ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ರಾಣೇಬೆನ್ನೂರ : ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ತಾಲೂಕಿನ ಜೋಯಿಸರಹರಳಹಳ್ಳಿ ಗ್ರಾಮದಲ್ಲಿಸಂಭವಿಸಿದೆ. ಗ್ರಾಮದ ತಿರಕಪ್ಪ ಭೀಮಪ್ಪ ಕೊಳ್ಳೇರ (45) ಮೃತ ರೈತ.

Vijaya Karnataka 26 Oct 2019, 5:00 am
ರಾಣೇಬೆನ್ನೂರ : ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ತಾಲೂಕಿನ ಜೋಯಿಸರಹರಳಹಳ್ಳಿ ಗ್ರಾಮದಲ್ಲಿಸಂಭವಿಸಿದೆ. ಗ್ರಾಮದ ತಿರಕಪ್ಪ ಭೀಮಪ್ಪ ಕೊಳ್ಳೇರ (45) ಮೃತ ರೈತ.
Vijaya Karnataka Web debt farmers suicide
ಸಾಲಬಾಧೆ: ರೈತ ಆತ್ಮಹತ್ಯೆ


ಈತನ ಹೆಸರಿನಲ್ಲಿ3.20 ಎಕರೆ ಜಮೀನಿದ್ದು ಅದರಲ್ಲಿಗೋವಿನಜೋಳ ಮತ್ತು ಹತ್ತಿ ಬೆಳೆದಿದ್ದನು. ಕೃಷಿಗಾಗಿ ಗ್ರಾಮದ ಯೂನಿಯನ್‌ ಬ್ಯಾಂಕಿನಲ್ಲಿ2.75 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ಸಾಲ ಮಾಡಿದ್ದನು. ಕಳೆದ ನಾಲ್ಕೆತ್ರೖದು ವರ್ಷಗಳಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಮೃತನಿಗೆ ಇತ್ತೀಚಿಗೆ ಉಂಟಾದ ಅತಿವೃಷ್ಠಿಯಿಂದಾಗಿ ಹೊಲದಲ್ಲಿಬೆಳೆದಿದ್ದ ಫಸಲು ನಾಶವಾಗಿದೆ. ಇದರಿಂದ ಸಾಲ ತೀರಿಸುವುದು ಹೇಗೆಂಬ ಚಿಂತೆಯಿಂದ ಮನನೊಂದು ಮನೆಯಲ್ಲಿವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರೈತಸಂಘದ ಪ್ರತಿಭಟನೆ:
ಮೃತ ರೈತನ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ತಕ್ಷಣವೇ ಅತನಿಗೆ ಸರಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ರೈತಸಂಘದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಹನುಮಂತಪ್ಪ ದಿವಿಗಿಹಳ್ಳಿ ನೇತೃತ್ವದಲ್ಲಿನಗರದ ಸರಕಾರಿ ಆಸ್ಪತ್ರೆ ಶವಾಗಾರದ ಬಳಿ ಪ್ರತಿಭಟನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ