ಹಾವೇರಿ: ಪದವಿ ಪೂರ್ವ ಕಾಲೇಜು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ತರಗತಿಗಳನ್ನು ನಡೆಸುವಾಗ ಕಡ್ಡಾಯವಾಗಿ ವಿದ್ಯಾರ್ಥಿಗಳ ಭೌತಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಕೋವಿಡ್ ಮಾರ್ಗಸೂಚಿಗಳ ಪಾಲನೆಗೆ ಶಾಲಾ ಮುಖ್ಯಸ್ಥರಿಗೆ ಸ್ಪಷ್ಟ ಸೂಚನೆ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಲೋಕಾಯುಕ್ತ ಡಿವೈಎಸ್ಪಿ ಡಾ.ಬಿ.ಪಿ.ಚಂದ್ರಶೇಖರ್ ಸಲಹೆ ನೀಡಿದರು. ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರ ಸಿಂಧೂರ ಸಿದ್ದಪ್ಪ ಹೆಣ್ಣುಮಕ್ಕಳ ಸಂಯುಕ್ತ ಪದವಿ ಪೂರ್ವ ಕಾಲೇಜು, ನರಸಿಂಗರಾವ್ ದೇಸಾಯಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಉನ್ನತ ಪ್ರೌಢಶಾಲೆ ಹಾಗೂ ಸಿಂಧೂರ ಸಿದ್ದಪ್ಪ ಹೆಣ್ಣು ಮಕ್ಕಳ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೆಲ ಶಾಲಾ-ಕಾಲೇಜುಗಳಲ್ಲಿ ಭೌತಿಕ ಅಂತರ ಕಾಯ್ದುಕೊಳ್ಳದೇ ಇರುವುದು, ಕೋವಿಡ್ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡದೇ ಇರುವುದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದರೂ ಪಾಳೆಯ ಪ್ರಕಾರ ತರಗತಿಗಳನ್ನು ನಡೆಸದೇ ಇರುವುದು, ಜ್ವರ ತಪಾಸಣೆಗೆ ಥರ್ಮಲ್ ಸ್ಕ್ರೀನಿಂಗ್ ಬಳಸದೇ ಇರುವುದನ್ನು ಗಮನಿಸಿದ ಲೋಕಾಯುಕ್ತ ಡಿವೈಎಸ್ಪಿ ಸ್ಥಳದಲ್ಲೇ ಉಭಯ ಇಲಾಖೆ ಉಪನಿರ್ದೇಶಕರಿಗೆ ದೂರವಾಣಿ ಕರೆಮಾಡಿ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಕ್ರಮ ಕೈಗೊಂಡು ಅನುಸರಣಾ ವರದಿ ಸಲ್ಲಿಸಲು ಸೂಚಿಸಿದರು.
ಬಿಸಿ ನೀರಿನ ವ್ಯವಸ್ಥೆ ಮಾಡಿ:
ಶಾಲಾ ಮುಖ್ಯಸ್ಥರು, ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದ ಅವರು, ಶೈಕ್ಷಣಿಕ ಸಂಸ್ಥೆಗಳಿಗೆ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ಶಾಲಾ ಆಡಳಿತ ಮಂಡಳಿಯವರು ಮಕ್ಕಳು ಶಾಲೆಗೆ ಹಾಜರಾಗುವ ಬಗ್ಗೆ ಪಾಲಕರ ಅನುಮತಿ ಪತ್ರವನ್ನು ಪಡೆದಿರಬೇಕು. ಮಕ್ಕಳಿಗೆ ಶುದ್ಧ ಕುಡಿಯುವ ಬಿಸಿ ನೀರಿನ ವ್ಯವಸ್ಥೆ ಮಾಡಿರಬೇಕು. ಶಾಲಾ ಆವರಣದಲ್ಲಿಮಕ್ಕಳ ಬರುವಿಕೆ ಮತ್ತು ಹೋಗುವಿಕೆಗೆ ವೃತ್ತ/ ಬಾಕ್ಸ್ಗಳನ್ನು ರಚಿಸುವಂತೆ ಸಲಹೆ ನೀಡಿದರು.
ಪ್ರತ್ಯೇಕ ದಾರಿ ಗುರುತಿಸಿ:
ಶಾಲಾ-ಕಾಲೇಜುಗಳ ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ದಾರಿಗಳನ್ನು ಗುರುತಿಸಿ ಮಾರ್ಕ್ ಮಾಡಬೇಕು. ಪ್ರತಿ ವಿದ್ಯಾರ್ಥಿಗಳ ದೇಹದ ತಾಪಮಾನ ಅಳೆಯಲು ಥರ್ಮಲ್ ಸ್ಕ್ಯಾನರ್ ಬಳಸಬೇಕು. ಪ್ರತ್ಯೇಕ ರಿಜಿಸ್ಟರ್ ತೆರೆದು ದಾಖಲಿಸಬೇಕು. ಶಾಲೆಯ ಪ್ರಮುಖ ಸ್ಥಳಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭೌತಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಹಾಗೂ ಕಾಲಕಾಲಕ್ಕೆ ಕೈ ತೊಳೆಯುವುದು ಸೇರಿದಂತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಾಗೃತಿ ಫಲಕಗಳನ್ನು ಅಳವಡಿಸಲು ಕ್ರಮವಹಿಸುವಂತೆ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ತಪಾಸಣೆ ಸಮಯದಲ್ಲಿ ಕರ್ನಾಟಕ ಲೋಕಾಯುಕ್ತ ನಿರೀಕ್ಷಕ ಶಶಿಧರ ಯು.ಜೆ, ಸಿಬ್ಬಂದಿಗಳಾದ ಬಿ.ಎಂ ಕರ್ಜಗಿ, ಡಿ.ಎಸ್.ಬಿಲ್ಲರ್, ಆನಂದ ತಳಕಲ್ಲ, ಆನಂದ ಶೆಟ್ಟರ ಹಾಗೂ ಬಸವರಾಜ ಸಂಕಣ್ಣನವರ ಉಪಸ್ಥಿತರಿದ್ದರು.
ಪೋಟೋ 21 ಮಂಜು 9
ಹಾನಗಲ್ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಡಾ.ಬಿ.ಪಿ.ಚಂದ್ರಶೇಖರ್ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೆಲ ಶಾಲಾ-ಕಾಲೇಜುಗಳಲ್ಲಿ ಭೌತಿಕ ಅಂತರ ಕಾಯ್ದುಕೊಳ್ಳದೇ ಇರುವುದು, ಕೋವಿಡ್ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡದೇ ಇರುವುದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದರೂ ಪಾಳೆಯ ಪ್ರಕಾರ ತರಗತಿಗಳನ್ನು ನಡೆಸದೇ ಇರುವುದು, ಜ್ವರ ತಪಾಸಣೆಗೆ ಥರ್ಮಲ್ ಸ್ಕ್ರೀನಿಂಗ್ ಬಳಸದೇ ಇರುವುದನ್ನು ಗಮನಿಸಿದ ಲೋಕಾಯುಕ್ತ ಡಿವೈಎಸ್ಪಿ ಸ್ಥಳದಲ್ಲೇ ಉಭಯ ಇಲಾಖೆ ಉಪನಿರ್ದೇಶಕರಿಗೆ ದೂರವಾಣಿ ಕರೆಮಾಡಿ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಕ್ರಮ ಕೈಗೊಂಡು ಅನುಸರಣಾ ವರದಿ ಸಲ್ಲಿಸಲು ಸೂಚಿಸಿದರು.
ಬಿಸಿ ನೀರಿನ ವ್ಯವಸ್ಥೆ ಮಾಡಿ:
ಶಾಲಾ ಮುಖ್ಯಸ್ಥರು, ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದ ಅವರು, ಶೈಕ್ಷಣಿಕ ಸಂಸ್ಥೆಗಳಿಗೆ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ಶಾಲಾ ಆಡಳಿತ ಮಂಡಳಿಯವರು ಮಕ್ಕಳು ಶಾಲೆಗೆ ಹಾಜರಾಗುವ ಬಗ್ಗೆ ಪಾಲಕರ ಅನುಮತಿ ಪತ್ರವನ್ನು ಪಡೆದಿರಬೇಕು. ಮಕ್ಕಳಿಗೆ ಶುದ್ಧ ಕುಡಿಯುವ ಬಿಸಿ ನೀರಿನ ವ್ಯವಸ್ಥೆ ಮಾಡಿರಬೇಕು. ಶಾಲಾ ಆವರಣದಲ್ಲಿಮಕ್ಕಳ ಬರುವಿಕೆ ಮತ್ತು ಹೋಗುವಿಕೆಗೆ ವೃತ್ತ/ ಬಾಕ್ಸ್ಗಳನ್ನು ರಚಿಸುವಂತೆ ಸಲಹೆ ನೀಡಿದರು.
ಪ್ರತ್ಯೇಕ ದಾರಿ ಗುರುತಿಸಿ:
ಶಾಲಾ-ಕಾಲೇಜುಗಳ ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ದಾರಿಗಳನ್ನು ಗುರುತಿಸಿ ಮಾರ್ಕ್ ಮಾಡಬೇಕು. ಪ್ರತಿ ವಿದ್ಯಾರ್ಥಿಗಳ ದೇಹದ ತಾಪಮಾನ ಅಳೆಯಲು ಥರ್ಮಲ್ ಸ್ಕ್ಯಾನರ್ ಬಳಸಬೇಕು. ಪ್ರತ್ಯೇಕ ರಿಜಿಸ್ಟರ್ ತೆರೆದು ದಾಖಲಿಸಬೇಕು. ಶಾಲೆಯ ಪ್ರಮುಖ ಸ್ಥಳಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭೌತಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಹಾಗೂ ಕಾಲಕಾಲಕ್ಕೆ ಕೈ ತೊಳೆಯುವುದು ಸೇರಿದಂತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಾಗೃತಿ ಫಲಕಗಳನ್ನು ಅಳವಡಿಸಲು ಕ್ರಮವಹಿಸುವಂತೆ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ತಪಾಸಣೆ ಸಮಯದಲ್ಲಿ ಕರ್ನಾಟಕ ಲೋಕಾಯುಕ್ತ ನಿರೀಕ್ಷಕ ಶಶಿಧರ ಯು.ಜೆ, ಸಿಬ್ಬಂದಿಗಳಾದ ಬಿ.ಎಂ ಕರ್ಜಗಿ, ಡಿ.ಎಸ್.ಬಿಲ್ಲರ್, ಆನಂದ ತಳಕಲ್ಲ, ಆನಂದ ಶೆಟ್ಟರ ಹಾಗೂ ಬಸವರಾಜ ಸಂಕಣ್ಣನವರ ಉಪಸ್ಥಿತರಿದ್ದರು.
ಪೋಟೋ 21 ಮಂಜು 9
ಹಾನಗಲ್ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಡಾ.ಬಿ.ಪಿ.ಚಂದ್ರಶೇಖರ್ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ಪರಿಶೀಲನೆ ನಡೆಸಿದರು.