ಆ್ಯಪ್ನಗರ

ಭಾರತ್ ಜೋಡೋ ಯಾರು ಮಾಡಿದ್ದಾರೆ, ತೋಡೋ ಯಾರು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತು: ಸಿಎಂ ಬೊಮ್ಮಾಯಿ

CM Bommai: ಪಿ.ಎಫ್.ಐ ನಿಷೇಧ ರಾಜಕೀಯ ಸ್ಟಂಟ್ ಹಾಗೂ ಚುನಾವಣಾ ಗಿಮಿಕ್ ಎಂದಿರುವ ಬಿ. ಕೆ. ಹರಿಪ್ರಸಾದ್ ಅವರಿಗೆ ಬೇರೇನೂ ವ್ಯಾಖ್ಯಾನ ಮಾಡಲು ಸಾಧ್ಯ? ಇಷ್ಟು ವರ್ಷ ವಿಧ್ವಂಸಕ ಕೃತ್ಯಗಳು ನಮ್ಮೆದುರಿಗೆ ನಡೆದಿದೆ. ಕೊಲೆ, ಭಯೋತ್ಪಾದನೆ ಚಟುವಟಿಕೆಗೆ ಬೆಂಬಲ ನೀಡಿದ್ದಾರೆ. ಇದೇ ಕಾಂಗ್ರೆಸ್ ಪಕ್ಷದ ನಾಯಕರು ವಿಧಾನಸಭೆ ಒಳಗೆ ಹಾಗೂ ಹೊರಗೆ ನಿಷೇಧಿಸಿ ಅಂತ ಹೇಳುತ್ತಿದ್ದವರು, ಈಗ ಗಿಮಿಕ್ ಎಂದು ಕರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಹರಿಪ್ರಸಾದ್ ಯೋಚಿಸಬೇಕು ಎಂದು ಸಿಎಂ ಹೇಳಿದ್ದಾರೆ.

Edited byದಿಲೀಪ್ ಡಿ. ಆರ್. | Vijaya Karnataka Web 29 Sep 2022, 12:53 pm

ಹೈಲೈಟ್ಸ್‌:

  • ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು
  • ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ
  • ಎಲ್ಲ ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ: ಸಿಎಂ ಬೊಮ್ಮಾಯಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web cm bommai
ಭಾರತ್ ಜೋಡೋ ಯಾರು ಮಾಡಿದ್ದಾರೆ, ತೋಡೋ ಯಾರು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತು: ಸಿಎಂ ಬೊಮ್ಮಾಯಿ
ಹಾವೇರಿ: ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿಯ ಸಿ. ಬಿ. ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜು ಮೈದಾನದ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಎದುರಾದ ಸಿಎಂ ಬೊಮ್ಮಾಯಿ, ಭಾರತ್ ಜೋಡೋ ಫ್ಲೆಕ್ಸ್ ಗಳನ್ನು ಹರಿದು ಹಾಕಿರುವ ಬಗ್ಗೆ ಡಿ. ಕೆ. ಶಿವಕುಮಾರ್ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಡಿ. ಕೆ. ಶಿವಕುಮಾರ್ ಏನಾದರೂ ಹೇಳಲಿ. ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ. ಎಲ್ಲ ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ. ಹೀಗಾಗಿ ಅದರ ಅವಶ್ಯಕತೆ ಇಲ್ಲ ಎಂದು ನನ್ನ ಭಾವನೆ ಎಂದರು.

PayCM: ಪೇ ಸಿಎಂ ಅಭಿಯಾನ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಸಿಬ್ಬಂದಿಗೆ ಸಿಸಿಬಿ ನೋಟಿಸ್
ಎಸ್.ಡಿ.ಪಿ.ಐ ಬಗ್ಗೆ ಈಗಲೇ ನಿರ್ಧಾರವಿಲ್ಲ

ಪಿಎಫ್‌ಐ ನಿಷೇಧಿಸಲಾಗಿದೆ. ಆದರೆ ಎಸ್.ಡಿ.ಪಿ.ಐ ಭಾರತ ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿರುವ ಪಕ್ಷ. ಇದರ ನಿಷೇಧದ ಬಗ್ಗೆ ಯಾವುದೇ ನಿರ್ಧಾರ ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ. ಬರುವ ದಿನಗಳ ಬೆಳವಣಿಗೆಯ ಆಧಾರದ ಮೇಲೆ ಕ್ರಮ ವಹಿಸಲಾಗುವುದು ಎಂದರು.

ಗಿಮಿಕ್ ಎನ್ನುವುದು ಸರಿಯಲ್ಲ

ಪಿ.ಎಫ್.ಐ ನಿಷೇಧ ರಾಜಕೀಯ ಸ್ಟಂಟ್ ಹಾಗೂ ಚುನಾವಣಾ ಗಿಮಿಕ್ ಎಂದಿರುವ ಬಿ. ಕೆ. ಹರಿಪ್ರಸಾದ್ ಅವರಿಗೆ ಬೇರೇನೂ ವ್ಯಾಖ್ಯಾನ ಮಾಡಲು ಸಾಧ್ಯ. ಇಷ್ಟು ವರ್ಷ ವಿಧ್ವಂಸಕ ಕೃತ್ಯಗಳು ನಮ್ಮೆದುರಿಗೆ ನಡೆದಿದೆ. ಕೊಲೆ, ಭಯೋತ್ಪಾದನೆ ಚಟುವಟಿಕೆಗೆ ಬೆಂಬಲ ನೀಡಿದ್ದಾರೆ. ಇದೇ ಕಾಂಗ್ರೆಸ್ ಪಕ್ಷದ ನಾಯಕರು ವಿಧಾನಸಭೆ ಒಳಗೆ ಹಾಗೂ ಹೊರಗೆ ನಿಷೇಧಿಸಿ ಅಂತ ಹೇಳುತ್ತಿದ್ದವರು, ಈಗ ಗಿಮಿಕ್ ಎಂದು ಕರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಹರಿಪ್ರಸಾದ್ ಯೋಚಿಸಬೇಕು ಎಂದರು.

CM Bommai: ಸಿದ್ದರಾಮಯ್ಯಗೆ ಆರ್‌ಎಸ್‌ಎಸ್‌ ಹೆಸರು ಹೇಳದಿದ್ರೆ ರಾಜಕೀಯ ನಡೆಯಲ್ಲ: ಸಿಎಂ ಬೊಮ್ಮಾಯಿ
ಕನ್ನಡ ಭವನಕ್ಕೆ ಎರಡು ಎಕರೆ ಸ್ಥಳ ನಿಗದಿ ಮಾಡಲು ಗೋವಾ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಹಾಗೂ ಅವರೊಂದಿಗೆ ಮಾತನಾಡಲಾಗಿದೆ. ಸ್ಥಳ ನಿಗದಿ ಮಾಡುವುದಾಗಿ ಹೇಳಿದ್ದಾರೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.

ಸಾಹಿತಿಗಳು ಎರಡೂ ಕಡೆ ಇದ್ದಾರೆ

ಭಾರತ್ ಜೋಡೋ ಕಾರ್ಯಕ್ರಮಕ್ಕೆ ಸಾಹಿತಿಗಳು ಬೆಂಬಲ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ದೇಶದಲ್ಲಿ ಸಾಹಿತಿಗಳು ಎರಡೂ ಕಡೆ ಇದ್ದಾರೆ. ಹಾಗಾಗಿ ಕೆಲವರು ಅಲ್ಲಿ, ಕೆಲವರು ಇಲ್ಲಿ ಬೆಂಬಲ ನೀಡುತ್ತಾರೆ ಎಂದರು.


ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ನವೆಂಬರ್‌ನಲ್ಲಿ ನಡೆಯಲಿರುವ ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ಅದ್ದೂರಿಯಾಗಿ ಸಮ್ಮೇಳನ ಮಾಡಿ ತೀರುತ್ತೇವೆ ಎಂದರು.

ಕಾರ್ಯಕ್ರಮಗಳಿಗೆ ಚಾಲನೆ

ಕೆಎಂಎಫ್ ಕಚೇರಿ ಉದ್ಘಾಟನೆ ಹಾಗೂ ಮೆಗಾ ಡೈರಿ ಶಂಕು ಸ್ಥಾಪನೆ ಪ್ರಮುಖ ಕಾರ್ಯಕ್ರಮ. ಹಾಲು ಉತ್ಪಾದನೆ ಹಾಗೂ ಹಾಲು ಉತ್ಪಾದಕರಿಗೆ ಬಹಳಷ್ಟು ಅನುಕೂಲ ಕೊಡುವ ಕಾರ್ಯಕ್ರಮ ಇದಾಗಿದೆ. ಇದರ ಜೊತೆಗೆ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಬಜೆಟ್‌ನಲ್ಲಿ ಹೇಳಲಾಗಿರುವ ಕಾರ್ಯಕ್ರಮಗಳ ಪ್ರಾರಂಭವಾಗುತ್ತಿದೆ ಎಂದರು.

ಸಚಿವರಾದ ಶಿವರಾಂ ಹೆಬ್ಬಾರ್, ಬಿ. ಸಿ. ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ನೆಹರೂ ಓಲೇಕಾರ್, ಮಾಜಿ ಶಾಸಕ ಮಹಿಮಾ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ