ಆ್ಯಪ್ನಗರ

ಒಲೆಯ ಮೇಲೆ ಅಡುಗೆ ಮಾಡಿ ಪ್ರತಿಭಟನೆ

ಹಾವೇರಿ :ತೈಲ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿ, ಜಯಕಾರ್ನಟಕ ಸಂಘಟನೆ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಕಟ್ಟಿಗೆಯ ಒಲೆಯ ಮೇಲೆ ಅಡುಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

Vijaya Karnataka 11 Sep 2018, 5:00 am
ಹಾವೇರಿ :ತೈಲ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿ, ಜಯಕಾರ್ನಟಕ ಸಂಘಟನೆ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಕಟ್ಟಿಗೆಯ ಒಲೆಯ ಮೇಲೆ ಅಡುಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
Vijaya Karnataka Web cook on the oven and protest
ಒಲೆಯ ಮೇಲೆ ಅಡುಗೆ ಮಾಡಿ ಪ್ರತಿಭಟನೆ


ಪ್ರತಿಭಟನೆ ಮೆರವಣಿಗೆ ನಗರದ ರಾಷ್ಟೀಯ ಕಾಂಗ್ರೆಸ್‌ ಸಮಿತಿ ಕಚೇರಿಯಿಂದ ಆರಂಭವಾಗಿ ವಿಪಿ ರಸ್ತೆ ಮೂಲಕ ನಗರದ ಹೊಸಮನಿ ಸಿದ್ಧಪ್ಪ ವೃತ್ತದ ಎತ್ತಿನ ಬಂಡಿಯ ಮೂಲಕ ಶಾತಿಯುತ ಪ್ರತಿಭಟನೆ ಮೆರವಣಿಗೆ ನಡೆಸಿ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯಸಿಂಹ ಮಾತನಾಡಿ, ದಿನನಿತ್ಯದ ಬಳಕೆಯಲ್ಲಿರುವ ಪೆಟ್ರೋಲ್‌, ಡೀಸೆಲ್‌ ಮತ್ತು ಗ್ಯಾಸ್‌ ಸಿಲಿಂಡರ್‌ ಬೆಲೆ ನಿತ್ಯ ಏರಿಕೆಯಾಗುತ್ತಿರುವುದು ಬಡಜನರ ಮೇಲೆ ಬಾರಿ ಪರಿಣಾಮ ಬೀರಿದೆ. ಇದನ್ನು ನಿಯಂತ್ರಿಸುವಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಮುಖಂಡ ಬಿ.ಬಸವರಾಜ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇದ್ದರೂ ನಮ್ಮ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಮತ್ತು ಗ್ಯಾಸ್‌ ಸಿಲಿಂಡರ್‌ ಬೆಲೆಗಳು ದಿನ ದಿನಕ್ಕೆ ಏರಿಕೆಯಾಗುತ್ತಲಿವೆ. ಕೂಡಲೇ ಬೆಲೆಯನ್ನು ಇಳಿಕೆ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನಸಾಮಾನ್ಯ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ವಿದೇಶಿ ಕಪ್ಪು ಹಣ ತರುತ್ತೇನೆ ಜನರ ಪಾಸ್‌ಬುಕ್‌ ಆ ಹಣವನ್ನು ಜಮಾ ಮಾಡುತ್ತೇನೆ. ನಿರುದ್ಯೋಗಸ್ಥರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿ ಪ್ರಧಾನಿ ಹುದ್ದೆ ಗಿಟ್ಟಿಸಿಕೊಂಡ ನರೇಂದ್ರ ಮೋದಿ ಅವರು 4 ವರ್ಷ ಗತಿಸಿದರೂ ಇದುವರೆಗೂ ಉದ್ಯೋಗ ಸೃಷ್ಠಿಸದೆ. ಕಪ್ಪು ಹಣ ತರದೆ ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

4 ವರ್ಷಗಳ ಕೇಂದ್ರದ ದುರಾಳಿತ ಜನರ ಬೇಸತ್ತು ಈ ಬಾರಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಪಕ್ಷಕ್ಕೆ ಒಲವು ತೋರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

ಜಿಲ್ಲಾಧ್ಯಕ್ಷ ಎಸ್‌.ಸಿ.ಶಿಡೇನೂರ, ಜಿಪಂ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಎಸ್‌.ಎಫ್‌.ಎನ್‌.ಗಾಜೀಗೌಡ್ರ, ಯಲ್ಲಪ್ಪ ಮಣ್ಣೂರ, ಎಂ.ಎಂ.ಹಿರೇಮಠ, ಪ್ರಕಾಶಗೌಡ ಪಾಟೀಲ, ಐ.ಯು.ಪಠಾಣ್‌, ಜಯಶ್ರೀ ಶಿವಪೂರ, ರಾಜೇಶ್ವರಿ ಪಾಟೀಲ, ಪ್ರಭು ಭಿಷ್ಠನಗೌಡ್ರ ಸೇರಿದಂತೆ ನೂರಾರು ಕಾರ್ಯಕತರು ಮುಖಂಡರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ