ಆ್ಯಪ್ನಗರ

ಮಾದಕ ದ್ರವ್ಯ ಜನ ಜಾಗೃತಿ ಅಗತ್ಯ

ಅಕ್ಕಿಆಲೂರು: ಮಾದಕ ದ್ರವ್ಯಗಳ ಬಗೆಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಮಕ್ಕಳು, ಯುವಕರು ಮಾದಕ ದ್ರವ್ಯಗಳತ್ತ ಆಕರ್ಷಿತರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆಡೂರು ಪಿಎಸ್‌ಐ ಮುರುಗೇಶ್‌ ಕಳವಳ ವ್ಯಕ್ತಪಡಿಸಿದರು.

Vijaya Karnataka 5 Jul 2019, 5:00 am
ಅಕ್ಕಿಆಲೂರು: ಮಾದಕ ದ್ರವ್ಯಗಳ ಬಗೆಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಮಕ್ಕಳು, ಯುವಕರು ಮಾದಕ ದ್ರವ್ಯಗಳತ್ತ ಆಕರ್ಷಿತರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆಡೂರು ಪಿಎಸ್‌ಐ ಮುರುಗೇಶ್‌ ಕಳವಳ ವ್ಯಕ್ತಪಡಿಸಿದರು.
Vijaya Karnataka Web drug awareness is essential
ಮಾದಕ ದ್ರವ್ಯ ಜನ ಜಾಗೃತಿ ಅಗತ್ಯ


ಹಳ್ಳಿಬೈಲ್‌ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಡೂರು ಪೊಲೀಸ್‌ ಠಾಣೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮದ್ಯಪಾನದಿಂದ ಕೌಟುಂಬಿಕ ಮತ್ತು ಸಾಮಾಜಿಕ ಸ್ವಾಸ್ಥ್ಯ ಹದಗೆಡಲಿದೆ. ಹಣ, ಗುಣ ಎರಡೂ ಹಾಳಾಗಲಿದ್ದು, ಕುಟುಂಬಗಳು ಬೀದಿಗೆ ಬರಲಿವೆ. ಕುಡಿತ ಸೇರಿದಂತೆ ನಾನಾ ಚಟಗಳಿಂದ ಅದಷ್ಟೋ ಕುಟುಂಬಗಳು ಹಾಳಾಗಿ ಹೋಗಿರುವ ಉದಾಹರಣೆಗಳು ಬೇಕಷ್ಟಿವೆ ಎಂದು ಹೇಳಿದ ಅವರು ಮಾದಕ ದ್ರವ್ಯಗಳ ಬಗೆಗೆ ಅರಿವು ಮೂಡಿಸುವಲ್ಲಿ ವಿದ್ಯಾರ್ಥಿಗಳು ಕಾಳಜಿ ತೋರಬೇಕಿದೆ. ಕೇವಲ ವಿದ್ಯಾರ್ಜನೆಗೆ ಸೀಮಿತವಾಗದೇ ಸಾಮಾಜಿಕ ಕಳಕಳಿ ಪ್ರದರ್ಶಿಸುವಂತೆ ಕಿವಿಮಾತು ಹೇಳಿದರು.

ಪ್ರಾಚಾರ್ಯ ಕೆ.ಆರ್‌.ರಂಗನಾಥ ಮಾತನಾಡಿ, ಸ್ವಸ್ಥ ಸಮಾಜದಿಂದ ಮಾತ್ರವೇ ಸ್ವಸ್ಥ ರಾಷ್ಟ್ರ ನಿರ್ಮಾಣ ಸಾಧ್ಯವಿದೆ. ರಾಷ್ಟ್ರ ನಿರ್ಮಾಣದಲ್ಲಿ ಯುವ ಸಮೂಹದ ಪಾತ್ರ ಮಹತ್ವದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಯುವಕರನ್ನು ದಾರಿ ತಪ್ಪಲು ಬಿಡದೇ ಸೂಕ್ತ ಮಾರ್ಗದರ್ಶನದ ಮೂಲಕ ಸರಿ ದಾರಿಯಲ್ಲಿ ಮುನ್ನೆಡೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಪೊಲೀಸ್‌ ಇಲಾಖೆಯ ಎಸ್‌.ಜಿ.ಸೋಮಸಾಗರ, ಕರಬಸಪ್ಪ ಗೊಂದಿ, ಬಸವರಾಜ್‌ ಬಿಕ್ಕಣ್ಣನವರ ಸೇರಿದಂತೆ ವಸತಿ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ