ಆ್ಯಪ್ನಗರ

ಗ್ರಾಮಾಭಿವೃದ್ಧಿಗೆ ಅಧಿಕಾರ ಸದ್ಬಳಕೆ: ಬೊಮ್ಮಾಯಿ

ಶಿಗ್ಗಾವಿ: ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಜತೆಗೆ ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಣೆಗೊಳ್ಳಬೇಕು. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಕೇಂದ್ರ-ರಾಜ್ಯ ಸರಕಾರದ ಕೆಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ತಮ್ಮ ಅಧಿಕಾರ ಸದ್ಬಳಕೆ ಮಾಡುತ್ತೇನೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

Vijaya Karnataka 21 Jun 2019, 5:00 am
ಶಿಗ್ಗಾವಿ: ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಜತೆಗೆ ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಣೆಗೊಳ್ಳಬೇಕು. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಕೇಂದ್ರ-ರಾಜ್ಯ ಸರಕಾರದ ಕೆಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ತಮ್ಮ ಅಧಿಕಾರ ಸದ್ಬಳಕೆ ಮಾಡುತ್ತೇನೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
Vijaya Karnataka Web HVR-20SGN-3


ಬುಧವಾರ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ತಾಪಂ-ಜಿಪಂ, ಗ್ರಾಪಂಗಳ ಆಶ್ರಯದಲ್ಲಿ ನಡೆದ ಸ್ವಚ್ಚ ಮೇವ ಜಯತೇ ಮತ್ತು ಜಲಾಮೃತ ಕಾರ್ಯಕ್ರಮದ ಅಂಗವಾಗಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದಲ್ಲಿನ ಕಾಂಕ್ರಿಟ್‌ ರಸ್ತೆ, ಚರಂಡಿ, ಸ್ಮಶಾನ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಆಯೋಜಿಸಲಾಗಿದೆ ಎಂದರು.

ಕೈಗೊಳ್ಳುವ ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಹೆಚ್ಚಿನ ಕೆಲಸ ನೀಡಬೇಕು. ಸರಿಯಾದ ವೇತನ ನೀಡಬೇಕು. ಅದರ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಗ್ರಾಮದ ಸ್ವಚ್ಛತೆಗೆ ಜನ ಜಾಗೃತಿ ವಾಹನ ಬಿಡಲಾಗುತ್ತಿದ್ದು, ಪ್ರತಿಯೊಂದು ಮನೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಈ ವಾಹನದಲ್ಲಿ ಹಾಕಬೇಕು. ಮನೆಯಲ್ಲಿ ಕಸದ ಡೆಬ್ಬಿಗಳನ್ನು ನೀಡಲಾಗಿದ್ದು, ಅವುಗಳಲ್ಲಿ ಕಸ ಹಾಕುವ ಮೂಲಕ ಮನೆಗಳ ಮುಂದಿನ ಅಂಗಳಗಳನ್ನು, ರಸ್ತೆ, ಚರಂಡಿಗಳನ್ನು ಸ್ವಚ್ಚವಾಗಿ ಇಟ್ಟಕೊಳ್ಳಬೇಕು.

ತ್ಯಾಜ್ಯ ವಸ್ತುಗಳನ್ನು ರಸ್ತೆ, ಚರಂಡಿಗಳಲ್ಲಿ ಹಾಕಬಾರದು. ಗ್ರಾಮದ ಸ್ವಚ್ಛತೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಮೂಡಬೇಕು. ಸ್ವಚ್ಛತೆಯಲ್ಲಿ ಶಿಸ್ತು ಮತ್ತು ಆರೋಗ್ಯ ಬರಲು ಸಾಧ್ಯವಿದೆ ಎಂದು ಬೊಮ್ಮಾಯಿ ತಿಳಿಸಿದರು.

ಸಿಂಧಗಿಮಠದ ಶಂಭುಲಿಂಗ ಶಿವಾಚಾರ್ಯ ಶ್ರೀಗಳು ಸಾನಿಧ್ಯ ವಹಿಸಿದ್ದರು. ಎಪಿಎಂಸಿ ಸದಸ್ಯ ರುದ್ರಗೌಡ ಪಾಟೀಲ,ಬಸವಂತಪ್ಪ ಸವಣೂರ, ಜಿಪಂ.ಸದಸ್ಯೆ ಶೋಭಾ ಗಂಜೀಗಟ್ಟಿ, ತಾಪಂ.ಅಧ್ಯಕ್ಷೆ ಪಾರವ್ವ ಆರೇರ, ಗ್ರಾಪಂ. ಅಧ್ಯಕ್ಷೆ ಲಲಿತಾ ಬೊಮ್ಮನಹಳ್ಳಿ, ಉಪಾಧ್ಯಕ್ಷ ಬೀರಪ್ಪ ನಡಹಳ್ಳಿ, ಸದಸ್ಯರಾದ ಸುರೇಶ ಗೊಳಣ್ಣವರ, ಚಂದ್ರು ಗೊಳಣ್ಣವರ, ವೀರಭದ್ರಪ್ಪ ಹುಣಸಿಕಟ್ಟಿ, ಮಲ್ಲಿಕಾರ್ಜುನ ಗುಳೇದ, ನೀಲವ್ವ ಹರಿಜನ, ನೊರಜಾನ ಡಾಣೆಭಾಗ, ತಾಪಂ. ಇಒ ಚಂದ್ರು ಪೂಜಾರ, ಪಿಡಿಒ ಶಾಂತಿನಾಥ ಜೈನ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ