ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಗೃಹ ಸಚಿವರಾಗಿದ್ದರು. ಈಗ ಮುಖ್ಯಮಂತ್ರಿಗಳಾಗಿದ್ದಾರೆ. ಇಂಥವರು ನೈತಿಕ ಪೊಲೀಸ್ಗಿರಿ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನರೇಗಲ್ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಡಿಕೆಶಿ, ಸಿಎಂ ಅವರ ಈ ಸಮರ್ಥನೆಯಿಂದ ಪೊಲೀಸರ ಘನತೆ, ಗೌರವ ಏನಾಗಬೇಕು ಎಂದು ಪ್ರಶ್ನಿಸಿದರು. ಆಕ್ಷನ್ಗೆ ರಿಯಾಕ್ಷನ್ ಇದ್ದೇ ಇರುತ್ತೆ ಎಂದು ಈ ಹಿಂದೆ ಮಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದರು. ಈ ವಿಚಾರವನ್ನು ಪ್ರಸ್ತಾಪಿಸಿದ ಡಿಕೆಶಿ, ಹಾಗಾದರೆ ಸಂವಿಧಾನ, ಪೊಲೀಸ್ ಇಲಾಖೆ ಏಕಿರಬೇಕು ಎಂದು ಸಿಎಂಗೆ ಸವಾಲೆಸೆದರು. ಗೃಹ ಸಚಿವರಾಗಿ ಕೆಲಸ ಮಾಡಿದವರೇ ತಮ್ಮ ಪಕ್ಷದ ಪಟಾಲಂನ ಕಿಡಿಗೇಡಿತನ ಸಮರ್ಥಿಸಿಕೊಳ್ಳುವುದು ರಾಜ್ಯ ಮತ್ತು ಇಡೀ ದೇಶಕ್ಕೆ ಕೆಟ್ಟ ಉದಾಹರಣೆಯಾಗಿ ನಿಲ್ಲುವಂತೆ ಮಾಡಿದೆ. ಪೊಲೀಸರು ಪೂಜೆ ಮಾಡಲಿ, ಒಗ್ಗಟ್ಟು ಪ್ರದರ್ಶಿಸಲಿ, ನಾವು ಬೇಡ ಎನ್ನುವುದಿಲ್ಲ. ಆದರೆ ಅವರು ರಾಷ್ಟ್ರ ಧ್ವಜ ಹಿಡಿಯಲಿ ಎಂದು ಡಿಕೆಶಿ ತಾಕೀತು ಮಾಡಿದರು.
ಗೃಹ ಸಚಿವರು ನಮ್ಮ ಬಟ್ಟೆ ಹಾಕಿದರೆ ಏನು ತಪ್ಪು ಎಂದು ಕೇಳುವುದಾದರೆ, ಇವರ ಮಾತು, ಇವರ ಪ್ರಚೋದನೆಗಳನ್ನು ನೋಡಿಕೊಂಡು ಕಾಂಗ್ರೆಸಿಗರು ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದರಿಂದ ರಾಜ್ಯದ ಜನತೆಗೆ ಅವಮಾನವಾಗಿದೆ. ನಮ್ಮನ್ನು ಕಾಯುವ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡುವ ಪ್ರಯತ್ನ ಖಂಡನೀಯ. ಈ ಬಗ್ಗೆ ನಾವು ಮುಂದೆ ಹೋರಾಟ ಮಾಡುತ್ತೇವೆ ಎಂದು ಡಿಕೆಶಿ ಎಚ್ಚರಿಸಿದ್ದಾರೆ.
ನಾನು ಸಂವಿಧಾನ, ಪೊಲೀಸ್ ಮ್ಯಾನುಯಲ್, ರಾಷ್ಟ್ರ ಧ್ವಜ, ಪೊಲೀಸ್ ಖಾಕಿ ಸಮವಸ್ತ್ರವನ್ನು ಅಲ್ಲಿನ ಎಸ್. ಪಿ. ಗೆ ಕೊಟ್ಟು ಬರುತ್ತೇನೆ ಎಂದ ಡಿ. ಕೆ. ಶಿವಕುಮಾರ್, ಚರ್ಚ್ಗೆ ನುಗ್ಗಿ ಬಲವಂತವಾಗಿ ಭಜನೆ ಮಾಡಿದವರ ವಿರುದ್ಧ ಅಲ್ಲಿನ ಪೊಲೀಸರು ಎಫ್ ಐಆರ್ ದಾಖಲಿಸಿರುವುದು ಸ್ವಾಗತಾರ್ಹ ಎಂದರು. ನಾವೂ ಹಿಂದೂಗಳೇ. ಆದರೆ ಬೇರೆ ಧರ್ಮದವರ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಮಾಡಿರುವ ದಾಳಿ ಖಂಡನೀಯ. ಈ ವಿಚಾರವಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿರುವ ಅರವಿಂದ ಬೆಲ್ಲದ್ ಅವರನ್ನು ಸೇರಿಸಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಹಣ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಚುನಾವಣೆ ಹಾದಿ ತಪ್ಪಿಸುತ್ತಿದೆ ಎಂಬ ಯಡಿಯೂರಪ್ಪನವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಚುನಾವಣೆಯಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವವರು ಯಡಿಯೂರಪ್ಪನವರು ಹಾಗೂ ಬೊಮ್ಮಾಯಿ ಅವರು. ಅವರು ಈ ಜನಕ್ಕೆ ಏನು ಮಾಡಿದ್ದಾರೆ ಎಂಬುದನ್ನು ಮೊದಲು ಹೇಳಲಿ. ಕೋವಿಡ್ ಸಮಯದಲ್ಲಿ ಯಾರಿಗೆ ಎಷ್ಟು ಪರಿಹಾರ ಕೊಟ್ಟಿದ್ದಾರೆ. ರೈತರ ಆದಾಯ ಡಬಲ್ ಮಾಡಿದ್ದಾರಾ ಎಂಬುದನ್ನು ಹೇಳಲಿ. ಆ ಲೆಕ್ಕವನ್ನು ಜನರ ಮುಂದಿಡಲಿ’ ಎಂದರು.
ಹಣ ಹಂಚಿಕೆ ವಿಚಾರವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಿ ಎಂಬ ಸಚಿವ ಮುನಿರತ್ನ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ನಾವು ಚುನಾವಣಾ ಆಯೋಗದ ಗಮನಕ್ಕೆ ಖಂಡಿತಾ ತರುತ್ತೇವೆ. ಬಿಜೆಪಿಯವರು ಪಕ್ಷದ ಕ್ಷೇತ್ರದಲ್ಲಿ ಏನೆಲ್ಲಾ ನಡೆಸುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ. ಅದರ ವಿಡಿಯೋಗಳು ಬಂದಿವೆ’ ಎಂದು ತಿಳಿಸಿದರು.
ಗೃಹ ಸಚಿವರು ನಮ್ಮ ಬಟ್ಟೆ ಹಾಕಿದರೆ ಏನು ತಪ್ಪು ಎಂದು ಕೇಳುವುದಾದರೆ, ಇವರ ಮಾತು, ಇವರ ಪ್ರಚೋದನೆಗಳನ್ನು ನೋಡಿಕೊಂಡು ಕಾಂಗ್ರೆಸಿಗರು ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದರಿಂದ ರಾಜ್ಯದ ಜನತೆಗೆ ಅವಮಾನವಾಗಿದೆ. ನಮ್ಮನ್ನು ಕಾಯುವ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡುವ ಪ್ರಯತ್ನ ಖಂಡನೀಯ. ಈ ಬಗ್ಗೆ ನಾವು ಮುಂದೆ ಹೋರಾಟ ಮಾಡುತ್ತೇವೆ ಎಂದು ಡಿಕೆಶಿ ಎಚ್ಚರಿಸಿದ್ದಾರೆ.
ನಾನು ಸಂವಿಧಾನ, ಪೊಲೀಸ್ ಮ್ಯಾನುಯಲ್, ರಾಷ್ಟ್ರ ಧ್ವಜ, ಪೊಲೀಸ್ ಖಾಕಿ ಸಮವಸ್ತ್ರವನ್ನು ಅಲ್ಲಿನ ಎಸ್. ಪಿ. ಗೆ ಕೊಟ್ಟು ಬರುತ್ತೇನೆ ಎಂದ ಡಿ. ಕೆ. ಶಿವಕುಮಾರ್, ಚರ್ಚ್ಗೆ ನುಗ್ಗಿ ಬಲವಂತವಾಗಿ ಭಜನೆ ಮಾಡಿದವರ ವಿರುದ್ಧ ಅಲ್ಲಿನ ಪೊಲೀಸರು ಎಫ್ ಐಆರ್ ದಾಖಲಿಸಿರುವುದು ಸ್ವಾಗತಾರ್ಹ ಎಂದರು. ನಾವೂ ಹಿಂದೂಗಳೇ. ಆದರೆ ಬೇರೆ ಧರ್ಮದವರ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಮಾಡಿರುವ ದಾಳಿ ಖಂಡನೀಯ. ಈ ವಿಚಾರವಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿರುವ ಅರವಿಂದ ಬೆಲ್ಲದ್ ಅವರನ್ನು ಸೇರಿಸಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಹಣ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಚುನಾವಣೆ ಹಾದಿ ತಪ್ಪಿಸುತ್ತಿದೆ ಎಂಬ ಯಡಿಯೂರಪ್ಪನವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಚುನಾವಣೆಯಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವವರು ಯಡಿಯೂರಪ್ಪನವರು ಹಾಗೂ ಬೊಮ್ಮಾಯಿ ಅವರು. ಅವರು ಈ ಜನಕ್ಕೆ ಏನು ಮಾಡಿದ್ದಾರೆ ಎಂಬುದನ್ನು ಮೊದಲು ಹೇಳಲಿ. ಕೋವಿಡ್ ಸಮಯದಲ್ಲಿ ಯಾರಿಗೆ ಎಷ್ಟು ಪರಿಹಾರ ಕೊಟ್ಟಿದ್ದಾರೆ. ರೈತರ ಆದಾಯ ಡಬಲ್ ಮಾಡಿದ್ದಾರಾ ಎಂಬುದನ್ನು ಹೇಳಲಿ. ಆ ಲೆಕ್ಕವನ್ನು ಜನರ ಮುಂದಿಡಲಿ’ ಎಂದರು.
ಹಣ ಹಂಚಿಕೆ ವಿಚಾರವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಿ ಎಂಬ ಸಚಿವ ಮುನಿರತ್ನ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ನಾವು ಚುನಾವಣಾ ಆಯೋಗದ ಗಮನಕ್ಕೆ ಖಂಡಿತಾ ತರುತ್ತೇವೆ. ಬಿಜೆಪಿಯವರು ಪಕ್ಷದ ಕ್ಷೇತ್ರದಲ್ಲಿ ಏನೆಲ್ಲಾ ನಡೆಸುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ. ಅದರ ವಿಡಿಯೋಗಳು ಬಂದಿವೆ’ ಎಂದು ತಿಳಿಸಿದರು.