ಆ್ಯಪ್ನಗರ

ಉತ್ತಮ ಪರಿಸರ ನಿರ್ಮಿಸಿ

ತುಮ್ಮಿನಕಟ್ಟಿ: ಅರಣ್ಯ ನಾಶದಿಂದ ಪರಿಸರದ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ. ಇದನ್ನು ತಡೆಯಲು ಪ್ರತಿಯೊಬ್ಬರು ಕಡ್ಡಾಯವಾಗಿ ಶಾಲೆ, ಮನೆ ಮುಂದೆ ಒಂದಾದರೂ ಸಸಿ ನೆಟ್ಟು ಪೋಷಿಸಬೇಕು ಎಂದು ಗ್ರಾಪಂ ಅಧ್ಯಕ್ಷ ಸುರೇಶ ಬಾನುವಳ್ಳಿ ಹೇಳಿದರು.

Vijaya Karnataka 12 Jun 2019, 5:00 am
ತುಮ್ಮಿನಕಟ್ಟಿ: ಅರಣ್ಯ ನಾಶದಿಂದ ಪರಿಸರದ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ. ಇದನ್ನು ತಡೆಯಲು ಪ್ರತಿಯೊಬ್ಬರು ಕಡ್ಡಾಯವಾಗಿ ಶಾಲೆ, ಮನೆ ಮುಂದೆ ಒಂದಾದರೂ ಸಸಿ ನೆಟ್ಟು ಪೋಷಿಸಬೇಕು ಎಂದು ಗ್ರಾಪಂ ಅಧ್ಯಕ್ಷ ಸುರೇಶ ಬಾನುವಳ್ಳಿ ಹೇಳಿದರು.
Vijaya Karnataka Web HVR-11TMK 01


ಅವರು ರಾಣೆಬೆನ್ನೂರು ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿ ಸರ್ಕಾರಿ ಮಾದರಿ ಕೇಂದ್ರ ಶಾಲೆ ಆವರಣದಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು. ಈ ಹಿಂದೆ ಕೃಷಿಕರು ತಮ್ಮ ಕೃಷಿ ಭೂಮಿ ಬದುವಿನಲ್ಲಿ ಅನೇಕ ಮರಗಳನ್ನು ಬೆಳೆಯುವ ಮೂಲಕ ಪರಿಸರದ ಉಳಿವಿಗೆ ಕಾರಣರಾಗುತ್ತಿದ್ದರು. ಆದರೆ ಇಂದು ಗಿಡಮರಗಳನ್ನು ಬೆಳೆಸಲು ನಿರಾಸಕ್ತಿ ತೋರುತ್ತಿರುವದರಿಂದ ಪರಿಸರ ನಾಶವಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಭೂಮಿಯಲ್ಲಿ ಸಸಿ ನೆಡುವ ಮೂಲಕ ಉತ್ತಮ ಪರಿಸರ ನಿರ್ಮಿಸಲು ಮುಂದಾಗಬೇಕಾಗಿದೆ ಎಂದರು.

ನೆಟ್ಟ ಸಸಿಗಳನ್ನು ನಮ್ಮ ಮಕ್ಕಳಂತೆ ಬೆಳೆಸಬೇಕು. ಪರಿಸರ ಸಂರಕ್ಷ ಣೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಇದು ಕೇವಲ ಅರಣ್ಯ ಇಲಾಖೆಯ ಕೆಲಸವಲ್ಲ. ಹಸಿರು ಉಳಿಸಿ ಬೆಳೆಸುವದು ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ ಜವಾಬ್ದಾರಿ ಎಂದರು.

ಗ್ರಾಪಂ ಪಿಡಿಒ ಗುರುರಾಜ ಅಡಿವೆಪ್ಪನವರ, ಮಂಗಳಾ ಪಾಟೀಲ, ಸಂಪವ್ವ ದೊಣ್ಣೆರ, ಸುಶೀಲವ್ವ ಕೋಟಿಹಾಳ, ಮಂಜವ್ವ ಪಡ್ನೇಶಿ, ಕುಮಾರಸ್ವಾಮಿ, ಕೆ.ಸಿ.ಅಜ್ಜೋಡಿ ಮಠ, ಶಿಕ್ಷ ಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ವಿದ್ಯಾರ್ಥಿಗಳಿಂದ ಸ್ವಚ್ಛತಾ ಪ್ರತಿಜ್ಞಾವಿಧಿ ಪಡೆದು ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ