ಆ್ಯಪ್ನಗರ

ಪರಿಸರ ಸಂರಕ್ಷ ಣೆ ನಮ್ಮಲ್ಲರ ಕರ್ತವ್ಯ

ರಟ್ಟೀಹಳ್ಳಿ: ಅರಣ್ಯ ನಾಶದಿಂದ ತಾಪಮಾನ ಹೆಚ್ಚಾಗುತ್ತಿದೆ. ಮನುಷ್ಯರು ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿರುವುದರಿಂದ ಮಳೆಗಾಲದಲ್ಲೂ ಮಳೆ ಬರುತ್ತಿಲ್ಲ. ಉತ್ತಮ ಗಾಳಿ ಮಳೆ ಬರಬೇಕಾದರೆ ಗಿಡಮರಗಳು ಬೇಕು. ಪರಿಸರ ಸಂರಕ್ಷ ಣೆ ಮಾಡುವುದು ನಮ್ಮಲ್ಲರ ಕರ್ತವ್ಯ ಎಂದು ಗ್ರಾ.ಪಂ.ಅಧ್ಯಕ್ಷ ರಾಜು ಸುಣಗಾರ ಹೇಳಿದರು.

Vijaya Karnataka 17 Jun 2019, 5:00 am
ರಟ್ಟೀಹಳ್ಳಿ: ಅರಣ್ಯ ನಾಶದಿಂದ ತಾಪಮಾನ ಹೆಚ್ಚಾಗುತ್ತಿದೆ. ಮನುಷ್ಯರು ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿರುವುದರಿಂದ ಮಳೆಗಾಲದಲ್ಲೂ ಮಳೆ ಬರುತ್ತಿಲ್ಲ. ಉತ್ತಮ ಗಾಳಿ ಮಳೆ ಬರಬೇಕಾದರೆ ಗಿಡಮರಗಳು ಬೇಕು. ಪರಿಸರ ಸಂರಕ್ಷ ಣೆ ಮಾಡುವುದು ನಮ್ಮಲ್ಲರ ಕರ್ತವ್ಯ ಎಂದು ಗ್ರಾ.ಪಂ.ಅಧ್ಯಕ್ಷ ರಾಜು ಸುಣಗಾರ ಹೇಳಿದರು.
Vijaya Karnataka Web environmental protection is our duty
ಪರಿಸರ ಸಂರಕ್ಷ ಣೆ ನಮ್ಮಲ್ಲರ ಕರ್ತವ್ಯ


ಅವರು ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆದ ಜಿ.ಪಂ.ಹಾವೇರಿ, ತಾ.ಪಂ.ಹಿರೇಕೆರೂರು, ಸಾಮಾಜಿಕ ಅರಣ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಮೇವ ಜಯತೇ, ಜಲಾಮೃತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರ ಪರಿಸರ ಉಳಿಸಿ ಬೆಳೆಸಬೇಕೆಂದು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ ಅದು ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಕಾರ ಮುಖ್ಯವಾಗುತ್ತದೆ ಎಂದರು.

ಪಿಡಿಒ ಗಿರೀಶ ಓಲೇಕಾರ ಮಾತನಾಡಿ, ಪರಿಸರ ಉತ್ತಮವಾಗಿದೆ ನಮ್ಮಲ್ಲರಿಗೂ ಅನುಕೂಲ. ಉತ್ತಮ ಪರಿಸರ ಇದ್ದರೆ ಆರೋಗ್ಯ ಉತ್ತಮವಾಗಿರುತ್ತದೆ. ಸರ್ಕಾರ, ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಗಿಡಮರಗಳನ್ನು ಬೆಳೆಸುವುದಕ್ಕೆ ಮುಂದಾದರೆ ಪರಿಸರವನ್ನು ಕಾಪಾಡಿದಂತಾಗುವುದಿಲ್ಲ. ಸಾರ್ವಜನಿಕರೆಲ್ಲರೂ ಇದಕ್ಕೆ ಕೈಜೋಡಿಸಬೇಕು. ಪರಿಸರದಲ್ಲಿ ಗಿಡಮರಗಳನ್ನು ಬೆಳೆಸುವುದರ ಜತೆಗೆ ಸ್ವಚ್ಛತೆ ಕಾಪಾಡಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷ ರು, ಸದಸ್ಯರು, ಗ್ರಾ.ಪಂ.ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ