ಆ್ಯಪ್ನಗರ

ಡಿ.ದೇವರಾಜ ಅರಸು ಜನ್ನದಿನಾಚರಣೆ 20ಕ್ಕೆ

ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ನೆರೆ ಕಾರಣ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆಯನ್ನು ಆಗಸ್ಟ್‌ 20 ರಂದು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ತಿಳಿಸಿದರು.

Vijaya Karnataka 18 Aug 2019, 5:00 am
ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ನೆರೆ ಕಾರಣ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆಯನ್ನು ಆಗಸ್ಟ್‌ 20 ರಂದು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ತಿಳಿಸಿದರು.
Vijaya Karnataka Web d devaraja kings birthday
ಡಿ.ದೇವರಾಜ ಅರಸು ಜನ್ನದಿನಾಚರಣೆ 20ಕ್ಕೆ


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಧೀಮಂತ ನಾಯಕ ಡಿ.ದೇವರಾಜ ಅರಸುರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಸರಳವಾಗಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ತೀವ್ರ ಮಳೆಯಿಂದ ನೆರೆ ಉಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದರಿಂದ ಜನ್ಮ ದಿನಾಚರಣೆಗೆ ಸರಕಾರದಿಂದ ನೀಡುವ ಅನುದಾನ ಉಳಿಸಿ ನೆರೆ ಹಾವಳಿ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಲು ಸಭೆಯಲ್ಲಿ ಉಪಸ್ಥಿತರಿದ್ದ ಸಮಾಜದ ಮುಖಂಡರು ಮನವಿ ಮಾಡಿಕೊಂಡರು.

ಅಪರ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕರು, ಮುಖ್ಯ ಲೆಕ್ಕಾಧಿಕಾರಿ ಜಾಫ ಸುತಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಾಸಣ್ಣ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಗೋಪಾಲ ಲಮಾಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹೆಚ್‌.ಎ. ಜಮಖಾನೆ ಹಾಗೂ ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ