ಆ್ಯಪ್ನಗರ

ಕಾರ್ಯಕರ್ತರ ಶ್ರಮಕ್ಕೆ ತಕ್ಕ ಫಲ

ಹಾವೇರಿ: ಪಕ್ಷ ದ ಕಾರ್ಯಕರ್ತರು, ಮುಖಂಡರು ಸರಣಿ ಸಭೆ ಸೇರಿದಂತೆ ಪಕ್ಷ ದ ವರಿಷ್ಠರ ಸೂಚನೆಯ ಮೇರೆಗೆ ಸತತ ಆರು ತಿಂಗಳ ಕಾಲ ಮನೆ ಬಿಟ್ಟು ಕ್ಷೇತ್ರದಾದ್ಯಂತ ಕೇಂದ್ರ ಸರ್ಕಾರದ ಸಾಧನೆಗಳು, ಪ್ರಸ್ತುತ ಬಿಜೆಪಿಯ ಅಗತ್ಯತೆಯನ್ನು ಮತದಾರರಿಗೆ ಮನದಟ್ಟು ಮಾಡಿದ ಪರಿಣಾಮದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಚಿಂತನೆಯ ಫಲವಾಗಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ದ ಅಭ್ಯರ್ಥಿ ಶಿವಕುಮಾರ ಉದಾಸಿ ಅವರು ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ ಎಂದು ಪಕ್ಷ ದ ಲೋಕಸಭಾ ಕ್ಷೇತ್ರದ ಸಂಚಾಲಕ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ಧರಾಜ ಕಲಕೋಟಿ ಹರ್ಷ ವ್ಯಕ್ತಪಡಿಸಿದ್ದಾರೆ.

Vijaya Karnataka 27 May 2019, 5:00 am
ಹಾವೇರಿ: ಪಕ್ಷ ದ ಕಾರ್ಯಕರ್ತರು, ಮುಖಂಡರು ಸರಣಿ ಸಭೆ ಸೇರಿದಂತೆ ಪಕ್ಷ ದ ವರಿಷ್ಠರ ಸೂಚನೆಯ ಮೇರೆಗೆ ಸತತ ಆರು ತಿಂಗಳ ಕಾಲ ಮನೆ ಬಿಟ್ಟು ಕ್ಷೇತ್ರದಾದ್ಯಂತ ಕೇಂದ್ರ ಸರ್ಕಾರದ ಸಾಧನೆಗಳು, ಪ್ರಸ್ತುತ ಬಿಜೆಪಿಯ ಅಗತ್ಯತೆಯನ್ನು ಮತದಾರರಿಗೆ ಮನದಟ್ಟು ಮಾಡಿದ ಪರಿಣಾಮದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಚಿಂತನೆಯ ಫಲವಾಗಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ದ ಅಭ್ಯರ್ಥಿ ಶಿವಕುಮಾರ ಉದಾಸಿ ಅವರು ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ ಎಂದು ಪಕ್ಷ ದ ಲೋಕಸಭಾ ಕ್ಷೇತ್ರದ ಸಂಚಾಲಕ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ಧರಾಜ ಕಲಕೋಟಿ ಹರ್ಷ ವ್ಯಕ್ತಪಡಿಸಿದ್ದಾರೆ.
Vijaya Karnataka Web effect of workers efforts
ಕಾರ್ಯಕರ್ತರ ಶ್ರಮಕ್ಕೆ ತಕ್ಕ ಫಲ


ಕಳೆದ ಬಾರಿಗಿಂತಲೂ ಈ ಬಾರಿ ಒಂದು ಲಕ್ಷ ಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿರುವ ಉದಾಸಿ ಅವರು ಕ್ಷೇತ್ರದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸಿದ ವಿಷಯಗಳು ಜನರ ಮನಸ್ಸಿನಲ್ಲಿ ಉಳಿದಿವೆ. ಈ ಕಾರಣದಿಂದಲೇ ಅವರು ಮೂರನೇ ಬಾರಿಗೆ ಯಾವುದೇ ಅಡೆ-ತಡೆಯಿಲ್ಲದೇ ಸಂಸತ್‌ ಪ್ರವೇಶಿಸಿದ್ದಾರೆ ಎಂದರು.

ಪಕ್ಷ ದ ತತ್ವ ಹಾಗೂ ಸಿದ್ಧಾಂತಗಳ ಮೇಲೆ ಕ್ಷೇತ್ರದ ಜನರು ನಂಬಿಕೆ ಇಟ್ಟುಕೊಂಡಿರುವುದೇ ಈ ಗೆಲುವಿನ ಹಿಂದಿರುವ ಗುಟ್ಟು ಭಾರತೀಯ ಜನತಾ ಪಾರ್ಟಿ ಯಾವತ್ತೂ ಜನರ ಆಶೋತ್ತರಗಳ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲು ಬಯಸುತ್ತೇವೆ. ರಾಜ್ಯ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಆಗಿರುವ ಜೆಡಿಎಸ್‌-ಕಾಂಗ್ರೆಸ್‌ ಅಪವಿತ್ರ ಮೈತ್ರಿ ವಿರುದ್ಧ ಜನ ತೀರ್ಪು ನೀಡಿದ್ದು, ಕ್ಷೇತ್ರದಲ್ಲಿ ಎರಡೂ ಪಕ್ಷ ಗಳಿಗೆ ನೆಲೆ ಇಲ್ಲದಂತಾಗಿದೆ. ಪಕ್ಷ ದ ಈ ಅಭೂತಪೂರ್ವ ಜಯಕ್ಕೆ ಕಾರಣರಾದ ಕಾರ್ಯಕರ್ತರು, ಅಭಿಮಾನಿಗಳಿಗೆ, ಮುಖಂಡರಿಗೆ ಹಾಗೂ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಸದ್ಯ ನಡೆದಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ದ ಅಭ್ಯರ್ಥಿಗಳು ಜಯಗಳಿಸಲಿದ್ದು, ಬ್ಯಾಡಗಿ ಹಾಗೂ ಶಿಗ್ಗಾವಿ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ವಿತವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ