ಆ್ಯಪ್ನಗರ

ಹಾವೇರಿ: ಕೊರೊನಾ ಲಸಿಕೆ ವಿಷಯದಲ್ಲಿ ಬಿಜೆಪಿ ಕೀಳು ರಾಜಕೀಯ ಎಂದ ಎಚ್‌ಕೆಪಿ

ಪ್ರವಾಹದಲ್ಲಿ 250ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು, 10 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ. ಈವರೆಗೆ ಸರಿಯಾದ ವ್ಯವಸ್ಥೆಯನ್ನು ರಾಜ್ಯ ಸರಕಾರ ಕೈಗೊಂಡಿಲ್ಲ ಎಂದು ಎಚ್‌ಕೆ ಪಾಟೀಲ್‌ ಆರೋಪಿಸಿದರು.

Vijaya Karnataka Web 23 Oct 2020, 5:59 pm
ಹಾವೇರಿ: ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ಪೂರೈಸಲಾಗುವುದು ಎಂದು ಬಿಜೆಪಿ ಭರವಸೆ ನೀಡುವ ಮೂಲಕ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ್ ಆರೋಪಿಸಿದ್ದಾರೆ.
Vijaya Karnataka Web ಎಚ್‌ಕೆ ಪಾಟೀಲ್‌
ಎಚ್‌ಕೆ ಪಾಟೀಲ್‌


ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಚಿವ ಎಚ್‌ಕೆ ಪಾಟೀಲ್‌ ಮಾತನಾಡಿದರು.

ಕೋವಿಡ್ ಲಸಿಕೆ ಎಲ್ಲರಿಗೂ ಉಚಿತವಾಗಿ ದೊರೆಯಬೇಕು, ಇದು ಕೇಂದ್ರ ಸರಕಾರದ ಜವಾಬ್ದಾರಿಯಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಕೋವಿಡ್ ಲಸಿಕೆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿದೆ. ಅದನ್ನು ಮರೆ ಮಾಚಲು ಇಂಥ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಬಿಜೆಪಿ ಕೀಳು ಮಟ್ಟಕ್ಕೆ ಇಳಿದಿದೆ. ಅಲ್ಲದೇ ಕೊರೊನಾ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತದೆ ಎಂದು ಎಚ್‌ಕೆ ಪಾಟೀಲ್‌ ಚಾಟಿ ಬೀಸಿದರು.

ಇತ್ತೀಚಿಗೆ ಸುರಿ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 250ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು, 10 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ. ಈವರೆಗೆ ಸರಿಯಾದ ವ್ಯವಸ್ಥೆಯನ್ನು ರಾಜ್ಯ ಸರಕಾರ ಕೈಗೊಂಡಿಲ್ಲ ಎಂದು ಎಚ್‌ಕೆ ಪಾಟೀಲ್‌ ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ