್ನು ಶೀಘ್ರ ಪತ್ತೆ ಹಚ್ಚಲಾಗುವುದು'' ಎಂದು ತಿಳಿಸಿದರು.

ಕುಮಾರಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್‌ಪಿ ಅನಿಲ್‌ ಭೂಮರೆಡ್ಡಿ, ಬ್ಯಾಂಕ್‌ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ