ಆ್ಯಪ್ನಗರ

ಮಿನಿಬಸ್​​​​ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಕಲಾವಿದರ ದುರ್ಮರಣ

ಮೃತರು ಹಾವೇರಿ ಜಿಲ್ಲೆಯ ಸವಣೂರು ಗ್ರಾಮದ ರಬ್ಬಾನಿ ಬ್ಯಾಂಡ್ ಕಂಪನಿಯ ಕಲಾವಿದರು. ಎಲ್ಲಾ ಕಲಾವಿದರು ಹಿರೇಕೆರೂರಿನಲ್ಲಿ ಉರುಸ್ ಕಾರ್ಯಕ್ರಮಕ್ಕೆ ತೆರಳಿದ್ದರು. ಉರುಸ್ ಕಾರ್ಯಕ್ರಮ ಮುಗಿಸಿ ಸವಣೂರಿಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Vijaya Karnataka Web 28 Mar 2019, 12:09 pm
ಹಾವೇರಿ: ಮಿನಿಬಸ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿರುವ ಘಟನೆ ಹಾವೇರಿ ಹೊರವಲಯದಲ್ಲಿ ನಡೆದಿದೆ.
Vijaya Karnataka Web accident


ಖಾದರ್(45), ರಬ್ಬಾನಿ(50) ಹಾಗೂ ಶಬ್ಬೀರ್ (45) ಮೃತ ದುರ್ದೈವಿಗಳು. ದುರಂತದಲ್ಲಿ 16 ಜನರು ಗಾಯಗೊಂಡಿದ್ದಾರೆ ಮತ್ತು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನ ಹಾವೇರಿಯ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತರು ಹಾವೇರಿ ಜಿಲ್ಲೆಯ ಸವಣೂರು ಗ್ರಾಮದ ರಬ್ಬಾನಿ ಬ್ಯಾಂಡ್ ಕಂಪನಿಯ ಕಲಾವಿದರು. ಎಲ್ಲಾ ಕಲಾವಿದರು ಹಿರೇಕೆರೂರಿನಲ್ಲಿ ಉರುಸ್ ಕಾರ್ಯಕ್ರಮಕ್ಕೆ ತೆರಳಿದ್ದರು. ಉರುಸ್ ಕಾರ್ಯಕ್ರಮ ಮುಗಿಸಿ ಸವಣೂರಿಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಹಾವೇರಿ ಎಸ್ಪಿ ಪರಶುರಾಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ