ಆ್ಯಪ್ನಗರ

ಕ್ಯಾನ್ಸರ್‌ನಿಂದ ಸಾವು ಹೆಚ್ಚಳ: ಕಳವಳ

ಹಾವೇರಿ : ಭಾರತ ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್‌ನಿಂದ ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಸಾವನ್ನಪ್ಪುತ್ತಿದ್ದಾಳೆ. ಪ್ರತಿ ವರ್ಷ ಪತ್ತೆಹಚ್ಚಲಾದ ಎರಡು ಸ್ತನ ಕ್ಯಾನ್ಸರ್‌ ಪ್ರಕರಣದಲ್ಲಿ ಒಬ್ಬರು ಸಾವನ್ನಪ್ಪುತ್ತಿದ್ದಾರೆ ಎಂದು ಡಾ.ಆಸಿಫ್‌ ಶೇಕ್‌ ಕಳವಳ ವ್ಯಕ್ತಪಡಿಸಿದರು.

Vijaya Karnataka 6 Feb 2019, 5:00 am
ಹಾವೇರಿ : ಭಾರತ ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್‌ನಿಂದ ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಸಾವನ್ನಪ್ಪುತ್ತಿದ್ದಾಳೆ. ಪ್ರತಿ ವರ್ಷ ಪತ್ತೆಹಚ್ಚಲಾದ ಎರಡು ಸ್ತನ ಕ್ಯಾನ್ಸರ್‌ ಪ್ರಕರಣದಲ್ಲಿ ಒಬ್ಬರು ಸಾವನ್ನಪ್ಪುತ್ತಿದ್ದಾರೆ ಎಂದು ಡಾ.ಆಸಿಫ್‌ ಶೇಕ್‌ ಕಳವಳ ವ್ಯಕ್ತಪಡಿಸಿದರು.
Vijaya Karnataka Web cancer death increases concern
ಕ್ಯಾನ್ಸರ್‌ನಿಂದ ಸಾವು ಹೆಚ್ಚಳ: ಕಳವಳ


ಜಿಲ್ಲೆಯ ಹಾನಗಲ್‌ ತಾಲೂಕಿನ ಅಕ್ಕಿಆಲೂರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್‌ ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂಬಾಕು ಸೇವನೆ ಸಂಬಂಧಿ ಕಾಯಿಲೆಯಿಂದ ಪ್ರತಿದಿನ 2500 ರಷ್ಟು ಜನರು ಮರಣ ಹೊಂದುತ್ತಿದ್ದಾರೆ. ಕ್ಯಾನ್ಸರ್‌ನಿಂದಾಗುವ ಒಟ್ಟಾರೆ ಮರಣಗಳಲ್ಲಿ ಬಾಯಿ ಮತ್ತು ಶಾಸ್ವಕೋಶದ ಕ್ಯಾನ್ಸರ್‌ನಿಂದ ಶೇ.25 ರಷ್ಟು ಗಂಡಸರು ಹಾಗೂ ಸ್ತನಕ್ಯಾನ್ಸರ್‌ ಹಾಗೂ ಬಾಯಿ ಕ್ಯಾನ್ಸರ್‌ನಿಂದ ಶೇ.25 ರಷ್ಟು ಮಹಿಳೆಯರು ಮರಣ ಹೊಂದುತ್ತಿದ್ದಾರೆ ಎಂದರು.

ತಂಬಾಕು ಸೇವನೆ ಅತ್ಯಂತ ಅಪಾಯಕಾರಿಯಾಗಿದೆ. ಶಾಲಾ ಆವರಣದಿಂದ 100 ಮೀಟರ್‌ ಅಂತರದೊಳಗೆ ತಂಬಾಕು ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಈ ಕುರಿತಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ ಕಾಯ್ದೆ-2003ರ ಕುರಿತು ಮತ್ತು ರಾಷ್ಟ್ರೀಯ ಕ್ಯಾನ್ಸರ್‌, ಮಧುಮೇಹ, ಹೃದಯ ಸಂಬಂಧಿತ ಹಾಗೂ ಪಾಶ್ರ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಕಡ್ಡಿಪುಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಟಳಿಯ ಸದಸ್ಯರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ