ಆ್ಯಪ್ನಗರ

ಮಕ್ಕಳಿಗೆ ಕಾನೂನಿನ ಅರಿವು ಅವಶ್ಯಕ

ಹಾವೇರಿ: ಮಕ್ಕಳ ಹಕ್ಕು, ಕರ್ತವ್ಯ ಹಾಗೂ ರಕ್ಷಣಾ ಕಾಯ್ದೆಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಭಗತ್‌ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ವಿರೇಶ್‌ ಹಿತ್ತಲಮನಿ ಹೇಳಿದರು.

Vijaya Karnataka 28 Nov 2019, 5:00 am
ಹಾವೇರಿ: ಮಕ್ಕಳ ಹಕ್ಕು, ಕರ್ತವ್ಯ ಹಾಗೂ ರಕ್ಷಣಾ ಕಾಯ್ದೆಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಭಗತ್‌ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ವಿರೇಶ್‌ ಹಿತ್ತಲಮನಿ ಹೇಳಿದರು.
Vijaya Karnataka Web children need legal knowledge
ಮಕ್ಕಳಿಗೆ ಕಾನೂನಿನ ಅರಿವು ಅವಶ್ಯಕ


ನಗರದ ಭಗತ್‌ ಪದವಿ ಪೂರ್ವ ಕಾಲೇಜಿನಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಮಕ್ಕಳ ರಕ್ಷಣಾ ಘಟಕ ಹಾವೇರಿ ಇವರ ಆಶ್ರಯದಲ್ಲಿಮಂಗಳವಾರ ಪೊಕ್ಸೋ ಕಾಯ್ದೆ-2012, ಮಕ್ಕಳ ಹಕ್ಕುಗಳು ಹಾಗೂ ಸಂರಕ್ಷಣೆ ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹೆಣ್ಣುಮಕ್ಕಳ ರಕ್ಷಣೆಗೆಂದೆ ಅನೇಕ ಜಾಗೃತಿ ಕಾರ್ಯಕ್ರಮವನ್ನು ಸರಕಾರ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಸ್ವ ಜಾಗೃತಿ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಸಮಾಜವನ್ನು ಗೌರವಿಸಬೇಕು. ಉತ್ತಮ ಪ್ರಜೆಯಾಗಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಿ.ವೈ.ಶೆಟ್ಟಪ್ಪನವರ ಮಾತನಾಡಿ, ಮಕ್ಕಳಿಗೆ ಕಾನೂನಿನ ಅರಿವು ಅವಶ್ಯಕವಾಗಿದೆ. ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯ ವಿವಾಹ, ಪೊಕ್ಸೋ-2012, ಮೋಟಾರು ಕಾಯ್ದೆ, ಬಾಲ ಕಾರ್ಮಿಕತೆ, ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿಜಿಲ್ಲಾಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಲ್ಲಿಕಾರ್ಜುನ ಮಠದ, ಕಾಲೇಜಿನ ಪ್ರಾಧ್ಯಾಪಕರು ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ